Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಕರಾವಳಿ...

ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಕರಾವಳಿ ಮರಳು ನೀತಿ ಜಾರಿಗೆ ಬರಲಿ: ವಸಂತ ಆಚಾರಿ

ವಾರ್ತಾಭಾರತಿವಾರ್ತಾಭಾರತಿ14 July 2025 11:07 PM IST
share
ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಕರಾವಳಿ ಮರಳು ನೀತಿ ಜಾರಿಗೆ ಬರಲಿ: ವಸಂತ ಆಚಾರಿ

ಕೊಣಾಜೆ: ಒಂದು ತಿಂಗಳಿಂದ ಮರಳು ಮತ್ತು ಕೆಂಪು ಕಲ್ಲು ನಿಷೇಧದಿಂದ ಜಿಲ್ಲೆಯ ಯಾವುದೇ ನಿರ್ಮಾಣ ಯೋಜನೆಗಳು ನಡೆಯದೆ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಇಂತಹ ಅಕ್ರಮ ಮರಳುಗಾರಿಕೆಗೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಆರಂಭ ದೊರೆಯಿತು. ಅಕ್ರಮ ದಂಧೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸಿಗರ ಸಮಾನ ಪಾಲು ಇದೆ. ಕಾರ್ಮಿಕರು ಕೆಲಸವಿಲ್ಲದೆ ಜೀವನ ನಿರ್ವಹಿಸಲಾಗದೆ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಪೇಡರೇಶನ್ ನ ಜಿಲ್ಲೆಯ ಅಧ್ಯಕ್ಷರಾದ ವಸಂತ ಆಚಾರಿ ಅವರು ಹೇಳಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ನಾಟೆಕಲ್ ನಲ್ಲಿರುವ ತಾಲೂಕು ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳು ಅಭಾವದ ಈ ಪರಿಸ್ಥಿತಿಗೆ ಇಲ್ಲಿನ ಬಿಜೆಪಿಯ ಸಂಸದರು ಮತ್ತು ಶಾಸಕರು ನೇರ ಹೊಣೆಯಾಗಿದ್ದಾರೆ. ಕಳೆದ ಹಲವು ಮೂರು ದಶಕಗಳಿಂದ ಜಿಲ್ಲೆಯಿಂದ ಗೆದ್ದು ಹೋದಂತಹ ಸಂಸದರು ಎಂಎಲ್ಎಗಳು ಇದರ ಬಗ್ಗೆ ಇಷ್ಟರವರೆಗೆ ಚಕಾರವೆತ್ತುತ್ತಿಲ್ಲ. ಆದ್ದರಿಂದ ಅವರಿಗೆ ಇದನ್ನು ಪ್ರತಿಭಟಿಸುವ ಯಾವುದೇ ನೈತಿಕತೆ ಇಲ್ಲ ಎಂದರು. ಇಂತಹ ಬೆಳವಣಿಗೆಗಳಿಂದ ಜಿಲ್ಲೆಯ ಲಕ್ಷಕ್ಕೂ ಮಿಕ್ಕಿದ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ಅಂತಹ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ರೂಪಾಯಿ 10,000 ಪರಿಹಾರ ಧನ ನೀಡಬೇಕೆಂದು ಅವರು ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾರ್ ಮಾತನಾಡಿ, ಜಿಲ್ಲೆಯಲ್ಲಿ ಅವ್ಯಾವತವಾಗಿ ಅಡೆತಡೆ ಇಲ್ಲದೆ ನಡೆಯುತ್ತಿದ್ದ ಅಕ್ರಮ ದಂಧೆಗಳಿಗೆ ಈಗ ಅಧಿಕಾರವಹಿಸಿಕೊಂಡಿರುವ ದಕ್ಷ ಮತ್ತು ನಿಷ್ಠಾವಂತ ಪೊಲೀಸ್ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಿರುವ ಕಾರಣ ಮರಳು ಮತ್ತು ಕೆಂಪು ಕಲ್ಲು ಅಭಾವ ಉಂಟಾಗಿದೆ. ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯೂ ಅಕ್ರಮವಾಗಿ ಅನೇಕ ವರ್ಷಗಳಿಂದ ನಡೆಯುತ್ತಲೇ ಇದೆ ಇದೊಂದು ಪ್ರಬಲ ಮಾಫಿಯವಾಗಿದೆ . ಇದರ ನಿಯಂತ್ರಣ ಅಗತ್ಯವಾಗಿ ಆಗಬೇಕಿದೆ. ಆದರೆ ಇಂತಹ ದಿಡೀರ್ ಕ್ರಮಗಳನ್ನು ಕೈಗೊಳ್ಳುವಾಗ ದೂರ ದೃಷ್ಟಿಯ ಯೋಜನೆಯನ್ನು ಹಮ್ಮಿಕೊಂಡಿದ್ದರೆ ಒಳ್ಳೆಯದು. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು ಕಾಮಗಾರಿಗಳು ಸರಾಗವಾಗಿ ನಡೆಯುವಂತೆ ಕಾರ್ಮಿಕರ ಉದ್ಯೋಗ ನಷ್ಟವಾಗದಂತೆ ಸರಳವಾಗಿ ಕಚ್ಚಾ ವಸ್ತುಗಳು ಪೂರೈಕೆ ಮಾಡಲು ಸಾಧ್ಯವಾಗಬೇಕು ಎಂದರು.

ಮುಖಂಡರಾದ ಯೋಗೀಶ್ ಜಪ್ಪಿನಮೊಗರು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೊಟ್ಟು, ಕಟ್ಟಡ ಕಾರ್ಮಿಕರ ಸಂಘಟನೆಯ ಉಳ್ಳಾಲ ತಾಲೂಕು ಅಧ್ಯಕ್ಷರಾದ ಜನಾರ್ಧನ ಕುತ್ತಾರು ಮಾತನಾಡಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೃಷ್ಣಪ್ಪ ಸಾಲಿಯಾನ್ , ಶೇಕರ್ ಕುಂದರ್, ತಾಲೂಕು ಕಾರ್ಯದರ್ಶಿ ರಿಜ್ವಾನ್ ಹರೇಕಳ ಉಪಸ್ಥಿತದ್ದರು. ಸಭೆ ನೇತೃತ್ವವನ್ನು ಇಬ್ರಾಹಿಂ ಮದಕ, ಜಯಂತ ನಾಯಕ್, ನವೀನ್ ಗಿರಿಯ ಮೂಲೆ, ಸುಧಾಕರ್ ಆಳ್ವಾ. ಮುಂತಾದವರು ವಹಿಸಿದ್ದರು. ರೋಹಿದಾಸ್ ಭಟ್ನಗರ ಸ್ವಾಗತಿಸಿ, ನಿರೂಪಿಸಿದರು , ರಾಮಚಂದ್ರ ಪಜೀರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X