Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 'ಪರಿಹಾರ ಮೊತ್ತ ಸಿಗದೆ ಒಂದಿಂಚೂ...

'ಪರಿಹಾರ ಮೊತ್ತ ಸಿಗದೆ ಒಂದಿಂಚೂ ಜಾಗವನ್ನೂ ಹೆದ್ದಾರಿ ಅಗಲೀಕರಣಕ್ಕೆ ಬಿಟ್ಟು ಕೊಡೆವು'

ನಂತೂರಿನಲ್ಲಿ ರಾ.ಹೆ.169 ಭೂಮಾಲಕರ ಹೋರಾಟ ಸಮಿತಿಯಿಂದ ಧರಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ22 Aug 2023 12:56 PM IST
share
ಪರಿಹಾರ ಮೊತ್ತ ಸಿಗದೆ ಒಂದಿಂಚೂ ಜಾಗವನ್ನೂ ಹೆದ್ದಾರಿ ಅಗಲೀಕರಣಕ್ಕೆ ಬಿಟ್ಟು ಕೊಡೆವು
ಕುಲಶೇಖರಿಂದ ಕಾರ್ಕಳ (ಸಾಣೂರು)ವರೆಗಿನ ರಾ.ಹೆದ್ದಾರಿ 169ರ ಅಗಲೀಕರಣಕ್ಕಾಗಿ ಭೂಸ್ವಾಧೀನಗೊಂಡವರಿಗೆ ಸೂಕ್ತ ಪರಿಹಾರಧನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 169 ಭೂಮಾಲಕರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಂತೂರಿನ ತಾರೆತೋಟ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿ ಕಚೇರಿ ಎದುರು ಧರಣಿ ಆರಂಭಗೊಂಡಿದೆ.

*ಆ.30ರೊಳಗೆ ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ*

ಮಂಗಳೂರು, ಆ.22: ಕುಲಶೇಖರಿಂದ ಕಾರ್ಕಳ (ಸಾಣೂರು)ವರೆಗಿನ ರಾ.ಹೆದ್ದಾರಿ 169ರ ಅಗಲೀಕರಣಕ್ಕಾಗಿ ಭೂಸ್ವಾಧೀನಗೊಂಡವರಿಗೆ ಸೂಕ್ತ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗುವವರೆಗೂ ಒಂದಿಂಚೂ ಜಾಗವನ್ನು ಬಿಡಲಾಗದು ಎಂದು ಭೂ ಮಾಲಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಹೇಳಿದ್ದಾರೆ.

ನಂತೂರಿನ ತಾರೆತೋಟ ಬಳಿ ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿ ಕಚೇರಿ ಎದುರು ರಾಷ್ಟ್ರೀಯ ಹೆದ್ದಾರಿ 169 ಭೂಮಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರದಿಂದ ಆ. 30ರವರೆಗೆ ಹಮ್ಮಿಕೊಳ್ಳಲಾಗಿರುವ ಪ್ರತಿಭಟನಾ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

2016ರಿಂದ ಭೂಮಿ ಸರಕಾರದ ಕೈಯಲ್ಲಿದೆ. 2020ರಿಂದ ಭೂ ಪರಿಹಾರ ನೀಡುವ ಪ್ರಕ್ರಿಯೆಗಳು ನಡೆಯುತ್ತಿದ್ದರೂ ಪರಿಹಾರ ಮಾತ್ರ ನೀಡಿಲ್ಲ. ಅಧಿಕಾರಿಗಳ ವಿಳಂಬ ನೀತಿಯಿಂದಾಗಿ 483 ಕೋಟಿ ರೂ.ಗಳಿದ್ದ ಪರಿಹಾರಧನ 1,113 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ರಸ್ತೆ ಕಾಮಗಾರಿ ನಡೆಯದೆ ಟ್ರಾಫಿಕ್ ಸಮಸ್ಯೆಯಿಂದ ಪ್ರತಿನಿತ್ಯ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಮರಿಯಮ್ಮ ಥಾಮಸ್ ಆರೋಪಿಸಿದರು.

