Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿಐಟಿಯು ನೇತೃತ್ವದಲ್ಲಿ ಬೈಕಂಪಾಡಿಯ...

ಸಿಐಟಿಯು ನೇತೃತ್ವದಲ್ಲಿ ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಎಸಗಿದರೆ ಆಯುಕ್ತರು, ಸುರತ್ಕಲ್‌ ವಲಯ ಆಯುಕ್ತರ ಕಚೇರಿಗೆ ಮುತ್ತಿಗೆ: ವ್ಯಾಪಾರಿಗಳಿಂದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ22 Oct 2024 11:57 PM IST
share
ಸಿಐಟಿಯು ನೇತೃತ್ವದಲ್ಲಿ ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ

ಸುರತ್ಕಲ್‌: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದ ನಿವೇಶನದಲ್ಲಿ ವ್ಯಾಪಾರ ಮಾಡುತ್ತಿದ್ದ ಬಡಬೀದಿ ವ್ಯಾಪಾರಿಗಳ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್‌ ವಲಯ ಆಯುಕ್ತೆ ವಾಣಿ ಆಳ್ವ ಮತ್ತು ಮನಪಾ ಅಧಿಕಾರಿಗಳು ದಬ್ಬಾಳಿಕೆ ವಿರೋಧಿಸಿ , ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಎಸಗಿ ತೆರವುಗೊಳಿಸಿರುವುದನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಬೈಕಂಪಾಡಿಯ ಸಂತ್ರಸ್ತ ಬೀದಿಬದಿ ವ್ಯಾಪಾರಿಗಳು ಮಂಗಳವಾರ ಬೈಕಂಪಾಡಿಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್‌, ಪಟಾಕಿಯ ಅಂಗಡಿಗಳಿಗೆ ಜಾಗ ನೀಡುವ ಸಲುವಾಗಿ ಅನೇಕ ವರ್ಷಗಳಿಂದ ಬೈಕಂಪಾಡಿಯ ಎಪಿಎಂಸಿ ಬಳಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಗುರುತಿನ ಚೀಟಿ ಹೊಂದಿರುವ ವ್ಯಾಪಾರಿಗಳನ್ನು ಏಕಾಏಕಿ ತೆರವು ಗೊಳಿಸಿರುವ ಅಮಾನುಷ, ಅಮಾನವೀಯ, ಕಾನೂನು ಬಾಹಿರ ದಬ್ಬಾಳಿಕೆಯನ್ನು ಖಂಡಿಸುವುದಾಗಿ ಎಂದರು.

ಬಡವರು, ಅನಕ್ಷರಸ್ತ ಬೀದಿಬದಿ ವ್ಯಾಪಾರಿಗಳ ಸಂರಕ್ಷಣಾ ನಿಯಮ, ಕಾಯ್ದೆಗಳು ಜಾರಿಯಲ್ಲಿದ್ದರೂ ವ್ಯಾಪಾರಿಗಳ ಮೇಲೆ ರಕ್ಷಣೆ ನೀಡಬೇಕಿರುವ ಅಧಿಕಾರಿಗಳೇ ಅಮಾನುಷವಾಗಿ ನಡೆದುಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ. ಸೋಮವಾರ ಮನಪಾ ತೆರವು ಮಾಡಿರುವ ವ್ಯಾಪಾರಿಗಳು ಅಧಿಕೃತ ಗುರುತಿನ ಚೀಟಿ ಹೊಂದಿದವರೇ ಆಗಿದ್ದಾರೆ ಎಂದು ಮನಪಾ ಸುರತ್ಕಲ್‌ವಲಯ ಆಯುಕ್ತೆ ವಾಣಿ ಆಳ್ವ ಅವರಿಗೆ ಮನವರಿಕೆ ಮಾಡಿದರೂ ಅವರು ಕೇಳಲು ತಯಾರಾಗದೇ ವ್ಯಾಪಾರಿಗಳ ಜೊತೆ ಕ್ರೂರ ತೀತಿಯಲ್ಲಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

