Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಹಾರ, ಆರ್ಥಿಕ ಭದ್ರತೆಯಲ್ಲಿ ಮೀನುಗಾರಿಕೆ...

ಆಹಾರ, ಆರ್ಥಿಕ ಭದ್ರತೆಯಲ್ಲಿ ಮೀನುಗಾರಿಕೆ ಪಾತ್ರ ಪ್ರಮುಖ: ಡಾ.ಎನ್.ಎ. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Feb 2024 3:27 PM IST
share

ಮಂಗಳೂರು, ಫೆ. 20: ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಆರ್ಥಿಕ ಸುಭದ್ರತೆಯಲ್ಲಿ ಮೀನುಗಾರಿಕಾ ಕ್ಷೇತ್ರದ ಪಾತ್ರ ಮಹತ್ವದಾಗಿದ್ದು, ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಆ ದಿಸೆಯಲ್ಲಿ ಈ ಕ್ಷೇತ್ರದ ಸುಧಾರಣೆಗೆ ಪೂರಕವಾಗಲಿದೆ ಎಂದು ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ಕಾಲೇಜಿನ ವಿಸ್ತರಣಾ ನಿರ್ದೇಶಕ ಡಾ. ಎನ್.ಎ. ಪಾಟೀಲ್ ಹೇಳಿದ್ದಾರೆ.

ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನರಿಗೆ ಪೌಷ್ಟಿಕ ಆಹಾರವನ್ನು ಒದಗಿಸುವಲ್ಲಿ ಮೀನುಗಾರಿಕಾ ವಲಯ ಮುಂಚೂಣಿಯಲ್ಲಿದ್ದು, ಮೀನುಗಾರರ ಅಭಿವೃದ್ಧಿ ಮೂಲಕ ದೇಶದ ಅಭಿವೃದ್ಧಿ ಹಾಗೂ ಅಪೌಷ್ಟಿಕತೆ ನಿವಾರಣೆ ಆಗಬೇಕು ಎಂದರು.

ಉದ್ಘಾಟನಾ ಕಾರ್ಯಕ್ರಮದ ವೇಳೆ ವೀಡಿಯೋ ಕಾನ್ಫರೆನ್ಸ್ ಸಂದೇಶ ನೀಡಿದ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಡಾ. ಎಲ್. ನರಸಿಂಹ ಮೂರ್ತಿ, ಮತ್ಸ್ಯ ಸಂಪದ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿರುವ ರೈತರು ಹಾಗೂ ವಿಜ್ಞಾನಿಗಳು ಮುಂದಿನ 10 ವರ್ಷಗಳಿಗೆ ಪೂರಕವಾಗಿ ಜನಸಂಖ್ಯೆಯನ್ನು ಗಮನದಲ್ಲಿಸಿರಿಕೊಂಡು ಮೀನುಗಾರಿಕಾ ವಲಯದಲ್ಲಿ ಆಗಬೇಕಾಗಿರುವ ಬದಲಾವಣೆಗಳು, ರೈತರಿಗೆ ಏನು ಅಗತ್ಯವಿದೆ ಎಂಬ ಬಗ್ಗೆ ಮಾಹಿತಿಯನ್ನು ಒಳಗೊಂಡ ವರದಿಯನ್ನು ಸಲ್ಲಿಸಿದರೆ ಕಾನೂನು ರೂಪಿಸುವವರಿಗೆ ಅಗತ್ಯವಾಗಲಿದೆ ಎಂದರು.

