SKSSF ಅಬುಧಾಬಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

ಅಬುಧಾಬಿ: SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಮಸ್ತ 100 ಉದ್ಘಾಟನಾ ಸಮ್ಮೇಳನದ ಪ್ರಚಾರಾರ್ಥ ಹಾಗೂ ಮರ್ಹೂಂ ನೌಶಾದ್ ಹಾಜಿ ಸೂರಲ್ಪಾಡಿ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರವು ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುಧಾಬಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು.
ರಕ್ತ ದಾನ ಶಿಬಿರದಲ್ಲಿ ಒಟ್ಟು 52 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಅಬುಧಾಬಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಹೀರ್ ಹುದವಿಯವರು "ನಾವು ಮಾಡುವ ಎಲ್ಲಾ ಕೆಲಸ ಕಾರ್ಯಗಳು ಸೃಷ್ಟಿಕರ್ತನೂ ಮತ್ತು ಅವನ ರಸೂಲರು ಇಷ್ಟಪಡುವ ರೀತಿಯಲ್ಲಿ ಇರಬೇಕು. ಆವಾಗ ಮಾತ್ರ ನಾವು ಮಾಡುವ ಎಲ್ಲಾ ಕೆಲಸ ಕಾರ್ಯಗಳಿಗೆ ಅವನ ಕಡೆಯಿಂದ ಪ್ರತಿಫಲ ಸಿಗುತ್ತದೆ ಮತ್ತು ಅವನು ಇಷ್ಟಪಡದ ರೀತಿಯಲ್ಲಿ ನಡೆದರೆ ಅದರಿಂದ ನಮಗೆ ಶೂನ್ಯ ಪ್ರತಿಫಲ ಎಂದು ಉಪದೇಶ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ವೆಲ್ಫೇರ್ ಆಶೋಸಿಯೇಶನ್ ಅಬುಧಾಬಿ ಇದರ ಅಧ್ಯಕ್ಷರಾದ ಮುಹಮ್ಮದ್ ಅಲಿ ಉಚ್ಚಿಲ, ಸಂಸ್ಥೆಯು ಹಮ್ಮಿಕೊಂಡ ರಕ್ತದಾನ ಪ್ರಶಂಸಿಸಿ, ರಕ್ತದಾನ ಮಾಡುವುದು ಅದು ಕೇವಲ ಒಂದು ಸಣ್ಣ ರೀತಿಯ ದಾನ ಅಲ್ಲ. ಅದಕ್ಕೂ ಮಿಗಿಲಾಗಿ ಒಂದು ಜೀವವನ್ನು ರಕ್ಷಿಸಲು ನಾವೂ ಮಾಡುವಂತಹ ಶ್ರೇಷ್ಠ ದಾನ ಎಂದು ಹೇಳಿ ಸೇರಿದ ಕಾರ್ಯಕರ್ತರನ್ನು ಹುರಿದುಂಬಿಸಿದರು ಮತ್ತು ಸಂಘಟನೆಯು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗದೆ ಜನಪರ ಕಾರ್ಯಕ್ರಮಗಳಲ್ಲೂ ತೊಡಗಿಸಬೇಕೆಂದು ಕರೆ ನೀಡಿದರು.
ಅಬುಧಾಬಿ ಸುನ್ನಿ ಸೆಂಟರ್ ಇದರ ಅಧ್ಯಕ್ಷ ಅಸ್ಸಯ್ಯದ್ ಅಬ್ದಲ್ ರಹ್ಮಾನ್ ತಂಙಳ್ ಪ್ರಾಸ್ತವಿಕ ಮಾತನಾಡಿ SKSSF ಅಬುಧಾಬಿ ನಡೆಸುವ 2ನೇ ರಕ್ತದಾನ ಶಿಬಿರದಿಂದ ಸಂತೋಷಗೊಂಡು ಇನ್ನೂ ಅನೇಕ ಸಮಾಜ ಸೇವೆ ಕಾರ್ಯಕ್ರಮ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕಾಗಿ ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಯಾನ್ ರಿಯಲ್ ಎಸ್ಟೇಟ್ MD ಅನ್ಸಾರ್ ಬೆಳ್ಳಾರೆ ಭಾಗವಹಿಸಿ ಶುಭ ಹಾರೈಕಗಳ ಮಾತುಗಳನ್ನಾಡಿದರು. ಅಬುಧಾಬಿ ಉದ್ಯಮಿ ನಝೀರ್ ಬೆಳ್ಳಾರೆ ಭಾಗವಹಿಸಿ ಶುಭಹಾರೈಸಿದರು.
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ವ್ಯವಸ್ಥಾಪಕರಾದ ಸಿರಾಜುದ್ದೀನ್ ಪರ್ಲಡ್ಕ ಹಾಗೂ SKSSF ಅಬುಧಾಬಿ ಕರ್ನಾಟಕದ ಗೌರವಾಧ್ಯಕ್ಷರಾದ ಹನೀಫ್ ಅರಿಯಮೂಲೆ ಉಪಸ್ಥಿತರಿದ್ದರು.
ಶಿಬಿರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಕಾರ್ಯ ನಿರ್ವಾಹಕರಾದ ಶಾಫಿ ಮಾಣಿ, ಯಾಕೂಬ್ ಫೈರೋಝ್ ಹಾಗೂ SKSSF ಅಬುಧಾಬಿ ಕರ್ನಾಟಕದ ಪ್ರಮುಖರಾದ ಶಾಫಿ ಪೆರುವಾಯಿ, ಅಬೂಬಕ್ಕರ್ ಸಕಲೇಶ್ ಪುರ ಮತ್ತು ದಾರುಲ್ ಹಸನಿಯ್ಯ ಅಬುಧಾಬಿ ಸಮಿತಿ ಅಧ್ಯಕ್ಷ ಶಾಕಿರ್ ಕೂರ್ನಡ್ಕ , ರಕ್ತದಾನ ಶಿಬಿರ ದ ಅಡ್ಮಿನ್ ಹಿದಾಯತ್ ರಹ್ಮಾನ್ ಮರ್ವೆಲ್, ತ್ವಾಹ ಉಪ್ಪಿನಂಗಡಿ, ಶಬೀರ್ ಕನ್ನಡಿಕಟ್ಟೆ, ಜೌಹರ್ ಕನ್ನಡಿಕಟ್ಟೆ, ರಶೀದ್ ಕರಾಯ ಮತ್ತು ಅನೇಕ ಕಾರ್ಯ ಕರ್ತರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಯಹ್ಯಾ ಕೊಡ್ಲಿಪೇಟೆ ಸ್ವಾಗತಿಸಿದರು ಮತ್ತು SKSSF ಅಬುಧಾಬಿ ಕರ್ನಾಟಕ ಸಮಿತಿಯ ಉಪಾಧ್ಯಕ್ಷ ಹಾಫಿಳ್ ಝೈನ್ ಸಖಾಫಿ ಕಾರ್ಯಕ್ರಮವನ್ನು ನಿರೂಪಿಸಿ ಮತ್ತು ಹಸನ್ ದಾರಿಮಿ ಧನ್ಯವಾದ ಅರ್ಪಿಸಿದರು.







