Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಬಳಕ್ಕೆ ತೋರಿಸುವ ಆಸಕ್ತಿ ಗದ್ದೆ...

ಕಂಬಳಕ್ಕೆ ತೋರಿಸುವ ಆಸಕ್ತಿ ಗದ್ದೆ ಉಳಿಸಲು ವಹಿಸುತ್ತಿಲ್ಲ: ನರೇಂದ್ರ ರೈ ದೇರ್ಲ

► ನಿರ್ದಿಂಗತ ಉತ್ಸವ-2025 ► "ಜೀವ ಸಂರಕ್ಷಣೆ ಮತ್ತು ಆಚರಣಾ ಲೋಕ" ವಿಚಾರ ಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ2 March 2025 1:15 PM IST
share
ಕಂಬಳಕ್ಕೆ ತೋರಿಸುವ ಆಸಕ್ತಿ ಗದ್ದೆ ಉಳಿಸಲು ವಹಿಸುತ್ತಿಲ್ಲ: ನರೇಂದ್ರ ರೈ ದೇರ್ಲ

ಮಂಗಳೂರು, ಮಾ.2: ನಾಡಿನ ಕೋಟ್ಯಂತರ ಜನರ ಆಹಾರವಾದ ಅನ್ನದ ಮೂಲನೆಲೆಯಾದ ಗದ್ದೆಗಳು ದಿನದಿಂದ ದಿನಕ್ಕೆ ಕಣ್ಮರೆಯಾಗುತ್ತಿದೆ. ಅವುಗಳನ್ನು ಉಳಿಸುವ ಆಸಕ್ತಿಯನ್ನು ಯಾರೂ ತೋರುತ್ತಿಲ್ಲ. ಬದಲಾಗಿ ಸಂಸ್ಕೃತಿಯನ್ನು ಉಳಿಸುವ ಹೆಸರಿನಲ್ಲಿ ಕಂಬಳ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಕಂಬಳಕ್ಕಾಗಿ ನಡೆಸುವ ಹೋರಾಟ, ತೋರಿಸುವ ಉತ್ಸಾಹವನ್ನು ಗದ್ದೆ ಉಳಿಸಲು ಆಸಕ್ತಿ ವಹಿಸದಿರುವುದು ವಿಪರ್ಯಾಸ ಎಂದು ಲೇಖಕ, ಅಂಕಣಕಾರ ನರೇಂದ್ರ ರೈ ದೇರ್ಲ ಹೇಳಿದರು.

ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆಯುತ್ತಿರುವ ಱನಿರ್ದಿಂಗತ ಉತ್ಸವ 2025ದಲ್ಲಿ ರವಿವಾರ ನಡೆದ "ಜೀವ ಸಂರಕ್ಷಣೆ ಮತ್ತು ಆಚರಣಾ ಲೋಕ" ಗೋಷ್ಠಿಯಲ್ಲಿ ಅವರು ಮಾತನಾಡಿದರು.

ದಿನದಿಂದ ದಿನಕ್ಕೆ ಕರಾವಳಿಯ ಭತ್ತದ ಕೃಷಿ ನಾಶವಾಗುತ್ತಿದೆ. ಗದ್ದೆಗಳು ಕಣ್ಮರೆಯಾಗುತ್ತಿವೆ. ಕಂಬಳಕ್ಕಾಗಿ ಬೀದಿಗಿಳಿಯುವ ರಾಜಧಾನಿಯಲ್ಲೂ ಕಂಬಳ ಆಯೋಜಿಸುವ ನಾವು ಗದ್ದೆಯ ನಾಶದ ಬಗ್ಗೆ ಗಮನ ಹರಿಸುತ್ತಿಲ್ಲ. ಗದ್ದೆ ಉಳಿದರಷ್ಟೇ ಕಂಬಳ ಕ್ರೀಡೆ ಉಳಿಯಬಹುದು ಎಂಬ ಪ್ರಜ್ಞೆ ಇಲ್ಲವಾಗಿದೆ ಎಂದು ನರೇಂದ್ರ ರೈ ದೇರ್ಲ ಹೇಳಿದರು.

ಎಲ್ಲೋ ಯಾವುದೋ ದೇಶದ ಮೇಲೆ ಸರ್ಜಿಕಲ್ ಸ್ಟ್ರೈಕ್ ಆದಾಗ ಸಂಭ್ರಮಿಸುವ ನಾವು ನಮ್ಮ ನೀರು ಮಲಿನವಾದಾಗ, ಗಾಳಿ ವಿಷಕಾರಿಯಾದಾಗ ಮೌನಕ್ಕೆ ಶರಣಾಗುತ್ತೇವೆ. ಜೀವನಾನುಭವದ ಮೂಲಕ ಪಾಠ ಕಲಿತ ಬಯಲು ವಿಶ್ವವಿದ್ಯಾನಿಲಯದ ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತೇವೆ. ಮನುಷ್ಯರನ್ನು ಬೆಸೆಯುವ ಕೃಷಿ ಸ್ಥಾನಪಲ್ಲಟವಾಗುತ್ತಿದೆ. ಭೂಮಿಯ ಧಾರಣಾಶಕ್ತಿಗಿಂತಲೂ ಅಧಿಕವಾಗಿ ನಾವು ಭೂಮಿಯ ಮೇಲೆ ದಬ್ಬಾಳಿಕೆ ಮಾಡುತ್ತಿದ್ದೇವೆ. ಭೂಮಿ ಇರುವುದು ನಮ್ಮ ಅಗತ್ಯ ಪೂರೈಸಲೇ ವಿನಃ ನಮ್ಮ ದುರಾಸೆ ಈಡೇರಿಸಲು ಅಲ್ಲ ಎಂಬ ವಾಸ್ತವ ಸತ್ಯವನ್ನು ಮರೆತಿದ್ದೇವೆ ಎಂದು ನರೇಂದ್ರ ರೈ ದೇರ್ಲ ನುಡಿದರು.

ನೊಗ, ನೇಗಿಲು ಮೂಲೆಪಾಲಾಗಿದೆ. ನೆಲದ ಬದುಕು ನಾಶವಾಗಿದೆ. ಗದ್ದೆಗಳ ಮೇಲೆ ಮಣ್ಣು ಸುರಿದು ಗಗನಚುಂಬಿ ಕಟ್ಟಡ ನಿರ್ಮಿಸಲಾಗುತ್ತಿದೆ. ಆ ಕಟ್ಟಡದಲ್ಲಿ ವಾಸಿಸುವವರು ಅಂಗೈಯಲ್ಲೇ ಜಗತ್ತನ್ನು ನೋಡುವುದರಲ್ಲಿ ತಲ್ಲೀನರಾಗಿದ್ದಾರೆ. ಭವಿಷ್ಯದ ಮಕ್ಕಳ ಹಿತದೃಷ್ಟಿಯಿಂದ ಇನ್ನಾದರೂ ನಾವು ಭೂಮಿಯನ್ನು ಉಳಿಸಲು ಪ್ರಯತ್ನಿಸಬೇಕಿದೆ ಎಂದು ನರೇಂದ್ರ ರೈ ದೇರ್ಲ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X