Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ. ಹಾರೂನ್ ದಂಪತಿಯನ್ನೊಳಗೊಂಡ ತಂಡದಿಂದ...

ಡಾ. ಹಾರೂನ್ ದಂಪತಿಯನ್ನೊಳಗೊಂಡ ತಂಡದಿಂದ ವಿನೂತನ ವೈದ್ಯಕೀಯ ಸಾಧನ ಅವಿಷ್ಕಾರ

ಸ್ತ್ರೀರೋಗ ಶೀಘ್ರ ಪತ್ತೆ- ನಿರ್ಣಯದ ಸಾಧನದ ಪೇಟೆಂಟ್‌ಗಾಗಿ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ4 March 2025 3:03 PM IST
share
ಡಾ. ಹಾರೂನ್ ದಂಪತಿಯನ್ನೊಳಗೊಂಡ ತಂಡದಿಂದ ವಿನೂತನ ವೈದ್ಯಕೀಯ ಸಾಧನ ಅವಿಷ್ಕಾರ

ಮಂಗಳೂರು: ನಗರದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ (ಕೆಎಂಸಿ)ಯಲ್ಲಿ ಸೇವೆ ಸಲ್ಲಿಸುತ್ತಿರುವ ಹಾಸನ ಮೂಲದ ಖ್ಯಾತ ವೈದ್ಯ ದಂಪತಿ ಡಾ. ಹಾರೂನ್ ಎಚ್. ಮತ್ತು ಡಾ. ಸಮೀನಾ ಅವರನ್ನೊಳಗೊಂಡ ಸಂಶೋಧನಾ ತಂಡವು ಸ್ತ್ರೀರೋಗಗಳ ಶೀಘ್ರ ಪತ್ತೆ ಮತ್ತು ನಿರ್ಣಯಕ್ಕೆ ಸಹಕಾರಿಯಾಗುವ ವಿನೂತನ ಸಾಧನವನ್ನು ಅವಿಷ್ಕರಿಸಿದೆ.

ಮಹತ್ವದ ಹೆಜ್ಜೆಯಾಗಿ, ಈ ಸಾಧನಕ್ಕೆ ಪೇಟೆಂಟ್ ಪಡೆಯುವ ನಿಟ್ಟಿನಲ್ಲಿ ಅಧಿಕೃತವಾಗಿ ಸಲ್ಲಿಕೆಯಾಗಿರುವ ಅರ್ಜಿ ಸ್ವೀಕೃತವಾಗಿದೆ.

ಇಂಟರ್ನಲ್ ಮೆಡಿಸಿನ್ ಕನ್ಸಲೆಂಟ್ ಡಾ. ಎಚ್. ಹಾರೂನ್ ಮತ್ತು ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಕನ್ಸಲ್ವೆಂಟ್ ಡಾ. ಎಚ್. ಸಮೀನಾ ಸೇರಿದಂತೆ ಮಂಗಳೂರು ಕೆಎಂಸಿ, ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಸಂಶೋಧಕರ ತಂಡದ ಎಂಐಟಿ ಮಣಿಪಾಲದ ಡಾ. ಚಿರಂಜಿತ್ ಘೋಷ್ ಹಾಗೂ ವಿದ್ಯಾರ್ಥಿ ಸಂಶೋಧಕರಾದ ಕ್ರಿಶಾ ಜನಸ್ವಾಮಿ, ಶಶಾಂಕ್ ಸಂಜಯ್, ಆದಿತ್ಯ ಹರಿಕೃಷ್ಣನ್ ನಂಬೂದಿರಿ ಮತ್ತು ಶುಭಂ ಭುಸಾರಿ ಈ ವಿನೂತನ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ.

