Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ | ಸಬ್ ಸ್ಟೇಷನ್ ಅನುಷ್ಠಾನಕ್ಕೆ...

ಸುಳ್ಯ | ಸಬ್ ಸ್ಟೇಷನ್ ಅನುಷ್ಠಾನಕ್ಕೆ ಇನ್ನೆಷ್ಟು ವರ್ಷಗಳು ಬೇಕು?

ವಾರ್ತಾಭಾರತಿವಾರ್ತಾಭಾರತಿ13 Nov 2025 12:13 AM IST
share
ಸುಳ್ಯ | ಸಬ್ ಸ್ಟೇಷನ್ ಅನುಷ್ಠಾನಕ್ಕೆ ಇನ್ನೆಷ್ಟು ವರ್ಷಗಳು ಬೇಕು?
ಮೆಸ್ಕಾಂ ಜನ ಸಂಪರ್ಕ ಸಭೆಯಲ್ಲಿ ಗ್ರಾಹಕರ ಪ್ರಶ್ನೆ

ಸುಳ್ಯ, ನ.11:ಜನರು ಸುಳ್ಯದಲ್ಲಿ 110 ಕೆ.ವಿ. ಸಬ್ ಸ್ಟೇಷನ್‌ನ ಅನುಷ್ಠಾನಕ್ಕೆ ಇನ್ನೆಷ್ಟು ವರ್ಷ ಕಾಯಬೇಕು? ವಿದ್ಯುತ್ ಲೈನ್ ಎಳೆಯಲು ವಿಳಂಬವೇಕೆ? ಎಂದು ವಿದ್ಯುತ್ ಗ್ರಾಹಕರು ಮೆಸ್ಕಾಂ ಅಧಿಕಾರಿಗಳನ್ನು ಪ್ರಶ್ನಿಸಿದ ಘಟನೆ ಸುಳ್ಯ ಮೆಸ್ಕಾಂ ಜನ ಸಂಪರ್ಕ ಸಭೆಯಲ್ಲಿ ಬುಧವಾರ ನಡೆದಿದೆ.

ಮೆಸ್ಕಾಂ ಅಧೀಕ್ಷಕ ಇಂಜಿನಿ ಯರ್ ಕೃಷ್ಣರಾಜ್ ಕೆ. ಅಧ್ಯಕ್ಷತೆಯಲ್ಲಿ ಸುಳ್ಯ ತಾಪಂ ಸಭಾಂಗಣದಲ್ಲಿ ನಡೆದ ಸುಳ್ಯ ಮತ್ತು ಸುಬ್ರಹ್ಮಣ್ಯ ಮೆಸ್ಕಾಂ ಉಪ ವಿಭಾಗದ ಜನ ಸಂಪರ್ಕ ಸಭೆಯಲ್ಲಿ ಈ ಕುರಿತು ಜಿ.ಕೆ.ಹಮೀದ್ ಸಂಪಾಜೆ, ರಾಧಾಕೃಷ್ಣ ಬೊಳ್ಳೂರು, ನಂದರಾಜ ಸಂಕೇಶ, ಆರ್.ಬಿ.ಬಶೀರ್, ಸತ್ಯಕುಮಾರ್ ಆಡಿಂಜ, ಇಬ್ರಾಹೀಂ ಅಂಬಟೆಕಜೆ ಅಧಿಕಾರಿಗಳಲ್ಲಿ ಪ್ರಶ್ನಿಸಿದರು.

