Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ -...

ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ - ಸಮುದಾಯ ಸಮ್ಮಿಲನ ಕಾರ್ಯಕ್ರಮ

“ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯ ಸಂಘಟನೆ ಸಾಹೇಬಾನ್”

ವಾರ್ತಾಭಾರತಿವಾರ್ತಾಭಾರತಿ17 Dec 2023 12:21 AM IST
share
ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ - ಸಮುದಾಯ ಸಮ್ಮಿಲನ ಕಾರ್ಯಕ್ರಮ

ಮಂಗಳೂರು : ಸಾಹೇಬಾನ್ ವೆಲ್ಫೇರ್ ಟ್ರಸ್ಟ್ ( ಎಸ್‌ಡಬ್ಲ್ಯೂಟಿ) ಸಾಹೇಬಾನ್ ಯುಎಇಯ ಒಂದು ಶಾಖೆಯಾಗಿದ್ದು, ಇದು 30 ವರ್ಷಗಳಿಂದ ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ, ಎಂದು ಟ್ರಸ್ಟ್‌ನ ಕಾರ್ಯದರ್ಶಿ ಸೈಯ್ಯದ್ ಸಿರಾಜ್ ಅಹ್ಮದ್ ಹೇಳಿದ್ದಾರೆ.

ಸಾಹೇಬನ್ ವೆಲ್ಫೇರ್ ಟ್ರಸ್ಟ್ (SWT) ಮಂಗಳೂರು ವತಿಯಿಂದ ಕೊಡಿಯಾಲ್ ಬೈಲ್ ನ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಶನಿವಾರ ಆಯೋಜಿಸಿದ್ದ 'ಸಾಹೇಬಾನ್ (ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಿರುವ ಉರ್ದು ಮಾತನಾಡುವ ಹನಫಿ ಸಮುದಾಯ) ಘಟಕದ ಉದ್ಘಾಟನೆ ಮತ್ತು ಸಮ್ಮಿಲನʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸಾಹಿಬಾನ್ ಸಮುದಾಯದ ಹೆಚ್ಚಿನವರು ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಭಾರತದ ಇತರ ಭಾಗಗಳಿಗೆ, ವಿದೇಶಗಳಿಗೆ ವಲಸೆ ಹೋಗಿದ್ದಾರೆ. ಸಮುದಾಯವು ದೇಶಕ್ಕೆ ಸಮುದಾಯಕ್ಕೆ ಸ್ಫೂರ್ತಿಯ ಮೂಲವಾಗಿರುವ ಸ್ವಾತಂತ್ರ್ಯ ಹೋರಾಟಗಾರರು, ನಾಗರಿಕ ಸೇವೆಯಲ್ಲಿರುವ ಉನ್ನತ ಶ್ರೇಣಿಯ ಅಧಿಕಾರಿಗಳು, ಭಾರತೀಯ ಸಶಸ್ತ್ರ ಪಡೆಯಲ್ಲಿರುವ ಯೋಧರು, ಬ್ಯಾಂಕರ್‌ಗಳು, ನ್ಯಾಯಾಧೀಶರು, ವೃತ್ತಿಪರರು, ವಿದ್ವಾಂಸರು, ಹೆಸರಾಂತ ಕಲಾವಿದರು, ಪ್ರಮುಖ ಉದ್ಯಮಿಗಳನ್ನು ಕೊಡುಗೆಯಾಗಿ ನೀಡಿದೆ” ಎಂದು ಹೇಳಿದರು.

ಟ್ರಸ್ಟ್‌ನ ಅಧ್ಯಕ್ಷ ಅಫ್ರೋಝ್ ಅಸ್ಸಾದಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಮುಝಫರ್ ಅಸ್ಸಾದಿ ಅವರು ಸಾಹೇಬ ಸಮುದಾಯವು ಎದುರಿಸುತ್ತಿರುವ ಸವಾಲುಗಳ ಕುರಿತು ಮಾತನಾಡಿದರು. ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಸುಧಾರಣೆಯ ಅಗತ್ಯವನ್ನು ಒತ್ತಿ ಹೇಳಿದರು.

ಖತರ್‌ನ ಮುಮ್ತಾಝ್ ಹುಸೇನ್ ಅವರು ಉರ್ದು ಸಂಸ್ಕೃತಿ ಮತ್ತು ಭಾಷೆ ಮತ್ತು ಅದನ್ನು ಉತ್ತೇಜಿಸುವ ಮತ್ತು ಪೋಷಿಸುವ ಅಗತ್ಯತೆಯ ಕುರಿತು ಮಾತನಾಡಿದರು.

