Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಹಕಾರಿ ರಂಗಕ್ಕೆ ಭದ್ರ ತಳಪಾಯ ಹಾಕಿ...

ಸಹಕಾರಿ ರಂಗಕ್ಕೆ ಭದ್ರ ತಳಪಾಯ ಹಾಕಿ ಕೊಟ್ಟವರು ಮೊಳಹಳ್ಳಿ ಶಿವರಾವ್: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮೊಳಹಳ್ಳಿ ಶಿವರಾವ್ 145ನೇ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ4 Aug 2025 4:02 PM IST
share
ಸಹಕಾರಿ ರಂಗಕ್ಕೆ ಭದ್ರ ತಳಪಾಯ ಹಾಕಿ ಕೊಟ್ಟವರು ಮೊಳಹಳ್ಳಿ ಶಿವರಾವ್: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ಅವಿಭಜಿತ ದ.ಕ.ಜಿಲ್ಲೆಯಲ್ಲಿ ಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾವ್ ಅವರು ಹಾಕಿ ಕೊಟ್ಟ ಭದ್ರ ತಳಪಾಯ ಕಾರಣ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸೋಮವಾರ ಸಹಕಾರಿ ಪಿತಾಮಹ ದಿ। ಮೊಳಹಳ್ಳಿ ಶಿವರಾವ್‌ ಅವರ 145 ಜನ್ಮ ದಿನಾಚರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಕಾರಿ ಕ್ಷೇತ್ರ ಎಲ್ಲರನ್ನು ಬೆಳೆಸುತ್ತದೆ. ಮೊಳಹಳ್ಳಿ ಶಿವರಾಯರು ಸಮಾಜಕ್ಕೆ ದೊಡ್ಡ ಕೊಡುಗೆ ಸಹಕಾರಿ ಕ್ಷೇತ್ರ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾಲ ಪಡೆದ ರೈತರು ಶೇ.100 ಮರುಪಾವತಿ ಮಾಡಿರುವುದು ದೇಶದಲ್ಲೆ ಅಪರೂಪದ ಸಾಧನೆ. ಜಿಲ್ಲೆಯಲ್ಲಿ ರೈತರಿಗೆ ಸಾಲ ಸೌಲಭ್ಯ ದೊರೆತಿಲ್ಲ ಎನ್ನುವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಇಲ್ಲ. ಈ ಸಾಧನೆಗೆ ಜಿಲ್ಲೆಯಾದ್ಯಂತ ವಿಸ್ತರಿಸಿರುವ ಸಹಕಾರಿ ಸಂಸ್ಥೆ, ಅಲ್ಲಿನ ಸಿಬ್ಬಂದಿಗಳು ಆಡಳಿತ ಮಂಡಳಿ ಹಾಗೂ ಸದಸ್ಯರ ಪ್ರಮುಖ ಪಾತ್ರ ಇದೆ. ಕೃಷಿ ಸಾಲಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇವೆ. ಕೃಷಿ ಸಾಲದ ಸಂದರ್ಭದಲ್ಲಿ ಲಾಭದ ಉದ್ದೇಶ ಮುಖ್ಯ. ಸಹಕಾರಿ ಸಂಘಗಳು ವಾಣಿಜ್ಯ ಬ್ಯಾಂಕ್ ಗಳನ್ನು ಮೀರಿಸುವ ರೀತಿಯಲ್ಲಿ ಬೆಳೆಯಬೇಕಾಗಿದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಉದಯ ಕುಮಾರ್ ಇರ್ವತ್ತೂರು ಸಹಕಾರಿ ರಂಗದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಬಗ್ಗೆ ಉಪನ್ಯಾಸ ನೀಡುತ್ತಾ, 145ನೇ ಜನ್ಮದಿನಾಚರಣೆ ಈ ಸಮಾರಂಭದಲ್ಲಿ ನಾವೆಲ್ಲ ಸೇರಿದ್ದೇವೆ. ಈ ಜಿಲ್ಲೆ ಇಂದು ಪ್ರಗತಿಪಥದಲ್ಲಿ ಮುಂದುವರಿಯುತ್ತಿದ್ದರೆ, 20ನೇ ಶತಮಾನದಲ್ಲಿ ಅದಕ್ಕೆ ಅಡಿಪಾಯ ಹಾಕಿದ ಅನೇಕ ಮಹನೀಯರ ರಕ್ತ ಬೆವರು ಅದರ ಹಿಂದೆ ಇದೆ ಎನ್ನುವುದನ್ನು ನಾವು ಸದಾ ನೆನಪು ಮಾಡಿಕೊಳ್ಳಬೇಕಾಗಿದೆ. ಅಂತಹ ಒಂದು ಮಹನೀಯರ ಸಾಲಲ್ಲಿ ಮೊಳಹಳ್ಳಿ ಶಿವರಾಯರೂ ಒಬ್ಬರು. ಅವರಿಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಹೋದರೂ ನಮ್ಮೊಳಗಿದ್ದಾರೆ. ನಮ್ಮೊಳಗೆ ನಾವು ಅವರನ್ನು ಎಷ್ಟು ಗಾಢವಾಗಿ ಗ್ರಹಿಸಬಲ್ಲವೋ ಅಷ್ಟು ಗಟ್ಟಿಯಾಗಿ, ವಿಸ್ತಾರವಾಗಿ ಮತ್ತು ಭದ್ರವಾಗಿ ಸಹಕಾರಿ ಚಳವಳಿಯನ್ನು, ಸಂಸ್ಥೆಗಳನ್ನು ಕಟ್ಟಬಲ್ಲೆವು. “ಒಬ್ಬರಿಗಾಗಿ ಎಲ್ಲರೂ ಮತ್ತು ಎಲ್ಲರಿಗಾಗಿ ಒಬ್ಬರು” ಎನ್ನುವುದು ಸಹಕಾರ ತತ್ವ. ಎಲ್ಲರಿಗಾಗಿ ಜೀವ ತೇದ ತ್ಯಾಗ ಮೂರ್ತಿ ಕಾರ್ನಾಡು ಸದಾಶಿವರಾಯರ ಆಸ್ತಿ ಹರಾಜು ಆಗುವಂತ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್, ಅಂತಹ ಆಸ್ತಿಯನ್ನು ಸಮಾಜದಲ್ಲಿ ಉಳಿಸಿಕೊಂಡಿತು. ಅಂತಹ ಮಹಾನ್ ಸಂಸ್ಥೆಯ ಮಣ್ಣಿನಲ್ಲಿ ನಿಂತು ನಾವು ಮೊಳಹಳ್ಳಿ ಶಿವರಾಮ್ ಅವರನ್ನು ಸ್ಮರಿಸಿಕೊಳ್ಳುತ್ತಿದ್ದೇವೆ ಎಂದರು.

ಸಮಾರಂಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಅಧ್ಯಕ್ಷ ರವಿರಾಜ ಹೆಗ್ಡೆ, ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕೊಡ್ಗಿ ಶುಭ ಹಾರೈಸಿದರು.

ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಮುಖ್ಯ ಕಾರ್ಯ. ನಿರ್ವಹ ಣಾಧಿಕಾರಿ, ಗೋಪಾಲಕೃಷ್ಣ ಭಟ್, ನಬಾರ್ಡ್ ಡಿ.ಜಿ.ಎಂ.ಸಂಗೀತ ಕರ್ತ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ನಿರ್ದೇಶಕರು, ಮಂಗಳೂರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ. ನಿರ್ದೇಶಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕರಾವಳಿ ಸಹಕಾರಿ ಮಾಸ ಪತ್ರಿಕೆಯನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.

ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಲಿ. ಇದರ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಗೊಟ್ಟು ಸ್ವಾಗತಿಸಿದರು. ಹರೀಶ್ ಆಚಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X