ಗುತ್ತಿಗಾರಿನಲ್ಲಿ ಎಸ್ಸಿಡಿಸಿಸಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

ಸುಳ್ಯ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಕೇವಲ ಬ್ಯಾಂಕಿನ ಚಟುವಟಿಕೆ ಮಾತ್ರವಲ್ಲದೇ ಹಲವು ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾದದ್ದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ರಾಘವೇಂದ್ರ ಕಾಂಪ್ಲೆಕ್ಸ್ ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡ ಎಸ್ಸಿಡಿಸಿಸಿ ಬ್ಯಾಂಕಿನ ಗುತ್ತಿಗಾರು ಶಾಖೆಯನ್ನು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಡಿಸಿಸಿ ಬ್ಯಾಂಕ್ ಸಹಕಾರಿ ಸಂಘಗಳಿಗೆ ಬೆನ್ನೆಲುಬಾಗಿ ನಿಂತಿದೆ. ರೈತರ ಪರವಾಗಿ ನಿಂತಿರುವ ಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ, ಬ್ಯಾಂಕ್ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಅದರಂತೆ ಬೆಳೆಯುತ್ತಿರುವ ಗುತ್ತಿಗಾರು ಪೇಟೆಯಲ್ಲಿನ ಶಾಖೆಯಲ್ಲೂ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿರುವುದು ಗ್ರಾಹಕರಿಗೂ, ಇಲ್ಲಿನ ಪ್ರದೇಶದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.
ಡಿಸಿಸಿ ಬ್ಯಾಂಕಿನ ಉಪಾದ್ಯಕ್ಷ ವಿನಯ ಕುಮಾರ್ ಸೂರಿಂಜೆ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕಿನ ನಿರ್ದೆಶಕ ಕುಶಾಲಪ್ಪ ಗೌಡ.ಪಿ. ಶಾಖೆಯನ್ನು ಮತ್ತು ಎ.ಟಿ.ಎಂ. ಕೇಂದ್ರವನ್ನು ಉದ್ಘಾಟಿಸಿದರು. ಭದ್ರತಾ ಕೋಶವನ್ನು ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿ, ವಾಹನ ಸಾಲಪತ್ರ ವಿತರಿಸಿದರು.
ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ ಠೇವಣಿ ಪತ್ರ ವಿತರಣೆ ಮಾಡಿದರು. ಗುತ್ತಿಗಾರು ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಲಾಕರ್ ಕೀ ವಿತರಿಸಿದರು. ಡಿಸಿಸಿ ಬ್ಯಾಂಕ್ ನಿರ್ದೆಶಕ ಎಸ್.ಎನ್.ಮನ್ಮಥ ಹೊಸ ಸ್ವಸಹಾಯ ಸಂಘಗಳ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ನಿರ್ದೇಶಕರಾದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಮಡಪ್ಪಾಡಿ ಸಹಕಾರಿ ಸಂಘದ ನಿರ್ದೇಶಕ ಪಿ.ಸಿ.ಜಯರಾಮ, ಮಿತ್ರದೇವ ಮಡಪ್ಪಾಡಿ, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ವಿಷ್ಣುಭಟ್ ಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಕಟ್ಟಡ ಮಾಲಕ ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಟ್ಟಡ ಮಾಲಕ ಅನಿಲ್ ಕುಮಾರ್, ಶಾಖಾ ವ್ಯವಸ್ಥಾಪಕ ಕುಶಾಲಪ್ಪ ಗೌಡ. ಯು, ಪುತ್ತೂರು ಶಾಖಾ ವ್ಯವಸ್ಥಾಪಕ ಹರೀಶ್ ಪಿ., ಬೆಳ್ತಂಗಡಿ ವಲಯದ ಬ್ಯಾಂಕಿನ ಸ್ವಸಹಾಯ ಸಂಘಗಳ ಮೇಲ್ವಿಚಾರಕ ರಂಜಿತ್ ಕುಮಾರ್ ಎ., ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಎಂ.ಪಿ.ಮನೋಜ್, ಸುಬ್ರಹ್ಮಣ್ಯ ಭಟ್, ಆದರ್ಶ ಬಿ., ಪ್ರದೀಪ್ ಕುಮಾರ್, ರತನ್ ಕೆ.ಎಸ್, ವಿನಯ ಕುಮಾರ್ ಪಿ., ಅವರನ್ನು ಸನ್ಮಾನಿಸಲಾಯಿತು.
ನವೋದಯ ವಲಯ ಮೇಲ್ವಿಚಾರಕ ಮತ್ತು ಪ್ರೇರಕರಾದ ಶ್ರೀಧರ ಮಾಣಿಮರ್ಧು, ದಾಮೋದರ, ಹೇಮಂತ್, ಗಂಗಾಧರ್, ಪ್ರಕಾಶ್. ಜೆ, ಸವಿತಾ ಎಸ್.ಟಿ, ಚಂದ್ರಕಲಾ, ಅನಿತಾ, ದೇವಕಿ ಅವರನ್ನು ಗೌರವಿಸಲಾಯಿತು.
ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸುಳ್ಯ ಶಾಖಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಎಂ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







