ಮಂಗಳೂರಿನ ನೂತನ ಡಿಸಿಪಿಯಾಗಿ ಮಿಥುನ್ ನೇಮಕ

ಮಂಗಳೂರು, ಜು.17: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಮಿಥುನ್ ಎಚ್.ಎನ್. ಅವರನ್ನು ನೇಮಕಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ.
ಜು.14 ರಂದು ನಕ್ಸಲ್ ನಿಗ್ರಹ ಪಡೆಯ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ನೇಮಕ ಮಾಡಲಾಗಿತ್ತು. ಈ ಆದೇಶ ರದ್ದುಪಡಿಸಿ ಅದೇ ಹುದ್ದೆಯಲ್ಲಿ ಮುಂದುವರಿಸಿದೆ.
ಮಿಥುನ್ ಎಚ್.ಎನ್.ಅವರು ಉಡುಪಿ ಕರಾವಳಿ ಕಾವಲು ಪಡೆಯ ಎಸ್ಪಿಯಾಗಿದ್ದರು. ಈ ಹಿಂದೆ ಡಿಸಿಪಿಯಾಗಿದ್ದ ಸಿದ್ದಾರ್ಥ ಗೋಯಲ್ ಅವರನ್ನು ಬಾಗಲಕೋಟೆ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ.
Next Story





