Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ ಸಿಡಿಸಿಸಿ ಬ್ಯಾಂಕ್ ಗೆ 110.40 ಕೋಟಿ...

ಎಸ್ ಸಿಡಿಸಿಸಿ ಬ್ಯಾಂಕ್ ಗೆ 110.40 ಕೋಟಿ ರೂ. ಸಾರ್ವಕಾಲಿಕ ದಾಖಲೆಯ ಲಾಭ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ2 April 2025 4:20 PM IST
share
ಎಸ್ ಸಿಡಿಸಿಸಿ ಬ್ಯಾಂಕ್ ಗೆ 110.40 ಕೋಟಿ ರೂ. ಸಾರ್ವಕಾಲಿಕ ದಾಖಲೆಯ ಲಾಭ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು, ಎ.2: ಎಸ್ ಸಿಡಿಸಿಸಿ ಬ್ಯಾಂಕಿನ 2025ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ. 110.40 ಕೋಟಿ ಲಾಭ ಗಳಿಸಿದೆ. ಇದು ಎಸ್ಸಿಡಿಸಿಸಿ ಬ್ಯಾಂಕ್ ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಅವರು ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ತನ್ನ 113 ಶಾಖೆಗಳ ಮೂಲಕ ನೀಡುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. 111 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ಕಳೆದ ವರ್ಷ ಕ್ಕಿಂತ ಈ ಬಾರಿ ಲಾಭಾಂಶ ಶೇ 39.59 ಏರಿಕೆಯಾಗಿದೆ (ರೂ.79.09). ಇದು ಎಸ್ ಸಿಡಿಸಿಸಿ ಬ್ಯಾಂಕಿನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಹಾಗೂ ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು 3.52 ಶೇಕಡದಿಂದ 2.71 ಶೇಕಡಕ್ಕೆ ಇಳಿಕೆಯಾಗಿರುವುದು ಒಂದು ಗಮನಾರ್ಹ ಸಾಧನೆಯಾಗಿದೆ ಎಂದು ಡಾ. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿ 17366.68 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರ (ರೂ.15544.34) ಈ ಬಾರಿ ಶೇ 11.72 ಏರಿಕೆ ಕಂಡಿದೆ. 2025-26ನೆ ಸಾಲಿನಲ್ಲಿ ಬ್ಯಾಂಕ್ ರೂ.19250.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.

*ರೂ. 7882.76 ಕೋಟಿ ಠೇವಣಿ:

ಠೇವಣಿಗಳ ಸಂಗ್ರಹದಲ್ಲಿ ಎಲ್ಲಾ ಬ್ಯಾಂಕ್ ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್ ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು 7882.76 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ.ಮೂಲಕ ಠೇವಣಿ ಸಂಗ್ರಹದಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಕ್ಕಿಂತ ಈ ಬಾರಿ ಶೇ.9.11 ಏರಿಕೆಯಾಗಿದೆ.

*ರೂ.7775.44 ಕೋಟಿ ಮುಂಗಡ:

ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.7775.44 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2130.95 ಕೋಟಿ ರೂಪಾಯಿ. ಮಧ್ಯಮಾವಧಿ ಸಾಲ ರೂ.169.79 ಕೋಟಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2300.74 ಕೋಟಿ ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ರೂ.5474.70 ಕೋಟಿ ಸಾಲ ನೀಡಲಾಗಿದೆ.

*ಸತತ 30 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡ 100ರ ಸಾಧನೆ ಬ್ಯಾಂಕ್ ವರದಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.

*ಬ್ಯಾಂಕ್ ಗೆ ಒಟ್ಟು 1086 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.476.00 ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ. 12873.14 ಕೋಟಿ ಆಗಿದ್ದು. ಇದು ಕಳೆದ ವರ್ಷಕ್ಕಿಂತ (ರೂ.11418.68 ಕೋಟಿ) ಶೇಕಡ 12.74ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.270.15 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ಶೇಕಡ 8.02 ರಷ್ಟು ಏರಿಕೆ ಕಂಡಿದೆ.

