Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾಟೆಕಲ್ ನಲ್ಲಿ ಬಸ್ ತಂಗುದಾಣವಿಲ್ಲದೆ...

ನಾಟೆಕಲ್ ನಲ್ಲಿ ಬಸ್ ತಂಗುದಾಣವಿಲ್ಲದೆ ಪ್ರಯಾಣಿಕರು‌ ಕಂಗಾಲು

ವಾರ್ತಾಭಾರತಿವಾರ್ತಾಭಾರತಿ13 Nov 2023 6:31 PM IST
share
ನಾಟೆಕಲ್ ನಲ್ಲಿ ಬಸ್ ತಂಗುದಾಣವಿಲ್ಲದೆ ಪ್ರಯಾಣಿಕರು‌ ಕಂಗಾಲು

ಕೊಣಾಜೆ; ದೇರಳಕಟ್ಟೆ ತೊಕ್ಕೊಟ್ಟು ಮಾರ್ಗವಾಗಿ ಮುಡಿಪು ಕಡೆಗೆ ಸಂಚರಿಸುವಾಗ ಸಿಗುವ ಮುಖ್ಯ ಕೇಂದ್ರವೇ ನಾಟೆಕಲ್. ಮಂಜನಾಡಿ, ಕೊಣಾಜೆ, ಕೋಟೆಕಾರು ಹೀಗೆ ವಿವಿಧ ಪ್ರದೇಶಗಳಿಗೆ ಹೋಗುವ ಪ್ರಯಾಣಿಕರಿಗೆ ನಾಟೆಕಲ್ ಕೇಂದ್ರ ಬಿಂದು. ಅಭಿವೃದ್ಧಿ ಹೊಂದುತ್ತಿರುವ ಈ ಪ್ರದೇಶದಲ್ಲಿ ಪ್ರಯಾಣಿಕರಿಗೆ ಒಂದು ಸುಸಜ್ಜಿತವಾದ ಬಸ್ ತಂಗುದಾಣವಿಲ್ಲದೆ‌ ಜನರು‌ ಕಂಗಾಲಾಗಿದ್ದಾರೆ.

ನಾಟೆಕಲ್ ಪ್ರದೇಶದಲ್ಲಿ ಉಳ್ಳಾಲ ತಾಲೂಕು ಕಚೇರಿ ಆರಂಭಗೊಂಡಿದೆ ಜೊತೆಗೆ ಅನೇಕ ಶೈಕ್ಷಣಿಕ ಸಂಸ್ಥೆಗಳು, ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಕಂಪೆನಿಗಳು ವ್ಯಾಪಾರ ಕೇಂದ್ರಗಳಿದ್ದು, ನಾಟೆಕಲ್ ಜಂಕ್ಷನ್ ಜನಜಂಗುಳಿಯ ಪ್ರದೇಶವಾಗಿ ಮಾರ್ಪಟ್ಟಿದೆ.

ಜಂಕ್ಷನ್ ಅಭಿವೃದ್ಧಿ; ನಾಟೆಕಲ್ ಭಾಗದಲ್ಲಿ ಇತ್ತೀಚಿನ ಎರಡು ವರ್ಷದಲ್ಲಿ ಅನೇಕ ಬದಲಾವಣೆಗಳಾಗಿದ್ದು, ನಾಟೆಕಲ್ ಕೇಂದ್ರ ಭಾಗದ ರಸ್ತೆ ಅಗಲೀಕರಣ ಗೊಂಡಿದೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳನ್ನು ನಿರ್ಮಿಸಲಾಗಿದೆ. ಮುಖ್ಯ ಸರ್ಕಲ್ ನಲ್ಲಿ‌ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವತಿಯಿಂದ ಹೊಸ ವಿನ್ಯಾಸದ ಸರ್ಕಲ್ ನಿರ್ಮಾಣವಾಗುತ್ತಿದೆ.

ಹಳೆ ತಂಗುದಾಣವನ್ನು ಕೆಡವಲಾಗಿತ್ತು: ನಾಟೆಕಲ್ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಲಯನ್ಸ್ ಕ್ಲಬ್ ಮಂಗಳ ಗಂಗೋತ್ರಿಯವರು ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಿದ್ದರು. ಇದು ಪ್ರಯಾಣಿಕರಿಗೆ ತುಂಬಾ ಅನುಕೂಲವಾಗು ತ್ತಿತ್ತು. ಆದರೆ ರಸ್ತೆ ಅಗಲೀಕರಣದ ವೇಳೆ ಈ ಹಳೆ ಬಸ್ ತಂಗುದಾಣವನ್ನು ಕೆಡವಲಾಗಿತ್ತು.

