Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ನಾರಾಯಣಗುರು ಜಯಂತಿ ದಿನಾಚರಣೆ

ಪುತ್ತೂರು: ನಾರಾಯಣಗುರು ಜಯಂತಿ ದಿನಾಚರಣೆ

ಮೌಲ್ಯವಿಲ್ಲದ ಶಿಕ್ಷಣ ಸಮಾಜಕ್ಕೆ ಸಹಕಾರಿಯಾಗಲಾರದು-ಗಿರೀಶ್ ನಂದನ್

ವಾರ್ತಾಭಾರತಿವಾರ್ತಾಭಾರತಿ31 Aug 2023 4:06 PM IST
share
ಪುತ್ತೂರು: ನಾರಾಯಣಗುರು ಜಯಂತಿ ದಿನಾಚರಣೆ

ಪುತ್ತೂರು: ಇಂದಿನ ಯುವ ಜನಾಂಗಕ್ಕೆ ವಿದ್ಯೆ ಸಿಗುತ್ತದೆ. ಆದರೆ ಮೌಲ್ಯದ ಕೊರತೆ ಇದೆ. ಶಿಕ್ಷಣದ ಜತೆಗೆ ಮೌಲ್ಯ ಬಹಳ ಪ್ರಮುಖವಾಗಿದೆ. ಮೌಲ್ಯವಿಲ್ಲದ ವಿದ್ಯೆ ಸಮಾಜಕ್ಕೆ ಸಹಕಾರಿಯಾಗಲಾರದು ಎಂದು ಪುತ್ತೂರು ಉಪವಿಬಾಗಾಧಿಕಾರಿ ಗಿರೀಶ್ ನಂದನ್ ಹೇಳಿದರು.

ಅವರು ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ `ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಜಯಂತಿ ದಿನಾಚರಣೆ' ಕಾರ್ಯಕ್ರಮದಲ್ಲಿ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ನಡೆಸಿ ಮಾತನಾಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ಜೊತೆಗೆ ಜಗತ್ತನ್ನು ಒಂದೇ ಜಾತಿ ಒಂದೇ ಮತ ಒಂದೇ ಧರ್ಮದಲ್ಲಿ ಕಂಡ ಅವರ ವ್ಯಕ್ತಿತ್ವವನ್ನು ನೆನಪಿಸುವುದು ಹಾಗೂ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಬೇಕು ಎಂದು ಹೇಳಿದರು.

ಸಂಸ್ಮರಣಾ ಉಪನ್ಯಾಸ ನೀಡಿದ ಕುಂಬ್ರ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ಆರ್.ಸಿ ನಾರಾಯಣ್ ಅವರು ಬ್ರಹ್ಮಶ್ರೀ ನಾರಾರಯಣ ಗುರುಗಳು ಧರ್ಮದ ಜಾಗೃತಿ ಜತೆಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಕೆಲಸ ಮಾಡಿದ್ದಾರೆ. ಮಾತೃಸ್ವರೂಪಿ ಚಿಂತನೆ ಭೋದಿಸುತ್ತಾ ಧರ್ಮ ಸ್ಥಾಪನೆಗಾಗಿ 40ಕ್ಕೂ ಅಧಿಕ ದೇವಳಗಳನ್ನು ನಿರ್ಮಿಸಿ ಧಾರ್ಮಿಕತೆಯ ಪುನರುತ್ಥಾನಗೊಳಿಸಿದ್ದಾರೆ. ತ್ರಿಭಾಷಾ ಸೂತ್ರವನ್ನು ಜಗತ್ತಿಗೆ ಭೋದಿಸಿ ಮಾತೃಭಾಷೆಯ ಜತೆಗೆ ಸಂಸ್ಕøತ ಮತ್ತು ಇಂಗ್ಲೀಷ್ ಭಾಷೆ ಕಲಿಯಲು ಪ್ರೇರಣೆ ನೀಡಿದ್ದಾರೆ.

ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅವರು ಮಾತನಾಡಿ, ನಾರಾಯಣಗುರುಗಳ ಕ್ರಾಂತಿ ಕಾರಿ ನಡೆ ಹಿಂದುಳಿದ ವರ್ಗಕ್ಕೆ ಮಾತ್ರವಲ್ಲದೆ ಎಲ್ಲಾ ಸಮುದಾಯಕ್ಕೂ ಇಂದಿಗೂ ಪ್ರಸ್ತುತವಾಗಿದೆ. ಅವರ ತತ್ವದಲ್ಲಿ ಹಲವು ಧರ್ಮಗಳು ಒಟ್ಟಾಗಿ ಜೀವಿಸುವ ಹಾಗೂ ದೇಶದ ಅಖಂಡತೆಯನ್ನು ಪ್ರತಿಪಾದಿಸುವ ಚಿಂತನೆ ಅಡಗಿದೆ ಎಂದರು.

ಇತಿಹಾಸ ಪ್ರಸಿದ್ಧ ಕೋಟಿಚೆನ್ನಯರ ಹುಟ್ಟೂರಾದ ಪುತ್ತೂರಿನ ಪಡುಮಲೆ ಅಭಿವೃದ್ಧಿಗೆ ಈ ಹಿಂದೆ ಸರ್ಕಾರದಿಂದ ರೂ.5 ಕೋಟಿ ಮಂಜೂರು ಆಗಿದ್ದು, ಈ ಹಣ ಸಮರ್ಪಕವಾಗಿ ಬಳಕೆಯಾಗದೆ ಬಾಕಿ ಉಳಿದಿದೆ. ಸ್ವಲ್ಪಮಟ್ಟಿನ ಅಭಿವೃದ್ಧಿ ಮಾತ್ರ ಆಗಿದೆ. ಈ ಅನುದಾನವನ್ನು ಶಾಸಕರ ನೇತೃತ್ವದಲ್ಲಿ ಅಭಿವೃದ್ಧಿ ರೂಪುರೇಷೆ ಮಾಡಿ ಬಳಕೆ ಮಾಡಬೇಕು ಎಂದು ಉಪವಿಗಾಧಿಕಾರಿ ಅವರಲ್ಲಿ ಮನವಿ ಮಾಡಿದರು.

ವೇದಿಕೆಯಲ್ಲಿ ಗ್ರೇಡ್ 2 ತಹಶೀಲ್ದಾರ್ ಲೋಕೇಶ್, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಉಪಸ್ಥಿತರಿದ್ದರು. ತಾಲೂಕು ಕಚೇರಿ ಸಿಬಂದಿ ದಯಾನಂದ ಕಾರ್ಯಕ್ರಮ ನಿರೂಪಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X