Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ...

ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್

ವಾರ್ತಾಭಾರತಿವಾರ್ತಾಭಾರತಿ27 Dec 2024 11:15 AM IST
share
ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್

ಪುತ್ತೂರು: ‘ಪೆನ್ ಪಾಯಿಂಟ್ ಸ್ನೇಹ ವೇದಿಕೆ' ಆಯೋಜಿಸಿದ 4ನೇ ಆವೃತ್ತಿಯ 'ಕ್ರಿಕೆಟ್ ಫೆಸ್ಟ್'ನಲ್ಲಿ ಬ್ಲೂ ಹಂಟರ್ಸ್ ತಂಡ ಸತತ 2ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬುಧವಾರ ಪುತ್ತೂರಿನ ಕೊಂಬೆಟ್ಟು ಕಾಲೇಜು ಮೈದಾನದಲ್ಲಿ ಪಂದ್ಯಾಟ ನಡೆಯಿತು. ಪಂದ್ಯಾವಳಿಯುದ್ದಕ್ಕೂ ಉದ್ಯಮಿ ಇರ್ಫಾನ್ ಕನ್ಯಾರಕೋಡಿ ಮಾಲಕತ್ವದ, ಇಸಾಕ್ ಸಜಿಪ ನಾಯಕತ್ವದ ಬ್ಲೂ ಹಂಟರ್ಸ್ ಪ್ರಾಬಲ್ಯ ಸಾಧಿಸಿತು. ಲೀಗ್ ಹಂತದಲ್ಲಿ ಎಲ್ಲಾ 4 ಪಂದ್ಯಗಳಲ್ಲಿ ಗೆದ್ದು ನೇರವಾಗಿ ಫೈನಲ್ ಪ್ರವೇಶಿಸಿದ್ದ ತಂಡ, ಪ್ರಶಸ್ತಿ ಸುತ್ತಿನಲ್ಲಿ ಸಾಬಿತ್ ಕುಂಬ್ರ ನಾಯಕತ್ವದ ವಿಶನ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು.

ಟೂರ್ನಿಯಲ್ಲಿ ಈ ಬಾರಿ ಒಟ್ಟು 5 ತಂಡಗಳು ಪಾಲ್ಗೊಂಡವು. ಬ್ಲೂ ಹಂಟರ್ಸ್, ವಿಶನ್ ಕಿಂಗ್ಸ್ ಜೊತೆ ಸರ್ಫರಾಝ್ ವಳಾಲ್ ಮಾಲಕತ್ವದ ಐ-ಮೇಡ್ ವಾರಿಯರ್ಸ್, ಶಾಕಿರ್ ಹಕ್ ನೆಲ್ಯಾಡ್ ಸಾರಥ್ಯದ ಮಾಜಿ ಚಾಂಪಿಯನ್ ರಾಯಲ್ ಇಂಡಿಯನ್ಸ್, ಅಶ್ರಫ್ ಕಟ್ಟದಪಡ್ಪು ಮಾಲಕತ್ವದ ಚಾಲೆಂಜರ್ಸ್ ತಂಡಗಳ ನಡುವೆ ರೋಚಕ ಪೈಪೋಟಿ ಏರ್ಪಟ್ಟಿತು. ಲೀಗ್ ಹಂತದಲ್ಲಿ ಬ್ಲೂ ಹಂಟರ್ಸ್ ಅಗ್ರಸ್ಥಾನಿಯಾದರೆ, ಕೆ.ಎಂ.ಶರೀಫ್ ನಾಯಕತ್ವದ ಐ-ಮೇಡ್ ವಾರಿಯರ್ಸ್ 2ನೇ, ವಿಶನ್ ಕಿಂಗ್ಸ್ 3ನೇ ಸ್ಥಾನ ಪಡೆದವು. ಸೆಮಿಫೈನಲ್ನಲ್ಲಿ ಐ-ಮೇಡ್ ತಂಡವನ್ನು ಸೋಲಿಸಿ ವಿಶನ್ ಕಿಂಗ್ಸ್ ಫೈನಲ್ ಪ್ರವೇಶಿಸಿತು. ರಾಯಲ್ ಇಂಡಿಯನ್ಸ್ ಹಾಗೂ ಚಾಲೆಂಜರ್ಸ್ ತಂಡಗಳು ಗುಂಪು ಹಂತದಲ್ಲೇ ನಿರ್ಗಮಿಸಿದವು.

ಬ್ಲೂ ಹಂಟರ್ಸ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ ಆಟಗಾರ ಜಮಾಲ್ ಕಲ್ಲಡ್ಕ ಸರಣಿಶ್ರೇಷ್ಠ ಹಾಗೂ ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಬ್ಯಾಟಿಂಗ್, ಬೌಲಿಂಗ್ ಜೊತೆ ಫೀಲ್ಡಿಂಗ್ ನಲ್ಲೂ ಮಿಂಚಿದ ಸಾಬಿತ್ ಮೀನಾವು ಶ್ರೇಷ್ಠ ಆಲ್ರೌಂಡರ್ ಪ್ರಶಸ್ತಿಗೆ ಭಾಜನರಾದರು.

ವಿಶನ್ ಕಿಂಗ್ಸ್ ನ ತನ್ಸೀಫ್ ಬಿ.ಎಂ. ಶ್ರೇಷ್ಠ ಬ್ಯಾಟರ್, ಮುಸ್ತಫಾ ದೇರಾಜೆ ಶ್ರೇಷ್ಠ ಬೌಲರ್, ಐ-ಮೇಡ್ ತಂಡದ ಕೆ.ಎಂ.ಶರೀಫ್ ಶ್ರೇಷ್ಠ ಫೀಲ್ಡರ್, ರಾಯಲ್ಸ್ ಇಂಡಿಯನ್ಸ್ನ ಅನ್ಸಾರ್ ಕಾಟಿಪಳ್ಳ ಶ್ರೇಷ್ಠ ವಿಕೆಟ್ ಕೀಪರ್ ಪ್ರಶಸ್ತಿ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X