ಬಿಸಿಲು ಮಳೆಗೆ ಪ್ರಯಾಣಿಕರ ಸಂಕಷ್ಠ;

ಕೊಣಾಜೆ ಹಾಗೂ ಮಂಜನಾಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಭಾಗದಲ್ಲಿ ಹಾಗೂ ಮಂಗಳೂರಿನಿಂದ ಕೊಣಾಜೆ ಕಡೆಗೆ ಹೋಗುವ ಭಾಗದಲ್ಲಿ ಸೇರಿದಂತೆ ಎರಡು ಕಡೆಯೂ ಸುಸಜ್ಜಿತ‌ ಬಸ್ ತಂಗುದಾಣವಿಲ್ಲದೆ ಪ್ರಯಾಣಿಕರು ಬಿಸಿಲು ಮಳೆಗೆ ಸಂಕಷ್ಟ ಎದುರಿಸುವಂತಾಗಿದೆ.

ಬಸ್ ನಿಲ್ದಾಣವಿಲ್ಲದೆ‌ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಂಡು ಬೇಸತ್ತ ನಾಟೆಕಲ್ ನ ಅಟೋ ಚಾಲಕರು ಒಟ್ಟು ಸೇರಿ ಎರಡು ಭಾಗದಲ್ಲೂ ತಗಡು ಶೀಟು ಹಾಕಿ ನೆರಳಿಗಾಗಿ ತಾತ್ಕಾಲಿಕ ಬಸ್ ತಂಗುದಾಣವನ್ನು ನಿರ್ಮಿಸಿ ಸ್ವಲ್ಪ ಅನುಕೂಲತೆಯನ್ನು ಕಲ್ಪಿಸಿಕೊಟ್ಟಿದ್ದಾರೆ. ಆದರೆ ಗಾಳಿ ಮಳೆಗೆ ಪ್ರಯಾಣಿಕರು ತೊಂದರೆ ಎದುರಿಸುತ್ತಿದ್ದಾರೆ.

ಅಲ್ಲದೆ ಬಸ್ ತಂಗುದಾಣದೊಂದಿಗೆ ಇಲ್ಲಿಯ ಇನ್ನೊಂದು ಪ್ರಮುಖ ಸಮಸ್ಯೆಯೆಂದರೆ ರಸ್ತೆ ಅಗಲೀಕರಣದ ಬಳಿಕ ಈ ನಾಟೆಕಲ್ ತಿರುವು ಪ್ರದೇಶದಲ್ಲಿ ವಾಹನ ಅವಘಡಗಳ ಸಂಖ್ಯೆ‌ ಹೆಚ್ಚಾಗಿದೆ. ಮಂಜನಾಡಿ ಕಡೆಯಿಂದ ಬರುವ ರಸ್ತೆಗೆ ಸಣ್ಣ ಗಾತ್ರದ ಹಂಪ್ಸ್ ನಿರ್ಮಾಣ ಮಾಡಲಾಗಿದ್ದರೂ ಅದು ಉಪಯೋಗಕ್ಕೆ ಬರುತ್ತಿಲ್ಲ. ಆದ್ದರಿಂದ ಇಲ್ಲಿ‌ ಅಪಘಾತವನ್ನು ತಡೆ ಯಲು ಸುಸಜ್ಜಿತವಾದ ಹಂಪ್ಸ್ ನಿರ್ಮಾಣವಾಗಬೇಕು ಎಂಬುದು‌ ಈ ಭಾಗದ ಜನರ ಬೇಡಿಕೆಯಾಗಿದೆ.

ಆದಷ್ಟು ಶೀಘ್ರವಾಗಿ ಇಲ್ಲಿಯ ಎರಡು ಭಾಗಗಳಲ್ಲಿಯೂ ಸುಸಜ್ಜಿತ ಬಸ್ ತಂಗುದಾಣ ನಿರ್ಮಾಣ ಆಗಬೇಕೆಂಬುದು ಈ ಭಾಗದ ಪ್ರಯಾಣಿಕರ ಆಗ್ರಹವಾಗಿದೆ.

"ನಾಟೆಕಲ್ ಅಭಿವೃದ್ಧಿ ಹೊಂದಿದ ಪ್ರದೇಶವಾದರೂ ಬಸ್ ತಂಗುದಾಣದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ರಿಕ್ಷಾ ಚಾಲಕರು ಇದನ್ನು ಗಮನಿಸಿ ತಾತ್ಕಾಲಿಕ ಶೆಡ್ ನಿರ್ಮಿಸಿ ಕೊಟ್ಟಿದ್ದು, ಆದಷ್ಡು ಶೀಘ್ರ ವಾಗಿ ಸರ್ಕಾರದ ವತಿಯಿಂದ ಸುಸಜ್ಜಿತ ಬಸ್ಸು ತಂಗುದಾಣ‌ ನಿರ್ಮಾಣವಾಗಲಿ"

- ಹಮೀದ್ ಅಧ್ಯಕ್ಷರು, ರಿಕ್ಷಾ ಚಾಲಕ ಮಾಲಕರ ಸಂಘ ನಾಟೆಕಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X