Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೃದಯಾಘಾತ ಪ್ರಕರಣಗಳ ಏರಿಕೆ|...

ಹೃದಯಾಘಾತ ಪ್ರಕರಣಗಳ ಏರಿಕೆ| ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ: ಡಾ. ಯೂಸುಫ್ ಕುಂಬ್ಳೆ

ವಾರ್ತಾಭಾರತಿವಾರ್ತಾಭಾರತಿ14 July 2025 8:59 PM IST
share
ಹೃದಯಾಘಾತ ಪ್ರಕರಣಗಳ ಏರಿಕೆ| ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ: ಡಾ. ಯೂಸುಫ್ ಕುಂಬ್ಳೆ

ಮಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಹಠಾತ್ ಹೃದಯಾಘಾತಗಳಿಂದ ಯುವ ಜನರಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಾಗೃತಿ ಮತ್ತು ಮುನ್ನೆಚ್ಚರಿಕೆ ಅಗತ್ಯ ಎಂದು ಹೃದಯ ತಜ್ಞ, ಮಂಗಳೂರು ಇಂಡಿಯಾನಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಹೇಳಿದರು.

ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಹೃದಯಾಘಾತ ಪ್ರಕರಣ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು ಎಂದರು.

ಆರೋಗ್ಯವಾಗಿರುವಂತೆ ಕಾಣುತ್ತಿದ್ದ ಅನೇಕರು ಏಕಾಏಕಿ ಸಾವನ್ನಪ್ಪುತ್ತಿರುವುದು ಆತಂಕಕಾರಿ. ಬದ ಲಾದ ಜೀವನ ಪದ್ಧತಿಯಿಂದಾಗಿ ಯುವ ಸಮುದಾಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗು ತ್ತಿದೆ. ದೈಹಿಕ ಚಟುವಟಿಕೆಗಳು, ವ್ಯಾಯಾಮದ ಕೊರತೆ ಇಂದು ಅತಿಯಾಗಿ ಕಾಡುತ್ತಿದೆ ಎಂದು ಹೇಳಿದ ಅವರು, ಶಾಲೆ ಕಾಲೇಜುಗಳಲ್ಲಿ ದೈಹಿಕ ಚಟುವಟಿಕೆಗಳಿಗೆ ಆಧ್ಯತೆ ನೀಡಬೇಕು. ಸೈಕ್ಲಿಂಗ್ ನಡೆಸುವ ವರಿಗೆ ಪ್ರತ್ಯೇಕ ಟ್ರ್ಯಾಕ್ ನಿರ್ಮಿಸಿ ಆರೋಗ್ಯ ಕಾಯ್ದುಕೊಳ್ಳಲು ಸರಕಾರವೇ ಕ್ರಮ ವಹಿಸಬೇಕು ಎಂದರು.

ಫಾಸ್ಟ್ ಫುಡ್ ಸೇವನೆಯು ತೀವ್ರವಾಗಿ ಹೆಚ್ಚಾಗಿದ್ದು, ಇದರಲ್ಲಿ, ಕೃತಕ ಪದಾರ್ಥಗಳು ಇದ್ದು ಆರೋಗ್ಯಕ್ಕೆ ಹಾನಿಕಾರಕವಾಗುತ್ತವೆ. ಮನೆಯ ಅಡುಗೆಗೆ ಹೆಚ್ಚಿನ ಆದ್ಯತೆೆ ನೀಡಬೇಕು. ಅತಿಯಾದ ಎಣ್ಣೆ ಪದಾರ್ಥ ಸೇವನೆಯೂ ಕೂಡ ಅಪಾಯಕಾರಿ. ಮೀನು ಸೇವನೆ ಹೃದಯದ ಆರೋಗ್ಯಕ್ಕೆ ಸೂಕ್ತವಾಗಿದೆ ಎಂದರು.

