Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾಣೆಮಂಗಳೂರು: ಘನ ವಾಹನ ಸಂಚಾರ...

ಪಾಣೆಮಂಗಳೂರು: ಘನ ವಾಹನ ಸಂಚಾರ ನಿಷೇಧಕ್ಕೆ ಕಬ್ಬಿಣದ ಕಮಾನು ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ20 Oct 2023 9:40 PM IST
share
ಪಾಣೆಮಂಗಳೂರು: ಘನ ವಾಹನ ಸಂಚಾರ ನಿಷೇಧಕ್ಕೆ ಕಬ್ಬಿಣದ ಕಮಾನು ಅಳವಡಿಕೆ

ಬಂಟ್ವಾಳ : ಶತಮಾನದ ಹಳೆಯದಾದ ಪಾಣೆಮಂಗಳೂರು ಉಕ್ಕಿನ (ನೇತ್ರಾವತಿ) ಸೇತುವೆಯಲ್ಲಿ ಘನಗಾತ್ರದ ವಾಹನ ಗಳು ಸಂಚಾರ ಮಾಡದಂತೆ ತಡೆಯಲು ಕಬ್ಬಿಣದ ಕಮಾನು ಅಳವಡಿಸಲಾಗಿದೆ.

ಬಂಟ್ವಾಳ ಪುರಸಭಾ ಇಲಾಖೆಯ ವತಿಯಿಂದ ಸೇತುವೆಯ ಎರಡು ಭಾಗದಲ್ಲಿ ಸೀಮಿತ ಎತ್ತರದಲ್ಲಿ ಅಡ್ಡವಾಗಿ ಕಬ್ಬಿಣದ ರಾಡ್ ಅಳವಡಿಸಲಾಗಿದ್ದು ಘನಗಾತ್ರದ ಲಾರಿ, ಬಸ್ ಗಳು ಓಡಾಟ ನಡೆಸದಂತೆ ತಡೆ ಹಿಡಿಯಲಾಗಿದೆ.

ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೆಮಂಗಳೂರು ಉಕ್ಕಿನ (ನೇತ್ರಾವತಿ) ಸೇತುವೆಯ ಮಧ್ಯಭಾಗದಲ್ಲಿ ಸಣ್ಣದಾದ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾರದ ಹಿಂದೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಪಾಣೆಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಬರುವಾಗ ಅಕ್ಕರಂಗಡಿ ಬಳಿ ಸುಮಾರು ನಾಲ್ಕು ಪಿಲ್ಲರ್ ಗಳ ಬಳಿಕ ಬಿರುಕು ಕಾಣಿಸಿಕೊಂಡಿತ್ತು. ಡಾಮರು ಎದ್ದು ಹೋಗಿದ್ದು ಸಣ್ಣ ಗುಂಡಿ ಯಾಗಿರುವುದು ಕಂಡು ಬಂದಿದ್ದು ಈ ಬಗ್ಗೆ ಸ್ಥಳೀಯರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಹಳೆಯ ಉಕ್ಕಿನ ಸೇತುವೆಯ ಆಯುಷ್ಯ ಮುಗಿದಿರುವ ಹಿನ್ನೆಲೆಯಲ್ಲಿ ನೂತನ ಸೇತುವೆ ನಿರ್ಮಾಣಗೊಂಡಿದ್ದು, ಬಳಿಕ ಇಲಾಖೆ ಆಯುಷ್ಯ ಮುಗಿದ ಈ ನೇತ್ರಾವತಿ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂಬ ನಾಮ ಫಲಕವನ್ನು ಅಳವಡಿಸಿ ಅಪಾಯದ ಬಗ್ಗೆ ಎಚ್ಚರಿಕೆ ನೀಡಿತ್ತು.