ಸರಕಾರವು ಭೂ ಕಳೆದುಕೊಂಡವರಿಗೆ ಪರಿಹಾರ ಹಣ ಭಿಕ್ಷೆ ನೀಡುವುದಲ್ಲ. ತಮ್ಮ ಮೌಲ್ಯಯುತ ಆಸ್ತಿಯನ್ನು ಕಳೆದುಕೊಂಡು ಮತ್ತೆ ಬದುಕು ಕಟ್ಟಿಕೊಳ್ಳಬೇಕಾದರೆ ಸೂಕ್ತ ಪರಿಹಾರ ಒದಗಿಸುವುದು ಸರಕಾರದ ಕರ್ತವ್ಯ. ರಸ್ತೆ ನಿರ್ಮಾಣದ ಬಳಿಕ ಅಲ್ಲಿ ಟೋಲ್ ಮೂಲಕ ಹಣ ಸಂಗ್ರಹಿಸುತ್ತಾರೆ. ಹಾಗಿರುವಾಗ ಭೂ ಸಂತ್ರಸ್ತರಿಗೆ ಪರಿಹಾರ ನೀಡಲು ಈ ರೀತಿಯ ವಿಳಂಬ ಧೋರಣೆ ಯಾಕೆ ಎಂದು ಅವರು ಪ್ರಶ್ನಿಸಿದರು.

9 ದಿನಗಳ ಕಾಲ ನಡೆಯಲಿರುವ ಪ್ರತಿಭಟನಾ ಧರಣಿಯ ಪ್ರಥಮ ದಿನವಾದ ಮಂಗಳವಾರದ ಪ್ರತಿಭಟನೆಯಲ್ಲಿ ಪದವು ಗ್ರಾಮ ಹಾಗೂ ಆಸುಪಾಸಿನ ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದು, ಧರಣಿಯ ಉಳಿದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಲಿದ್ದಾರೆ. ಈ ಒಂಭತ್ತು ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸುವುದಾಗಿ ಅವರು ಹೇಳಿದರು.

ಸಂಚಾಲಕ ಪ್ರಕಾಶ್ಚಂದ್ರ, ವಿಶ್ವಜಿತ್, ರತ್ನಾಕರ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

ದೀಪ ಬೆಳಗಿಸಿ ಪ್ರತಿಭಟನಾ ಧರಣಿಯ ಉದ್ಘಾಟನೆಗೂ ಮುನ್ನ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಶತಾಯುಷಿ ಸೀತಾರಾಮ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತನ್ನ ಕೃಷಿ ಭೂಮಿಯನ್ನು ಕಳೆದುಕೊಳ್ಳುತ್ತಿರುವ ಶತಾಯುಷಿ ಸೀತಾರಾಮ ಶೆಟ್ಟಿಯವರು ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.

‘ಗುರುಪುರ ಅಡ್ಡೂರು ಬಳಿ ಈಗಾಗಲೇ ಒಂದು ಸೇತುವೆ ಇದೆ. ಆ ಸೇತುವೆಯನ್ನು ಬಿಟ್ಟು ಮತ್ತೆ ಎರಡು ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಅಡ್ಡೂರಿನಿಂದ ಉಳಿಪಾಡಿವರೆಗೆ ಸುತ್ತುಬಳಸಿ ರಸ್ತೆ ಮಾಡಿರುವುದರಿಂದ ನಾಲ್ಕೈದು ಕಿ.ಮೀ. ಹೆಚ್ಚುವರಿ ರಸ್ತೆಯಾಗಿದೆ. ಇದರಿಂದ 125 ಕೋಟಿ ರೂ. ಹೆಚ್ಚುವರಿ ಜನರ ತೆರಿಗೆ ಹಣ ಬಳಕೆಯಾಗುತ್ತಿದೆ. ಕೆಲವೆಡೆ ಅನುಕೂಲಕ್ಕೆ ತಕ್ಕ ಹಾಗೆ ನಕ್ಷೆ ಬದಲಾವಣೆ ಮಾಡಲಾಗಿದೆ.’

-ಜಯರಾಂ ಪೂಜಾರಿ, ಬೆಳುವಾಯಿ ಗ್ರಾಮ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X