Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೀನುಗಾರಿಕೆಯಿಂದ ಪೌಷ್ಠಿಕಾಂಶ ಭದ್ರತೆ:...

ಮೀನುಗಾರಿಕೆಯಿಂದ ಪೌಷ್ಠಿಕಾಂಶ ಭದ್ರತೆ: ಡಾ. ಸುಶಾಂತ್ ಕುಮಾರ್ ರೈ

ವಾರ್ತಾಭಾರತಿವಾರ್ತಾಭಾರತಿ26 July 2025 7:10 PM IST
share
ಮೀನುಗಾರಿಕೆಯಿಂದ ಪೌಷ್ಠಿಕಾಂಶ ಭದ್ರತೆ: ಡಾ. ಸುಶಾಂತ್ ಕುಮಾರ್ ರೈ

ಮಂಗಳೂರು : ಮೀನುಗಾರಿಕೆ ಲಕ್ಷಾಂತರ ಜನರಿಗೆ ಜೀವನೋಪಾಯವನ್ನು ಕಲ್ಪಿಸಿರುವುದು ಮಾತ್ರ ವಲ್ಲದೆ, ಆಹಾರದ ಪೌಷ್ಠಿಕಾಂಶದ ಭದ್ರತೆಯನ್ನು ಒದಗಿಸಿದೆ ಎಂದು ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲ(ಕೆವಿಎಎಫ್‌ಎಸ್‌ಯು)ಯದ ಆಡಳಿತ ಮಂಡಳಿಯ ಸದಸ್ಯ ಡಾ. ಸುಶಾಂತ್ ಕುಮಾರ್ ರೈ ಹೇಳಿದ್ದಾರೆ.

ಎಕ್ಕೂರಿನ ಮೀನುಗಾರಿಕಾ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಪಶು ವೈದ್ಯಕೀಯ, ಪಶು, ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿವಿ, ಮಂಗಳೂರು ಮೀನುಗಾರಿಕಾ ಕಾಲೇಜಿನ ಜಲ ಕೃಷಿ ವಿಭಾಗ, ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ಹಾಗೂ ವಿವಿಧ ಸಹ ಸಂಸ್ಥೆಗಳ ಸಹಯೋಗ ದಲ್ಲಿ ಆಯೋಜಿಸಲಾದ ಮೀನು ಕೃಷಿಕರ ದಿನಾಚರಣೆ ಮತ್ತು ಗುಣಮಟ್ಟದ ಮೀನುಮರಿ ಉತ್ಪಾದನೆಯಲ್ಲಿ ಸವಾಲು ಮತ್ತು ಅವಕಾಶಗಳ ಕುರಿತಂತೆ ಆಯೋಜಿಸಲಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಯೋಗಾಲಯಗಳಲ್ಲಿ ವಿಜ್ಞಾನಿಗಳು ಮಾಡುವ ಸಂಶೋಧನೆಗಳು ಮೀನು ಕೃಷಿಕರನ್ನು ತಲುಬೇಕು. ಇದು ಗ್ರಾಮೀಣ ಪ್ರದೇಶಗಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿ ಹಾಗೂ ರೋಗಗಳ ನಿಯಂತ್ರಣ ಹಾಗೂ ಉದ್ಯಮಶೀಲತೆಯ ಗುರಿಯನ್ನು ಸಾಧಿಸಲು ಪೂರಕವಾಗಿರಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿವಮೊಗ್ಗ ಜಿಲ್ಲೆಯ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಿರೇಶ್ ಒ. ಅವರು ಮಾತನಾಡಿ, ಉತ್ತರ ಕರ್ನಾಟಕದ ಮೀನು ಕೃಷಿಕರಿಗೆ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಶೀಘ್ರವೇ ಆಲಮಟ್ಟಿ ಅಣೆಕಟ್ಟು ಎಂದು ಕರೆಯಲ್ಪಡುವ ಲಾಲ್ ಬಹಾದ್ದೂರ್ ಶಾಶ್ತ್ರಿ ಅಣೆಕಟ್ಟಿನ ಬಳಿ ಮೀನು ಸಂತೋನಾತ್ಪತ್ತಿ ಕೇಂದ್ರ ಸ್ಥಾಪಿಸಲಿದೆ ಎಂದರು.