*'ರುಪೇ' (RuPay) ಕಿಸಾನ್ ಕ್ರೆಡಿಟ್ ಕಾರ್ಡ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್ ನ್ನು ನೀಡಿದೆ. ಈಗಾಗಲೇ 1,41,266 ರುಪೇ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ,86,887 ರುಪೇ ಡೆಬಿಟ್ ಕಾರ್ಡ್ ಗಳನ್ನು ನೀಡಿದೆ.ಕಾರ್ಡ್ಗಳನ್ನು ರೈತರಿಗೆ ವಿತರಿಸಲಾಗಿದೆ. 86,887 ರುಪೇ ಡೆಬಿಟ್ ಕಾರ್ಡ್ಗಳನ್ನು ಬ್ಯಾಂಕ್ನ ಇತರ ಗ್ರಾಹಕರಿಗೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

*ಮುಂದಿನ ಯೋಜನೆಗಳು

ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ: IMPS (Inter Bank Mobile)

Payment System) ಯೋಜನೆಯನ್ನು ಕಾರ್ಯಗತಗೊಳಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ.ಈ ಯೋಜನೆಯಿಂದ ಗ್ರಾಹಕರು ಮೊಬೈಲ್ ಮುಖಾಂತರ ತಮ್ಮ ಖಾತೆಯಿಂದ ಇತರಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು.

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unilied Payments Interface - UPI) : ಇದು ಜನಸಾಮಾನ್ಯರು ಉಪಯೋಗಿಸುವ ಯುಪಿಐ ಪಾವತಿ ವಿಧಾನವಾಗಿದೆ. ಈ ವಿಧಾನದಲ್ಲಿ ಸ್ಮಾರ್ಟ್ ಫೋನ್ ಅನ್ನು ವರ್ಚುವಲ್ ಡೆಬಿಟ್ ಕಾರ್ಡ್ನಂತೆ ಬಳಸಬಹುದು. ಇದರಿಂದ ತ್ವರಿತವಾಗಿ ಹಣವನ್ನು ಪಾವತಿಸಬಹುದು ಹಾಗೂ ಸ್ವೀಕರಿಸಬಹುದು. ಮಾತ್ರವಲ್ಲದೆ, ಯುಪಿಐ ಸೇವೆಗಳಾದ ಗೂಗಲ್ ಪೇ, ಫೋನ್ ಪೇ ಹಾಗೂ ಇತರ ಪಾವತಿ ವಿಧಾನವನ್ನು ಬಳಸಬಹುದು. ಅಲ್ಲದೆ, ವಿದ್ಯುತ್ ಬಿಲ್, ನೀರಿನ ಬಿಲ್ ಹಾಗೂ ಟೆಲಿಫೋನ್ ಬಿಲ್ಗಳನ್ನು ಪಾವತಿಸಲು ಅವಕಾಶವಿದೆ.

ಯುಪಿಐ ಚಾಲಿತ ಆ್ಯಪ್ಗಳೊಂದಿಗೆ QR Code ಸ್ಕ್ಯಾನ್ ಮಾಡುವ ಮೂಲಕ ವ್ಯಾಪಾರ ಕೇಂದ್ರಗಳಲ್ಲೂ ಈ ಮಾದರಿಯನ್ನು ಉಪಯೋಗಿಸಬಹುದು ಎಂದರು.

*10 ಹೊಸ ಶಾಖೆಗಳು: ಬ್ಯಾಂಕ್ ಮುಂದಿನ ಅವಧಿಯಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

*ಬ್ಯಾಂಕಿನ ಸಾಧನೆ:- ಬ್ಯಾಂಕಿಗೆ 22 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 19 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ. ಎರಡು ಬಾರಿ "ಎಫ್ಸಿಬಿಎ" ರಾಷ್ಟ್ರೀಯ ಪ್ರಶಸ್ತಿ, ಎರಡು ಬಾರಿ ಪ್ರತಿಷ್ಠಿತ "ಬ್ಯಾಂಕ್ ಬ್ಲೂ ರಿಬ್ಬನ್ ಪ್ರಶಸ್ತಿ" ,ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ 'ಅಟಲ್ ಪಿಂಚಣಿ ಯೋಜನೆ'ಯ ಚಂದಾದಾರರನ್ನು ನೋಂದಾಯಿಸಿ, ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ 4 ಬಾರಿ ಪ್ರಶಸ್ತಿಗೆ ಪಾತ್ರವಾಗಿದೆ.

