Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಣಂಬೂರು: ಮೊಗವೀರ ಸಂಯುಕ್ತ ಸಭೆಯಿಂದ...

ಪಣಂಬೂರು: ಮೊಗವೀರ ಸಂಯುಕ್ತ ಸಭೆಯಿಂದ ಸ್ಪೀಕರ್ ಖಾದರ್, ಶಾಸಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ9 July 2023 3:57 PM IST
share
ಪಣಂಬೂರು: ಮೊಗವೀರ ಸಂಯುಕ್ತ ಸಭೆಯಿಂದ ಸ್ಪೀಕರ್ ಖಾದರ್, ಶಾಸಕರಿಗೆ ಸನ್ಮಾನ

ಮಂಗಳೂರು, ಜು 9: ದಕ್ಷಿಣ ಕನ್ನಡ ಮೊಗವೀರ ಸಂಯುಕ್ತ ಸಭೆ (ಉಪ್ಪಳದಿಂದ ಹೊಸಬೆಟ್ಟುವರೆಗಿನ ಮೊಗವೀರ ಗ್ರಾಮ ಸಭೆಗಳ ಒಕ್ಕೂಟ) ಮಂಗಳೂರು, ಇವರ ವತಿಯಿಂದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಶಾಸಕರುಗಳಾದ ಡಾ.ವೈ.ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಯಶ್ಪಾಲ್ ಎ. ಸುವರ್ಣರವರಿಗೆ ಅಭಿನಂದನಾ ಕಾರ್ಯಕ್ರಮ ಪಣಂಬೂರು ಮೊಗವೀರ ಸಭಾದ ಸಮುದಾಯ ಭವನದಲ್ಲಿ ಶನಿವಾರ ಜರುಗಿತು

ಸಮಾರಂಭ ಅಧ್ಯಕ್ಷತೆಯನ್ನು ಸಂಯುಕ್ತ ಸಭೆಯ ಅಧ್ಯಕ್ಷ ಭರತ್ ಕುಮಾರ್ ವಹಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೊಗವೀರ ಸಮಾಜದ ಪರವಾಗಿ 30 ಅಂಶಗಳ ಹಕ್ಕೊತ್ತಾಯದ ಮನವಿಯನ್ನು ಸಲ್ಲಿಸಿದರು.

ಮೊಗವೀರ ಗ್ರಾಮಗಳಲ್ಲಿ ಇರುವ ಸಮಸ್ಯೆಗಳು ಹಾಗೂ ಮೀನುಗಾರಿಕಾ ಕ್ಷೇತ್ರದ ಬೇಡಿಕೆಗಳು ಈ ಹಕ್ಕೊತ್ತಾಯದ ಮನವಿಯಲ್ಲಿ ನೀಡಲಾಯಿತು.

ಮೊಗವೀರ ಮಹಾಜನ ಸಂಘದ ಅಧ್ತಕ್ಷ ಜಯ ಸಿ. ಕೋಟ್ಯಾನ್ ನೂತನ ಶಾಸಕರು ಹಾಗೂ ವಿಧಾನ ಸಭಾಧ್ಯಕ್ಷರಿಗೆ ಮೊಗವೀರ ಸಮಾಜದ ಪರವಾಗಿ ಅಭಿನಂದನಾ ನುಡಿಗಳನ್ನು ನುಡಿದರು ಹಾಗೂ ಮೊಗವೀರ ಸಮಾಜದ ಸಂಪೂರ್ಣ ಸಮಸ್ಯೆಗಳನ್ನು ತಿಳಿಸಿದರು.

ಸನ್ಮಾನವನ್ನು ಸ್ವೀಕರಿಸಿ ಮಾತಾಡಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಮೊಗವೀರರು ಶ್ರಮಜೀವಿಗಳಾಗಿದ್ದು ಸ್ವಾಭಿಮಾನಿಗಳಾಗಿದ್ದಾರೆ ಪ್ರಥಮವಾಗಿ ಈ ಎಲ್ಲಾ ಬೇಡಿಕೆಗಳನ್ನು ಇಟ್ಟಿದ್ದಾರೆ. ಸರಕಾರವು ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸಕಲ ಪ್ರಯತ್ನ ಮಾಡುವ ಭರವಸೆ ಇತ್ತರು.

ಶಾಸಕ ಡಿ.ವೇದವ್ಯಾಸ ಕಾಮತ್, ಸಂಯುಕ್ತ ಸಭೆಗೆ ಸಮುದಾಯ ಭವನ ನಿರ್ಮಿಸಲು ನಿವೇಶನವನ್ನು ಒದಗಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

ಶಾಸಕ ಡಾ| ವೈ ಭರತ್ ಶೆಟ್ಟಿ ಮಾತನಾಡಿ, ಮೀನುಗಾರಿಕಾ ಜೆಟ್ಟಿ ನಿರ್ಮಾಣ ಹಾಗೂ ಕರರಹಿತ ಡಿಸೇಲ್ ಮತ್ತು ನಾಡದೋಣಿಗಳ ಸಮಸ್ಯೆಗಳ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದರು.

ಶಾಸಕ ಯಶ್ಪಾಲ್ ಎ. ಸುವರ್ಣ ಶುಭಾಶಯವನ್ನಿತ್ತರು.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೊಗವೀರ ಗ್ರಾಮ ಸಭೆಗಳ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಸಂಘಗಳ ಪದಾಧಿಕಾರಿಗಳು, ಸದಸ್ಯರು, ಮೀನುಗಾರಿಕಾ ಸಹಕಾರಿ ಸಂಘಗಳ ಅಧ್ಯಕ್ಷರು, ಮೀನುಗಾರಿಕಾ ಯೂನಿಯನ್ ಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮೋಹನ್ ಕೋಡಿಕಲ್ ವಂದಿಸಿದರು. ಯಶವಂತ ಬೋಳೂರು ಕಾರ್ಯಕ್ರಮ ನಿರ್ವಹಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X