Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.31ರಂದು ಪ್ರೊ ಆ್ಯಮ್ ಗಾಲ್ಫ್...

ಜ.31ರಂದು ಪ್ರೊ ಆ್ಯಮ್ ಗಾಲ್ಫ್ ಟೂರ್ನಮೆಂಟ್

ವಾರ್ತಾಭಾರತಿವಾರ್ತಾಭಾರತಿ7 Jan 2026 2:58 PM IST
share
ಜ.31ರಂದು ಪ್ರೊ ಆ್ಯಮ್ ಗಾಲ್ಫ್ ಟೂರ್ನಮೆಂಟ್
ಪಿಲಿಕುಳ ಗಾಲ್ಫ್ ಕ್ಲಬ್ ಆತಿಥ್ಯ

ಮಂಗಳೂರು, ಜ.7: ಪ್ಲಡ್ ಲೈಟಿಂಗ್ ವ್ಯವಸ್ಥೆಯೊಂದಿಗೆ 18 ಹೋಲ್‌ಗಳೊಂದಿಗೆ ವಿಶ್ವದರ್ಜೆಯ ಗಾಲ್ಫ್ ಕೋರ್ಸ್ ಆಗಿ ಪರಿತರ್ವನೆಗೊಂಡಿರುವ ಪಿಲಿಕುಳದ ಗಾಲ್ಫ್ ಕೋರ್ಸ್‌ನಲ್ಲಿ ಜ. 31ರಂದು ಪ್ರೊಆ್ಯಮ್ (ಪ್ರೊಫೆಶನಲ್ ಅಮೆಚೂರ್) ಗಾಲ್ಫ್ ಟೂರ್ನಮೆಂಟ್ ಆಯೋಜಿಸಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪಿಲಿಕುಳ ಗಾಲ್ಫ್ ಕ್ಲಬ್‌ನ ಕ್ಯಾಪ್ಟನ್ ಮನೋಜ್ ಶೆಟ್ಟಿ, ವಿಶ್ವಮಟ್ಟದ ಕೋರ್ಸ್ ಸಿದ್ಧತೆ ಮತ್ತು ಅತ್ಯಾಧುನಿಕ ಬೆಳಕಿನ ವ್ಯವಸ್ಥೆಯೊಂದಿಗೆ ಪಿಲಿಕುಳ ಗಾಲ್ಫ್ ಕ್ಲಬ್‌ಭಾರತೀಯ ಗಾಲ್ಫ್ ಕ್ರೀಡೆಯಲ್ಲಿ ನವೀನತೆ ಮತ್ತು ಸ್ಪರ್ಧಾತ್ಮಕ ಶ್ರೇಷ್ಟತೆಯನ್ನು ಒಟ್ಟುಗೂಡಿಸಿ ಹೊಸ ಅಧ್ಯಾಯ ಆರಂಭಿಸಲಿದೆ ಎಂದರು.

ಪಿಲಿಕುಳ ಗಾಲ್ಫ್ ಕ್ಲಬ್ ಆತಿಥ್ಯಿದಲ್ಲಿ ನಡೆಯಲಿರುವ ಈ ಹೊನಲು ಬೆಳಕಿನ ಪಂದ್ಯಾಟದಲ್ಲಿ ವೃತ್ತಿಪರ ಗಾಲ್ಫರ್‌ಗಳು ಹಾಗೂ ಅಮೆಚ್ಯೂರ್ ಆಟಗಾರರು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಲಿದ್ದಾರೆ. ಈಗಾಗಲೇ ಭಾರತದ 12 ವೃತ್ತಿಪರ ಗಾಲ್ಫರ್‌ಗಳು ತಮ್ಮ ಭಾಗವಹಿಸುವಿಕೆಯನ್ನು ದೃಪಡಿಸಿದ್ದಾರೆ ಎಂದವರು ಹೇಳಿದರು.