ಬ್ಯಾಂಕ್ ಸಿಬ್ಬಂದಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್.

* ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಬ್ಯಾಂಕ್ ಒಟ್ಟು 34,621 ಗುಂಪುಗಳನ್ನು ಹೊಂದಿದೆ.ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ.

*ಜಿಲ್ಲೆಯಲ್ಲಿ ಒಟ್ಟು 1,62,839 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 91,548 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.

*ಬ್ಯಾಂಕಿನ ಎಲ್ಲಾ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ. ಆರ್.ಟಿ.ಜಿ.ಎಸ್./ನೆಫ್ಟ್ ಹಾಗೂ ಕೋರ್ ಬ್ಯಾಂಕಿಂಗ್ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕಿನ 20 ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ.

* ಬ್ಯಾಂಕ್ ಮಂಗಳೂರಿನ ಕೇಂದ್ರ ಕಚೇರಿಯಲ್ಲಿರುವ ಕೊಡಿಯಾಲ್ ಬೈಲ್ ಶಾಖೆ ಸೇರಿದಂತೆ ಪುತ್ತೂರು, ಉಪ್ಪಿನಂಗಡಿ, ಸವಣೂರು, ಬೆಳ್ತಂಗಡಿ ಹಾಗೂ ಸಿದ್ದಾಪುರಗಳಲ್ಲಿರುವ ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.

* ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ ಸುಸಜ್ಜಿತ ವಾಹನದಲ್ಲಿ (Bank on Wheel) ಎಲ್ಲಾ ರೀತಿಯ ಬ್ಯಾಂಕಿಂಗ್ ಸೇವೆಯನ್ನು ಹಾಗೂ ಎ.ಟಿ.ಎಂ. ಸೌಲಭ್ಯವನ್ನು ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಗಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಮೊಬೈಲ್ ಬ್ಯಾಂಕಿಂಗ್" ವ್ಯವಸ್ಥೆಯು ಕಾರ್ಯರೂಪದಲ್ಲಿದೆ.

* ಬ್ಯಾಂಕಿನ ಎಲ್ಲಾ ಶಾಖೆಗಳ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

* ತರಬೇತಿ ಕೇಂದ್ರ: ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಸಹಕಾರಿ ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರವನ್ನು ಬ್ಯಾಂಕ್ ಹೊಂದಿದೆ.

*ಟ್ಯಾಬ್ ಬ್ಯಾಂಕಿಂಗ್: ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗ್ರಾಹಕರಿಗೆ ಬ್ಯಾಂಕ್ ಪರಿಚಯಿಸಿದೆ. ಮನೆ ಅಥವಾ ಕಚೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆದು ನಿರ್ವಹಿಸಲುಅನುಕೂಲಕರವಾಗಿದೆ.ಮೊಬೈಲ್ ಆ್ಯಪ್ ,15 ಶಾಖೆಗಳಲ್ಲಿ ಎಟಿಎಂ ಅಳವಡಿಕೆ ಮಾಡಲಾಗಿದೆ.

ಮೇ 10ರಂದು ಮಂಗಳೂರಿನಲ್ಲಿ ಸುಮಾರು ಒಂದೂವರೆ ಲಕ್ಷ ನವೋದಯ ಸ್ವ ಸಹಾಯ ಗುಂಪುಗಳ ಸದಸ್ಯರು ತಮ್ಮ ಸಮವಸ್ತ್ರ ದೊಂದಿಗೆ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ,ಎಸ್.ಬಿ. ಜಯರಾಮ ರೈ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್ ,ಮೋನಪ್ಪ ಶೆಟ್ಟಿ ಎಕ್ಕಾರು, ವಾದಿರಾಜ ಶೆಟ್ಟಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X