Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ: ಫ್ಲೆಕ್ಸ್ ಗೆ ಹಾನಿ ಪ್ರಕರಣ...

ಸುಳ್ಯ: ಫ್ಲೆಕ್ಸ್ ಗೆ ಹಾನಿ ಪ್ರಕರಣ ಭೇದಿಸಿದ ಪೊಲೀಸರು: ಹಾನಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಫ್ಲೆಕ್ಸ್ ಹರಿದು ರಾಮ ಜಪ ಮಾಡಿದ ಅಪರಿಚಿತನ ಪತ್ತೆಗೆ ಮುಂದುವರಿದ ತನಿಖೆ

ವಾರ್ತಾಭಾರತಿವಾರ್ತಾಭಾರತಿ7 Jan 2024 1:28 PM IST
share
ಸುಳ್ಯ: ಫ್ಲೆಕ್ಸ್ ಗೆ ಹಾನಿ ಪ್ರಕರಣ ಭೇದಿಸಿದ ಪೊಲೀಸರು: ಹಾನಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಸುಳ್ಯ, ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಆಟೋ ರಿಕ್ಷಾ ಸಂಘದ ವತಿಯಿಂದ ಜಾತ್ರೋತ್ಸವ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಶುಭಕೋರಿ ಅಳವಡಿಸಿದ್ದ ಫ್ಲೆಕ್ಸ್ ಹರಿದಿರುವ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಾನಸಿಕ ಅಸ್ವಸ್ಥನಂತೆ ತೋರುವ ವ್ಯಕ್ತಿಯೋರ್ವ ಬ್ಯಾನರ್ ಹರಿದಿರುವುದನ್ನು ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಯ ಆಧಾರದಲ್ಲಿ ಪತ್ತೆಹಚ್ಚಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ತೋರುವ ವಯಸ್ಸಾದ ವ್ಯಕ್ತಿಯೋರ್ವ ಬ್ಯಾನರ್ ಹರಿದು ತನ್ನ ಕೈಯಲ್ಲಿ ಹಿಡಿದುಕೊಂಡು, ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯವೊಂದರಲ್ಲಿ ಕಂಡುಬಂದಿದೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಬ್ಯಾನರ್ ಹರಿದಿರುವ ಆರೋಪಿಗಳ ಪತ್ತೆಗೆ ಬಿಜೆಪಿ, ಸಂಘ ಪರಿವಾರ ಪ್ರತಿಭಟನೆ, ಧರಣಿ ನಡೆಸುತ್ತಿರುವ ಮಧ್ಯೆಯೇ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಸಮೀಪ ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಸುಳ್ಯ ಜಾತ್ರೋತ್ಸವ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಶುಭಕೋರಿ ಮುಖ್ಯ ರಸ್ತೆಯ ಬದಿ ಫ್ಲೆಕ್ಸ್ ಅಳವಡಿಸಲಾಗಿತ್ತು. ಇದನ್ನು ಜ.5ರಂದು ರಾತ್ರಿ ಯಾರೋ ಹರಿದಿರುವುದಾಗಿ ಜ.6ರಂದು ಆಟೊ ರಿಕ್ಷಾ ಸಂಘದ ಅಧ್ಯಕ್ಷರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸುಳ್ಯ ನಗರದ ಸುಮಾರು 40 ಸಿಸಿಟಿವಿ ಕ್ಯಾಮರಾಗಳ ಪೂಟೇಜ್ಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ ಈ ಫ್ಲೆಕ್ಸ್ ಅನ್ನು ಮಧ್ಯಭಾಗದಿಂದ ಹರಿದು ಕೈಯಲ್ಲಿ ಹಿಡಿದುಕೊಂಡು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಪತ್ತೆಯಾಗಿದೆ ಪೊಲೀಸ್ ಪ್ರಕಟನೆ ತಿಳಿಸಿದೆ.

ಬಳಿಕ ಆ ವ್ಯಕ್ತಿ ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಫ್ಲೆಕ್ಸ್ ತುಂಡಿನಲ್ಲಿದ್ದ ಶ್ರೀ ರಾಮನ ಫೋಟೋವನ್ನಿಟ್ಟು ರಾಮ ಜಪ ಮಾಡಿದ್ದನ್ನು ಸಾರ್ವಜನಿಕರು ನೋಡಿರುವುದೂ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.

ಹರಿದ ಫ್ಲೆಕ್ಸ್ ತುಂಡನ್ನು ಪರಿಶೀಲಿಸಲಾಗಿದ್ದು, ಅದರಲ್ಲಿದ್ದ ಅಯೋಧ್ಯೆಯ ಪೋಟೋ ಅಥವಾ ಶ್ರೀರಾಮನ ಪೋಟೋಗಾಗಲಿ ಯಾವುದೇ ರೀತಿಯಲ್ಲಿ ಹಾನಿಯಾಗಿರುವುದು ಕಂಡುಬಂದಿಲ್ಲ ಎಂದು ಪೊಲೀಸರು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದು, ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಈ ನಡುವೆ ಸಿಸಿಟಿವಿ ಕ್ಯಾಮರಾದಲ್ಲಿ ಕಂಡುಬಂದಿರುವ ಶಂಕಿತ ವ್ಯಕ್ತಿ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X