ಅಪಾಯದ ಬಗ್ಗೆ ಮುನ್ಸೂಚನೆ ನೀಡಲಾಗಿತ್ತಾದರೂ ಪಾಣೆಮಂಗಳೂರು ಪೇಟೆಯನ್ನು ಉಳಿಸಬೇಕು ಎಂಬ ಕೆಲವರ ವಾದ ಮತ್ತು ಬೇಡಿಕೆಯನ್ನು ಮುಂದಿಟ್ಟುಕೊಂಡು ಎಂದಿನಂತೆ ಬಸ್ ಸಹಿತ ಇತರ ಘನ ವಾಹನಗಳು ಯಥೇಚ್ಛವಾಗಿ ಸಂಚಾರ ಆರಂಭಿಸಿದ್ದವು.‌‌

ಸೇತುವೆ ಬಿರುಕು ಬಿಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದ್ದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದರು. ಬಂಟ್ವಾಳ ತಹಶಿಲ್ದಾರ್ ಎಸ್.ಬಿ.ಕೂಡಲಗಿ, ಪುರಸಭೆ ಅಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರಾದರೂ ಈ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದಾದ ಬಳಿಕವೂ ಯಾವುದೇ ಎಗ್ಗಿಲ್ಲದೆ ಇದೇ ಸೇತುವೆಯಲ್ಲಿ ಘನ ವಾಹನಗಳು ಎಂದಿನಂತೆ ಸಂಚಾರ ಮಾಡುತ್ತಿದ್ದವು. ಅಪಾಯಕಾರಿ ಸೇತುವೆಯ ಬಗ್ಗೆ ಇಲಾಖೆ ಮತ್ತು ಯಾವುದೇ ಸೂಚನಾ ಫಲಕಗಳನ್ನು ಕೂಡಾ ಅಳವಡಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಸೇತುವೆ ಮಧ್ಯ ಭಾಗದಲ್ಲಿ ಸಣ್ಣ ಬಿರುಕು ಕಂಡಿದೆ ಹಾಗಾಗಿ ಸೇತುವೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ಮಾಡಿದರೆ ಮುರಿದು ಬೀಳುವ ಅವಕಾಶಗಳು ಇವೆ. ಎಂಬ ಎಚ್ಚರಿಕೆಯ ವಿಚಾರವನ್ನು ಸ್ಥಳೀಯ ಪೋಲೀಸ್ ಇಲಾಖೆ ಕಂದಾಯ ಇಲಾಖೆ ಮತ್ತು ಪುರಸಭಾ ಇಲಾಖೆ ಗೆ ಮಾಹಿತಿ ನೀಡಿದ್ದರು.

ಬಿರುಕಿನ ಬಗ್ಗೆ ಸ್ಥಳೀಯರ ದೂರಿನಂತೆ ಮಾಧ್ಯಮ ಗಳು ವರದಿ ಮಾಡಿದ್ದವು. ಘಟನೆ ನಡೆದ ಒಂದು ವಾರಗಳ ಬಳಿಕ ಇದೀಗ ಕಮಾನು ಹಾಕುವ ಕಾಮಗಾರಿ ಪೂರ್ಣಗೊಂಡಿದೆ. ಅಕ್ರಮ ಮರಳು ವಾಹನಗಳು ಸಹಿತ ಅನೇಕ ಅಕ್ರಮ ವಸ್ತುಗಳ ಸಾಗಾಟ ಮಾಡುವುದಕ್ಕೆ ಇದೊಂದು ಕಳ್ಳದಾರಿಯಾಗಿತ್ತು. ಇದೀಗ ಕಮಾನು ಅಳವಡಿಸಿ ಘನಗಾತ್ರ ವಾಹನ ಗಳಿಗೆ ಸಂಚಾರ ನಿರ್ಬಂಧಿಸಿದ ಪರಿಣಾಮ ಅಕ್ರಮ ಮರಳುಗಾರಿಕೆ, ಇತರ ಸಾಗಾಟಕ್ಕೆ ಕಡಿವಾಣ ಬೀಳಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X