Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆದಿದ್ರಾವಿಡ ಹೆಸರು ಕೈಬಿಟ್ಟರೆ ಕಾನೂನು...

ಆದಿದ್ರಾವಿಡ ಹೆಸರು ಕೈಬಿಟ್ಟರೆ ಕಾನೂನು ಹೋರಾಟ: ದ.ಕ. ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ31 July 2025 3:07 PM IST
share
ಆದಿದ್ರಾವಿಡ ಹೆಸರು ಕೈಬಿಟ್ಟರೆ ಕಾನೂನು ಹೋರಾಟ: ದ.ಕ. ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಎಚ್ಚರಿಕೆ

ಮಂಗಳೂರು, ಜು.31: ಪರಿಶಿಷ್ಟ ಜಾತಿ ಪಟ್ಟಿಯ 101 ಉಪ ಜಾತಿಗಳಲ್ಲಿ ಸೇರಿರುವ ಆದಿದ್ರಾವಿಡ ಉಪ ಜಾತಿಯನ್ನು ಕೈಬಿಡದೆ ಅದರಂತೆಯೇ ಒಳ ಮೀಸಲಾತಿ ಜಾರಿಗೆ ತರಬೇಕು. ಆದಿ ದ್ರಾವಿಡ ಜಾತಿಯನ್ನು ಪಟ್ಟಿಯಿಂದ ಕೈಬಿಟ್ಟಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಎಚ್ಚರಿಸಿದೆ.

ಮಂಗಳೂರಿನಲ್ಲಿ ಗುರುವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಎಂ.ಸೀನ ಮಾಸ್ತಿಕಟ್ಟೆ, ಸಮಿತಿಯ ವತಿಯಿಂದ ಈಗಾಗಲೇ ಮುಖ್ಯಮಂತ್ರಿ ಹಾಗೂ ನಿವೃತ್ತ ನ್ಯಾಯಾಧೀಶ ಎಚ್.ಎನ್. ನಾಗಮೋಹನ್ ದಾಸ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದಿ ದ್ರಾವಿಡ ಉಪಜಾತಿಯನ್ನು ಪಟ್ಟಿಯಿಂದ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಆದರೂ ಕೈಬಿಡುವ ಪ್ರಯತ್ನಗಳು ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸರಕಾರ ಅಂತಹ ನಡೆಗೆ ಮುಂದಾದರೆ ಈ ಬಗ್ಗೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಕಳೆದ 75 ವರ್ಷಗಳಿಂದಲೂ ಪರಿಶಿಷ್ಟ ಜಾತಿಯಲ್ಲಿ ಉಪ ಜಾತಿಯಾಗಿ ಆದಿ ದ್ರಾವಿಡ ಜಾತಿ ಇದೆ. ಇದೀಗ ಈ ಜಾತಿಯನ್ನು ಪಟ್ಟಿಯಿಂದ ಕೈಬಿಟ್ಟರೆ ಸರಕಾರದ ವಿವಿಧ ಇಲಾಖೆಗಳಾದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಮನಪಾ, ಪುರಸಭೆ, ನಗರಸಭೆ, ನಗರ ಪಂಚಾಯತ್ ಹಾಗೂ ಗ್ರಾಪಂಗಳಲ್ಲಿ ಸಿಗುತ್ತಿದ್ದ ವಿವಿಧ ಸವಲತ್ತು ಮತ್ತು ಶೈಕ್ಷಣಿಕ ಸವಲತ್ತುಗಳಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ. ಸರಕಾರಿ ಉದ್ಯೋಗಿಗಳು ಮುಂಭಡ್ತಿ ಪಡೆಯಲು ಅಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

1950ರಲ್ಲಿ ರಾಷ್ಟ್ರಪತಿಯಿಂದ ಬಿಡುಗಡೆಯಾದ 101 ಉಪಜಾತಿಗಳ ಪಟ್ಟಿಯಲ್ಲಿ ಆದಿ ದ್ರಾವಿಡ ಹೆಸರಿದೆ. ಸಂವಿಧಾನದ 341ರ ವಿಧಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳು ಸೇರ್ಪಡೆಯಾಗಿದ್ದು, ಸರಕಾರದಿಂದ ಲಭ್ಯವಿರುವ ಶೇ.15ರಂತೆ ಸರಕಾರಿ ಸವಲತ್ತುಗಳನ್ನು ಈ ಜಾತಿಗಳು ಪಡೆಯುತ್ತಿವೆ. ಆದರೆ ಇತ್ತೀಚೆಗೆ ಅಂಬೇಡ್ಕರ್ ನಿಗಮದಲ್ಲಿ ನಮ್ಮ ಸಮುದಾಯದವರು ಅರ್ಜಿ ಹಾಕಿದಾಗ ಈ ಸೌಲಭ್ಯ ನಮ್ಮವರಿಗೆ ಲಭ್ಯವಿಲ್ಲ ಎಂದಿದ್ದಾರೆ. ಇದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಪಾಂಡೇಶ್ವರ ಆಕ್ಷೇಪಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಸ್.ಪಿ.ಆನಂದ, ಕಾರ್ಯದರ್ಶಿ ಬಿ.ಜಿನ್ನಪ್ಪ ಬಂಗೇರ, ಕೋಶಾಧಿಕಾರಿ ಬಿ.ಕೆ.ಸುರೇಶ್, ಮಂಗಳೂರು ತಾಲೂಕು ಅಧ್ಯಕ್ಷ ನಾಗೇಶ್ ಬಳ್ಳಾಲ್ಬಾಗ್, ಉಳ್ಳಾಲ ತಾಲೂಕು ಅಧ್ಯಕ್ಷ ನಾರಾಯಣ, ಬಂಟ್ವಾಳ ತಾಲೂಕು ಅಧ್ಯಕ್ಷ ರವೀಂದ್ರ ಚಂಡ್ತಿಮಾರ್, ಮೂಡುಬಿದಿರೆ ಅಧ್ಯಕ್ಷ ಸತೀಶ್ ಕಲ್ಲಮುಂಡ್ಕೂರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ಆದಿ ದ್ರಾವಿಡರಿದ್ದಾರೆ. ಪರಿಶಿಷ್ಟ ಜಾತಿ ಉಪ ಜಾತಿಯಿಂದ ಸಮುದಾಯವನ್ನು ಸರಕಾರ ಕೈಬಿಟ್ಟರೆ ಮುಂಬರುವ ಚುನಾವಣೆಗಳಲ್ಲಿ ಸಮುದಾಯದ ಮತದಾರರು ಬಹಿಷ್ಕಾರ ಹಾಕುವ ತೀರ್ಮಾನಕ್ಕೆ ಬರಲಾಗಿದೆ ಎಂದು ಜಗದೀಶ್ ಪಾಂಡೇಶ್ವರ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X