ಸ್ಪರ್ಧೆಯನ್ನು ಮೀರಿ ಈ ಟೂರ್ನಮೆಂಟ್ ಕರಾವಳಿ ಕರ್ನಾಟಕದಲ್ಲಿ ಗಾಲ್ಫ್ ಕ್ರೀಡೆಯ ಬೆಳವಣಿಗೆಗೆ ಪಿಲಿಕುಳ ಗಾಲ್ಫ್ ಕ್ವಬ್‌ನ ಬದ್ಧತೆಯನ್ನು ಪ್ರದರ್ಶಿಸುತ್ತಿದೆ. ಮಂಗಳೂರನ್ನು ಪ್ರಗತಿಶೀಲ ಕ್ರೀಡಾ ತಾಣವಾಗಿ ಉತ್ತೇಜಿಸುತ್ತದೆ ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಗಿರೀಶ್ ರಾವ್, ನಿತಿನ್ ಶೆಟ್ಟಿ, ಗೌತಮ್ ಪಡಿವಾಳ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

ನವೀಕೃತ ಗಾಲ್ಫ್ ಕೋರ್ಸ್ ಉದ್ಘಾಟನೆಗೆ ಸಿಎಂ, ಡಿಸಿಎಂ ?

ಪಿಲಿಕುಳದಲ್ಲಿ ನವೀಕೃತಗೊಂಡಿರುವ ಗಾಲ್ಫ್ ಕೋರ್ಸ್‌ನ ಉದ್ಘಾಟನೆ ಜ.9ರಂದು ನಿಗದಿಯಾಗಿತ್ತು. ಇದೀಗ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜ.10ರಂದು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರಿಂದ ಉದ್ಘಾಟನೆಗೆ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮನೋಜ್ ಶೆಟ್ಟಿ ತಿಳಿಸಿದರು.

ವಿಶ್ವದರ್ಜೆಯ ಗಾಲ್ಫ್ ಅಕಾಡೆಮಿ ಸ್ಥಾಪನೆಗೆ ತಯಾರಿ

ಗಾಲ್ಫ್ ಕ್ರೀಡೆಗೆ ಯುವಕರನ್ನು ಮತ್ತಷ್ಟು ಸಂಖ್ಯೆಯಲ್ಲಿ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಅಕಾಡೆಮಿಯ ಸದಸ್ಯ ಮೈಕಲ್ ಡಿಸೋಜಾ ಅವರ ಪ್ರಾಯೋಜಕತ್ವದಲ್ಲಿ ಮೂರು ತಿಂಗಳೊಳಗೆ ವಿಶ್ವದರ್ಜೆಯ ಅತ್ಯುನ್ನತ ಗಾಲ್ಫ್ ಅಕಾಡೆಮಿ ಸ್ಥಾಪನೆಗೆ ಪ್ರಯತ್ನ ನಡೆದಿದೆ. ಭಾರತದ 3ನೆ ವಿಶ್ವದರ್ಜೆಯ ಗಾಲ್ಫ್ ಕೋರ್ಸ್ ಪಿಲಿಕುಳದ್ದಾಗಿದೆ. ಸುಮಾರು 60 ಎಕರೆ ಜಾಗದಲ್ಲಿ ಹಚ್ಚ ಹಸಿರಿನ ಹೊದಿಕೆಯೊಂದಿಗೆ ಗಾಲ್ಫ್ ಕೋರ್ಸ್ ರೂಪಗೊಂಡಿದ್ದು, ವಿಶ್ವ ಮಟ್ಟದ ಟೊರೊ ನೀರಾವರಿ ವ್ಯವಸ್ಥೆಯನ್ನು ಮಾಡಲಾಗಿದೆ. 4.2 ಕಿ.ಮೀ. ಕಾರ್ಟ್ ಪಾತ್‌ನಲ್ಲಿ ಓಡಾಡಲು 10 ವಿದ್ಯುತ್ ಬಗ್ಗೀಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕ್ಲಬ್‌ನ ಹೊರಾಂಗಣದಲ್ಲಿ ಶುಭ ಸಮಾರಂಭಗಳಿಗೆ 20,000 ಚದರ ಅಡಿ ವಿಸ್ತೀರ್ಣದ ಹಚ್ಚ ಹಸಿರಿನ ಸ್ಥಳವನ್ನು ಹೊಂದಿದೆ. ಗಾಲ್ಫ್ ಆಟಗಾರರ ಬಳಕೆಗಾಗಿ ಕ್ಲಬ್ 10 ಸುಸಜ್ಜಿತ ಕೊಠಡಿಗಳನ್ನು ಹೊಂದಿದೆ.

- ಮನೋಜ್ ಶೆಟ್ಟಿ, ಕ್ಯಾಪ್ಟನ್, ಪಿಲಿಕುಳ ಗಾಲ್ಫ್ ಕ್ಲಬ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X