ಇಮ್ತಿಯಾಝ್ ಖತೀಬ್ ಅವರು SWT ಟ್ರಸ್ಟ್ ಅನ್ನು ಸಭೆಗೆ ಪರಿಚಯಿಸಿ, ಅದರ ಉದ್ದೇಶ ಮತ್ತು ಗುರಿಗಳನ್ನು ವಿವರಿಸಿದರು. ಜಮೀಯ್ಯತುಲ್ ಫಲಾಹ್ ದ.ಕ ಹಾಗೂ ಉಡುಪಿ ಜಿಲ್ಲೆಯ ಮಾಜಿ ಅಧ್ಯಕ್ಷ ಶಬಿಹ್ ಅಹ್ಮದ್ ಕಾಝಿ, ಇನ್‌ಲ್ಯಾಂಡ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೋಟ ಇಬ್ರಾಹಿಂ ಸಾಹೇಬ್ ಮಾತನಾಡಿದರು.

ಸಮಾಜಕ್ಕೆ ರಾಷ್ಟ್ರಕ್ಕೆ ಮಹತ್ವದ ಕೊಡುಗೆಗಳಿಗಾಗಿ ಈ ಕೆಳಗಿನವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು:

ಮೇಜರ್ ಡಿ ಎಂ ನಿಝಾಮುದ್ದೀನ್ (ನಿವೃತ್ತ), ಭಾರತೀಯ ಸಶಸ್ತ್ರ ಪಡೆಗಳು ಮತ್ತು ಶೌರ್ಯ ಪದಕ ವಿಜೇತರು.

ಬಿ ಜಿ ಮೊಹಮ್ಮದ್, ಖ್ಯಾತ ಕಲಾವಿದರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರು(ಮರಣೋತ್ತರ)

ಡಾ.ಸಫ್ವಾನ್ ಅಹಮದ್, ನರರೋಗ ತಜ್ಞ ಹಾಗೂ ಚಿನ್ನದ ಪದಕ ವಿಜೇತ ವೈದ್ಯ

ಡಾ. ಫಾತಿಮಾ ರೈಸಾ, ರೇಡಿಯಾಲಜಿಸ್ಟ್ ಮತ್ತು ಚಿನ್ನದ ಪದಕ ವಿಜೇತೆ ವೈದ್ಯೆ

ಇಲ್ ಹಮ್ ದಾವೂದ್, 2021/22 ನೇ ಸಾಲಿನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 2ನೇ ರ‍್ಯಾಂಕ್‌ ವಿಜೇತರು.

ಅಲಿಯಾ ಇಮ್ತಿಯಾಝ್ ಖಾನ್, 2022/23ನೇ ಸಾಲಿನ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 4 ನೇ ರ‍್ಯಾಂಕ್‌ ವಿಜೇತೆ.

ಮತೀನ್ ಅಹ್ಮದ್, ಹಕ್ ಅಸ್ಸಾದಿ, ಮೆರಾಜ್ ಯೂಸುಫ್, ನಝ್ಮುದ್ದೀನ್ ಅಸ್ಸಾದಿ, ಮೊಹಮ್ಮದ್ ಅಕ್ರಂ, ಆಸಿಫ್ ಇಕ್ಬಾಲ್, ಅಬಿದ್, ಝುಬೇರ್ ಅಂಬರ್ ಸೇರಿದಂತೆ ಪ್ರಮುಖರನ್ನು ಸನ್ಮಾನಿಸಲಾಯಿತು.

ಇಮ್ತಿಯಾಝ್ ಖತೀಬ್ ರವರ ಖಿರಾತ್ ಪಠಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಆಲಿಯಾ ಇಮ್ತಿಯಾಝ್ ವಂದಿಸಿದರು. ಅಂಶು ಮರ್ಯಮ್ ನಿರೂಪಿಸಿದರು. ಇಕ್ಬಾಲ್ ಮನ್ನಾ, ಟ್ರಸ್ಟಿಗಳಾದ ರಫೀಕ್ ಅಸ್ಸಾದಿ, ಅಲ್ತಾಫ್ ಖತೀಬ್, ಸಾಹಿಲ್ ಝಹೀರ್ ಇದ್ದರು.

ಕಾರ್ಯಕ್ರಮದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಗಲ್ಫ್ ದೇಶಗಳಿಂದ ಸಾಹೇಬಾನ್ ಸಮುದಾಯದ 120 ಕ್ಕೂ ಹೆಚ್ಚು ಪ್ರಮುಖರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X