ಅಳಿವಿನಂಚಿನಲ್ಲಿರುವ ಮೀನಿನ ಸಂತತಿಗಳ ಸಂರಕ್ಷಣೆಯ ನಿಟ್ಟಿನಲ್ಲಿ ಮಂಡಳಿಯು ಈಗಾಗಲೇ ನದಿ ಮೀನು ಸಾಕಾಣೆ ಮೂಲಕ ಕ್ರಮಕ್ಕೆ ಮುಂದಾಗಿದ್ದರೆ, 5 ಲಕ್ಷ ಮೀನುಗಾರರಿಗೆ ವಿವಿಧ ರೀತಿಯ ಯೋಜನೆಗಳನ್ನು ಒದಗಿಸಿದೆ. ಮೀನಿನ ನಿರ್ವಹಣೆ, ಸಂರಕ್ಷಣೆ ಮತ್ತು ಮಾರಾಟದಲ್ಲಿ ಗಮನಾರ್ಹ ಸುಧಾರಣೆ ತರಲು ಮೂಲಸೌಕರ್ಯ ಸೌಲಭ್ಯಗಳನ್ನು ರಚಿಸಲು ಮಂಡಳಿ ಬದ್ಧವಾಗಿದೆ. ಭಾರತ ಸರಕಾರದ ಆತ್ಮ ನಿರ್ಭರ್ ಭಾರತ್ ನ ಉಪಕ್ರಮವಾಗಿ, ಸಂಶೋಧನಾ ಸಂಸ್ಥೆಗಳು ಮತ್ತು ಸಂಸ್ಥೆಗಳ ಬೆಂಬಲದೊಂದಿಗೆ ಮಾರುಕಟ್ಟೆ ಬದಲಾವಣೆಗಳು, ಆಹಾರ ಭದ್ರತೆ ಸಮಸ್ಯೆಗಳು ಮತ್ತು ವಲಯದಲ್ಲಿನ ಹವಾಮಾನ ಬದಲಾವಣೆಗಳಿಂದ ಉಂಟಾಗುವ ಸವಾಲುಗಳನ್ನು ಎದುರಿಸಲು ಶ್ರಮಿಸುತ್ತಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಸ್ಥಳೀಯ ಕಾರ್ಪೊರೇಟರ್ ಭರತ್ ಕುಮಾರ್, ಎಸ್.ಎಂ. ಶಿವಪ್ರಕಾಶ್, ವಿವೇಕ್ ಆರ್., ಡಾ.ಟಿ.ಎನ್. ರಾಜೇಶ್, ಡಾ. ಟಿ.ಜೆ. ರಮೇಶ್, ಡಾ. ವಿಜಯ ಕುಮಾರ್, ಡಾ. ಕೆ.ಬಿ. ರಾಜಣ್ಣ, ಡಾ. ಮಂಜಪ್ಪ ಎನ್. ಉಪಸ್ಥಿತರಿದ್ದರು.

ಈ ಸಂದರ್ಭ ಕಾಲೇಜಿನ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಎಚ್.ಎನ್. ಆಂಜನೇಯಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ. ವಿಜಯ ಕುಮಾರ್ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಎ.ಟಿ. ರಾಮಚಂದ್ರ ನಾಯ್ಕ್ ಸ್ವಾಗತಿಸಿದರು.

ಕಾರ್ಯಕ್ರಮದ ಅಂಗವಾಗಿ ವಿಜ್ಞಾನಿಗಳಿಂದ ರೈತರೊಡನೆ ಸಂವಾದ ಕಾರ್ಯಕ್ರಮ, ವಿಷಯಾಧಾರಿತ ವೈಜ್ಞಾನಿಕ ಮಾಹಿತಿಗಳು ಮತ್ತು ಜಲಕೃಷಿಯಲ್ಲಿ ನವೀನ ತಂತ್ರಜ್ಞಾನದ ಪರಿಚಯ, ರೈತರ ಕೃಷಿ ಹೊಂಡಗಳಲ್ಲಿ ಮೀನು ಸಾಕಣೆಗೆ ಸೂಕ್ತವಾದ ಮೀನಿನ ತಳಿಗಳ ಪರಿಚಯ ಮತ್ತು ನಿರ್ವಹಣೆ ಮೊದಲಾದ ಕಾರ್ಯಕ್ರಮಗಳ ಜತೆಗೆ ಮೀನುಗಾರಿಕೆಗೆ ಅಗತ್ಯವಾದ ಸಲಕರಣೆಗಳು, ಅವಿಷ್ಕಾರಗಳು, ಉತ್ಪನ್ನಗಳ ಪ್ರದರ್ಶನ ಮಳಿಗೆಗಳ ಮೂಲಕ ಮಾಹಿತಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X