ಪೇಟೆಂಟ್‌ಗಾಗಿ ಅರ್ಜಿ ಸಲ್ಲಿಸಿರುವ ಸಾಧನವು ಪರಿಣಾಮಕಾರಿ ಮಾದರಿಗಾಗಿ ತಿರುಗುವ ಬ್ರಶ್‌ ನೊಂದಿಗೆ ಹೊಂದಿಕೊಳ್ಳುವ ಪ್ರೋಬ್ ಜತೆಗೆ ಕಿಣ್ಣ- ಲೇಪಿತ ಪತ್ತೆ ವ್ಯವಸ್ಥೆಯನ್ನು ಹೊಂದಿದೆ. ಈ ವಿಶೇಷ ವಿನ್ಯಾಸವನ್ನು ನಿರ್ದಿಷ್ಟವಾಗಿ ಸ್ತ್ರೀರೋಗಗಳ ಆರಂಭಿಕ ಪತ್ತೆ ಮತ್ತು ರೋಗ ನಿರ್ಣಯ ವಿಧಾನವನ್ನು ಸುಧಾರಿಸುವ ನಿಟ್ಟಿನಲ್ಲಿ ವಿನ್ಯಾಸಗೊಳಿಸಲಾಗಿದೆ.

ಗೈನಕಾಲಜಿ ಆರೋಗ್ಯ ಸಮಸ್ಯೆಗಳ ಹೆಚ್ಚಿನ ಅಪಾಯವನ್ನು ಹೊಂದಿರುವ ವಯಸ್ಸಾದ ಮಹಿಳೆಯರಿಗೆ ಈ ಸಾಧನವು ಸ್ತ್ರೀರೋಗಗಳ ಪತ್ತೆಗೆ ಹೆಚ್ಚು ಸುಲಭವಾದ ಮತ್ತು ಬಳಕೆದಾರ ಸ್ನೇಹಿ ವಿಧಾನವನ್ನು ಒದಗಿಸುವ ಮೂಲಕ ಮಹಿಳೆಯರ ಆರೋಗ್ಯ ರಕ್ಷಣೆಯನ್ನು ಸರಳಗೊಳಿಸಲಿದೆ.

ಸಂಶೋಧಕ ವೈದ್ಯ ತಂಡದ ಈ ಸಾಧನೆಯ ಕುರಿತಂತೆ 'ಕೆಎಂಸಿ ಮಂಗಳೂರು' ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವೈದ್ಯಕೀಯ ಆವಿಷ್ಕಾರಕ್ಕೆ ತಂಡವನ್ನು ಅಭಿನಂದಿಸಿದೆ.

ಡಾ.ಹಾರೂನ್ ಹಾಸನದ ಅರೇಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಎಂ.ಹುಸೇನ್ ಮತ್ತು ದಿವಂಗತ ಅಖಿಲಾ ಬೇಗಂ ಅವರ ಪುತ್ರರಾಗಿದ್ದಾರೆ. ಡಾ.ಸಮೀನಾ ಹಾರೂನ್ ಅವರು ಮಂಗಳೂರಿನ ಕೆ.ಎ.ಸಾದಿಕ್ ಮತ್ತು ಮೈಮೂನಾ ದಂಪತಿಯ ಪುತ್ರಿಯಾಗಿದ್ದಾರೆ. ಡಾ. ಚಿರಂಜಿತ್ ಘೋಷ್ ಎಂಐಟಿ ಮಣಿಪಾಲದ ಪ್ರಮುಖ ಸಂಶೋಧಕರಾಗಿದ್ದು, ಅವರ ಕಾರ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ ಮತ್ತು ಅವರು ಅತ್ಯಾಧುನಿಕ ಸಂಶೋಧನೆಯ ಮೂಲಕ ಆರೋಗ್ಯ ಕ್ಷೇತ್ರದ ಸೌಲಭ್ಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

Developed by Dr Haroon H, Dr Sameena H, Dr Chiranjit Ghosh (MIT), and student inventors Krisha Janaswamy, Shashank Sanjay, Adithya Harikrishnan Namboothiri, and Shubham Bhusari. Kudos to the team! #KMCMangalore #MedicalResearch #Patent #Innovation https://t.co/z62zVIEfGT

— KMC Mangalore (@KMC_Mangalore) March 3, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X