ಇದಕ್ಕಾಗಿ ೨೫ ಎಕರೆ ಭೂಮಿ ಮೀಸಲಿಡಲಾಗಿದ್ದು, ೧೩ ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆಯಾಗಲಿದೆ. ಈ ಕೇಂದ್ರ ಸ್ಥಾಪನೆಯಾದರೆ ೫೦ ಕೋಟಿ ಮೀನು ಮೊಟ್ಟೆಗಳನ್ನು ಉತ್ಪಾದಿಸಲು ಸಾಧ್ಯವಾಗಲಿದೆ. ಆಲಮಟ್ಟಿ ಅಣೆಕಟ್ಟಿನ ಬಳಿ ೨೫ ಎಕರೆ ಭೂಮಿಯನ್ನು ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್‌ನಿಂದ ಖರೀದಿಸ ಲಾಗಿದೆ. ಯೋಜನೆಗಾಗಿ ಒಟ್ಟು ೧೧೨ ಮೀನು ಸಂತಾನೋತ್ಪತ್ತಿ ಕೊಳಗಳನ್ನು ಹೊಂದಲಿದ್ದು, ಆರಂಭದಲ್ಲಿ ಎರಡು ವರ್ಷಗಳ ಕಾಲ ಮರಿ ಮೀನುಗಳನ್ನು ಬಳಸಲಾಗುತ್ತದೆ. ಬಳಿಕ ಸಂತಾನೋತ್ಪತ್ತಿ ಪ್ರಕ್ರಿಯೆ ಆರಂಭವಾಗಲಿದೆ. ವರ್ಷಕ್ಕೆ ಸುಮಾರು ೫೦ ಕೋಟಿ ಮೀನು ಉತ್ಪಾದನೆಯ ಗುರಿ ಹೊಂದ ಲಾಗಿದೆ. ಇದನ್ನು ಬಾಗಲಕೋಟೆ, ಯಾದಗಿರಿ, ಬೀದರ್ ಮತ್ತು ಹತ್ತಿರದ ಜಿಲ್ಲೆಗಳ ಮೀನು ಕೃಷಿಕರು ಬಳಸಲಿದ್ದಾರೆ ಎಂದು ಅವರು ಹೇಳಿದರು.

ಕೆವಿಎಎಫ್‌ಎಸ್‌ಯುನ ವಿಸ್ತರಣಾ ನಿರ್ದೇಶಕ ಡಾ. ಬಸವರಾಜ ಅವಟಿ, ಪಿಲ್ಲರಿ ಅಕ್ವಾಕಲ್ಚರ್ ಫೌಂಡೇಶನ್‌ನ ಡಾ.ಎಸ್.ಎಂ. ಶಿವಪ್ರಕಾಶ್, ಸೊಸೈಟಿ ಆಫ್ ಫಿಶರೀಸ್ ಮತ್ತು ಲೈಫ್ ಸಾಯನ್ಸ್‌ನ ಡಾ. ಕುಮಾರ್ ನಾಯ್ಕ್, ದ.ಕ. ಜಿಲ್ಲಾ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಯ್ಯ, ಡಾ. ಎಸ್.ಆರ್. ಸೋಮಶೇಖರ ಮೊದಲಾದವರು ಉಪಸ್ಥಿತರಿದ್ದರು.

ಫಿಶರೀಸ್ ಕಾಲೇಜಿನ ಡೀನ್ ಡಾ. ಆಂಜನೇಯಪ್ಪ ಎಚ್.ಎನ್. ಅಧ್ಯಕ್ಷತೆ ವಹಿಸಿದ್ದರು. ಫಿಶರೀಸ್ ಕಾಲೇಜಿನ ಡಾ. ಗಣಪತಿ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರೆ, ಡಾ. ಹೊನ್ನಾನಂದ ಸ್ವಾಗತಿಸಿ ದರು. ಡಾ. ಪ್ರದೀಪ್ ಎಲ್. ದೊಡ್ಡಮನಿ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ಮೀನು ಕೃಷಿಕರಾದ ಮಂಡ್ಯದ ಶಿವಣ್ಣ ಮತ್ತು ಮೂಡಬಿದಿರೆಯ ರಾಜೇಶ್ ಬಿ.ಕೆ. ಅವರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X