‌ಈ ನಿವೇಶನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದ್ದು, ಈ ನಿವೇಶನವನ್ನು ಪಟಾಕಿ ಮಾರಾಟಗಾರರಿಗೆ ಹರಾಜು ಹಾಕಲು ನಿಮಗೆ ನೈತಿಕತೆಯೇ ಇಲ್ಲ. ಆದರೂ ಬಡವರನ್ನು ಬೀದಿಪಾಲು ಮಾಡಿ ಇಂದು ಹರಾಜು ಮಾಡಿದ್ದೀರಿ. ಈ ಭೂಮಿಯ ಅಡಿಯಲ್ಲಿ ಎಂಆರ್‌ಪಿಎಲ್‌, ಬಿಪಿಸಿಎಲ್‌, ಎಚ್‌ಪಿಸಿಎಲ್‌ನ ಗ್ಯಾಸ್‌ ಮತ್ತು ಪೆಟ್ರೋಲ್‌ನ ಪೈಪ್‌ಗಳು ಹಾದು ಹೋಗಿವೆ. ಹೀಗಿರುವಾಗ ಯಾವ ಮಾನದಂಡದಲ್ಲಿ ಇಲ್ಲಿ ಪಟಾಕಿ ಅಂಗಡಿ ತೆರಯಲು ಅವಕಾಶ ನೀಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ ಇಮ್ತಿಯಾಝ್‌, ಇದು ಅಪಾಯಕಾರಿ ಮತ್ತು ಪಟಾಕಿ ವ್ಯಾಪಾರಕ್ಕೆ ಸುರತಕ್ಷಿತವಲ್ಲದ ಜಾಗ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಬೈಕಂಪಾಡಿಯ ವ್ಯಾಪಾರಿಗಳಷ್ಟೇ ಭಾಗವಹಿಸಿ ಸಾಂಕೇತಿಕವಾಗಿ ಪ್ರತಿಭಟನೆಯನ್ನು ನಡೆಸಿದ್ದೇವೆ. ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದ ನಿವೇಶನದಲ್ಲಿ ವ್ಯಾಪಾರ ಮಾಡುತ್ತಿದ್ದ ಮನಪಾ ಗುರುತಿಸಿರುವ ಅಧಿಕೃತ ಬೀದಿಬದಿ ವ್ಯಾಪಾರಿಗಳಿಗೆ ಇಲ್ಲಿ ನಿರಂತರ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಪಾಲಿಕೆ ಭರವಸೆ ನೀಡಿದಂತೆ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಾಣ ಕೊಡುವವರಗೆ ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಎಸಗಿದರೆ ನೋದಾಯಿತ 667ಮಂದಿ ವ್ಯಾಪಾರಿಗಳು ತಮ್ಮ ಕುಟುಂಬ ಸಮೇತರಾಗಿ ಮಂಗಳುರು ಮತ್ತು ಸುರತ್ಕಲ್‌ ವಲಯ ಕಚೇರಿಯ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಇಮ್ತಿಯಾಝ್‌ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ದ.ಕ. ಜಿಲ್ಲಾ ಬೀಬಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಶ್‌ ಆರ್.‌ ಎಸ್.‌, ಉಪಾಧ್ಯಕ್ಷ ಶಿವಪ್ಪ, ಯಶೋದರ ಬೈಕಂಪಾಡಿ, ಹನೀಫ್‌ ಸುರತ್ಕಲ್‌, ಹರೀಶ್‌ ಬೈಕಂಪಾಡಿ, ನಝರ್‌ ಬೈಕಂಪಾಡಿ ಹಾಗೂ ವ್ಯಾಪಾರಿಗಳು ಉಪಸ್ಥಿತರಿದ್ದರು.

ಎಲ್ಲರೂ ಪಟಾಕಿ ಸಿಡಿಸಿ ದೀಪ ಬೆಳಗಿಸಿ ಸಂಭ್ರಮಿಸಬೇಕಿದ್ದ ದೀಪಾವಳಿ ಹಬ್ಬವನ್ನು ಬೀದಿಬದಿ ವ್ಯಾಪಾರಿಗಳು ಕತ್ತಲೆಯಲ್ಲಿ ಆಚರಿಸುವಂತೆ ಸುರತ್ಕಲ್‌ ಉಪ ಆಯುಕ್ತರು ಮತ್ತು ಮನಪಾ ಅಧಿಕಾರಿಗಳು ಮಾಡುತ್ತಿದ್ದಾರೆ. ಪಟಾಕಿ ಮಾರಾಟ ಮಾಡುವುದುಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕಾಗಿ ಬಡ ಬೀದಿಬದಿಯ ವ್ಯಾಪಾರಿಗಳ ಮೇಲೆ ದೌರ್ಜನ್ಯ ಎಸಗಿ ಅವರ ಹೊಟ್ಟೆಗೆ ಹೊಡೆಯುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಮನಪಾ ಸ್ಪಷ್ಟವಾಗಿ ಕಾನೂನುಗಳನ್ನು ಉಲ್ಲಂಘಿಸಿ ಪಟಾಕಿ ವ್ಯಾಪಾರಕ್ಕೆ ಅವಕಾಶ ನೀಡುತ್ತಿರುವುದನ್ನು ಖಂಡಿಸುತ್ತೇವೆ.

- ಬಿ.ಕೆ. ಇಮ್ತಿಯಾಝ್‌, ಗೌರವಾಧ್ಯಕ್ಷರು, ದ.ಕ. ಜಿಲ್ಲಾ ಬೀಬಿಬದಿ ವ್ಯಾಪಾರಸ್ಥರ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X