ಧೂಮಪಾನ, ಮದ್ಯಪಾನ, ಮಾದಕ ವಸ್ತು ಸೇವನೆ, ಕೆಲಸದ ಒತ್ತಡ, ವೈಯಕ್ತಿಕ ಜೀವನದ ಉದ್ವಿಗ್ನತೆ, ಶುಗರ್, ರಕ್ತದೊತ್ತಡ, ಕೊಬ್ಬು, ಕೊಲೆಸ್ಟ್ರಾಲ್ ಮತ್ತು ಕುಟುಂಬದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ ಎಚ್ಚರಿಕೆ ವಹಿಸಬೇಕು. ನಿಯಮಿತ ವ್ಯಾಯಾಮದೊಂದಿಗೆ ಸಮಗ್ರ ಆರೋಗ್ಯ ತಪಾಸಣೆ, ರಕ್ತ ಪರೀಕ್ಷೆ, ಕ್ರಿಯಾಟಿನಿನ್, ಲಿಪಿಡ್‌ಪ್ರೊಫೈಲ್, ಇಸಿಜಿ, ಎಕೋಕಾರ್ಡಿಯೋಗ್ರಾಂ, ಟ್ರೆಡ್‌ಮಿಲ್ ಟೆಸ್ಟ್ ನಡೆಸಬೇಕು ಎಂದರು.

‘ಲವ್ ಯೂವರ್ ಹಾರ್ಟ್’ ವಿಶೇಷ ಪ್ಯಾಕೇಜ್

ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಿಜಯ್‌ಚಂದ್ರನ್ ಮಾತನಾಡಿ, ಮಂಗಳೂರು ಇಂಡಿಯಾನಾ ಆಸ್ಪತ್ರೆಯು ಜನರಲ್ಲಿ ಹೃದಯದ ಜಾಗೃತಿ ಮೂಡಿಸಲು ‘ಲವ್ ಯೂವರ್ ಹಾರ್ಟ್’ ಪ್ಯಾಕೇಜ್ ಜಾರಿಗೊಳಿಸಿದೆ. 1999ರೂ.ಗೆ ಹೃದಯಕ್ಕೆ ಸಂಬಂಧಿಸಿದ ಸಮಗ್ರ ತಪಾಸಣೆ ನಡೆಸಲಾ ಗುತ್ತದೆ ಎಂದರು. ಜು. 15ರಿಂದ 31ರವರೆಗೆ ವಿಶೇಷ ಕೊಡುಗೆ ಲಭ್ಯವಿದೆ ಎಂದರು.

"ಇಂದಿನ ಯುವಜನತೆ ನಿದ್ರೆಯ ಕೊರತೆ ಎದುರಿಸುತ್ತಿದೆ. ಯುವಕರು ತಡ ರಾತ್ರಿಯ ವರೆಗೆ ಮೊಬೈಲ್ ಬಳಸುವುದು, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯು ಕಾರಣದಿಂದಾಗಿ ನಿದ್ರೆಯ ಕೊರತೆ ಯಾಗುತ್ತಿದೆ. ನಿದ್ರಾಹೀನತೆಯೂ ಕೂಡ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬಿರುತ್ತದೆ. ಇದರೊಂದಿಗೆ ಎಸಿ ಹಾಗೂ ಕೃತಕ ಪರಿಸರದಲ್ಲಿ ದಿನಕಳೆಯುತ್ತಿರುವವರು ನೀರಿನ ಅವಶ್ಯಕತೆಯ ಅರಿವಿಲ್ಲದೆ ಕಡಿಮೆ ನೀರು ಸೇವಿಸುತ್ತಿದ್ದಾರೆ. ಇದು ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟುಮಾಡಿ ಹೃದಯಾಘಾತ ಅಥವಾ ಸ್ತಂಭನಕ್ಕೆ ಕಾರಣವಾಗಬಹುದು".

-ಡಾ. ಯೂಸುಫ್ ಕುಂಬ್ಳೆ, ವ್ಯವಸ್ಥಾಪಕ ನಿರ್ದೇಶಕ, ಇಂಡಿಯಾನಾ ಆಸ್ಪತ್ರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X