ಸಬ್ ಸ್ಟೇಶನ್ ಕೆಲಸ ಆಗುತ್ತಿದೆ. ಯಾವುದೇ ಸಮಸ್ಯೆ ಇಲ್ಲ. ಲೈನ್ ಹಾದು ಬರಲು ಒಟ್ಟು 89 ಟವರ್ ಆಗ ಬೇಕಾಗಿದ್ದು, ಅದರಲ್ಲಿ 10 ಟವರ್ ಆಗಿದೆ. ಸುಳ್ಯದಲ್ಲಿ ಟವರ್ ಸ್ಥಾಪಿಸಬೇಕಾದ ಜಾಗದ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಪುತ್ತೂರು ಭಾಗದಲ್ಲಿ 39 ಟವರ್ ಸ್ಥಾಪಿಸಬೇಕಾದ ಜಾಗದ ಸರ್ವೇ ಕಾರ್ಯ ಪ್ರಗತಿಯಲ್ಲಿದೆ. ಕೆಲವೊಂದು ಕಡೆ ಜಾಗದ ಮಾಲಕರ ಆಕ್ಷೇಪಣೆ ಇದೆ ಎಂದು ಕೆಪಿಟಿಸಿಎಲ್ ಇಂಜಿನಿಯರ್ ಸಚಿನ್ ವಿವರ ನೀಡಿದರು.

ಈ ವೇಳೆ ಮಾತನಾಡಿದ ಜಿ.ಕೆ. ಹಮೀದ್, ಈ ಭಾಗದಿಂದ ಕೋಲಾರಕ್ಕೆ ಗುಡ್ಡ ಅಗೆದು ನೀರು ಕೊಂಡು ಹೋಗುತ್ತಾರೆ. ಆದರೆ ಪುತ್ತೂರಿನಿಂದ ಸುಳ್ಯಕ್ಕೆ 110 ಕೆ.ವಿ. ಲೈನ್ ಯಾಕೆ ಇಷ್ಟು ವಿಳಂಬ ಎಂದು ಪ್ರಶ್ನಿಸಿದರು. ಆಕ್ಷೇಪ ಮಾಡುವವರ ಪಟ್ಟಿ ತಯಾರಿಸಿ ಬಿಡುಗಡೆ ಮಾಡಿ. ಅವರೊಂದಿಗೆ ಸುಳ್ಯ ಮತ್ತು ಪುತ್ತೂರಿನ ಶಾಸಕರು, ಇತರ ಪ್ರತಿನಿಧಿಗಳು ಮಾತನಾಡಿ ಮನವೊಲಿಸುವ ಕಾರ್ಯ ಮಾಡುತ್ತಾರೆ ಎಂದು ಸಭೆಯಲ್ಲಿದ್ದವರು ಹೇಳಿದರು.

ಜಿ.ಕೆ. ಹಮೀದ್ ಮತ್ತೊಮ್ಮೆ ಎಲ್ಲೆಲ್ಲಿ ಟವರ್ ಆಗಿದೆ ಎಂಬ ಕುರಿತು ಪ್ರಶ್ನಿಸಿದರು. ಆ ವೇಳೆ ಇಂಜಿನಿಯರ್ ಸಚಿನ್, ಟವರ್‌ಗೆ ಪೌಂಡೇಶನ್ ಮಾಡಲಾಗಿದೆ. ಟವರ್ ಏಕಕಾಲಕ್ಕೆ ಜೋಡಣೆ ಮಾಡುತ್ತಾರೆ ಎಂದರು. ಇದರಿಂದ ಅಸಮಾಧಾನಗೊಂಡ ಹಮೀದ್, ಟವರ್ ಆಗಿದೆ ಎಂದು ಸಭೆಗೆ ಸುಳ್ಳು ಮಾಹಿತಿ ನೀಡಿರುವುದು ಅಕ್ಷಮ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಳ್ಯ ಮೆಸ್ಕಾಂ ಎಇಇ ಹರೀಶ್ ನಾಯ್ಕ್, ಸುಬ್ರಹ್ಮಣ್ಯ ಎಇಇ ಸತೀಶ್ ಸಪಲ್ಯ, ಸಹಾಯಕ ಇಂಜಿನಿಯರ್‌ಗಳಾದ ಹರಿಕೃಷ್ಣ, ಚಿದಾನಂದ, ಸುಪ್ರೀತ್, ಉಷಾ ಕುಮಾರಿ, ಕಿರಿಯ ಇಂಜಿನಿಯರ್ ಮಹೇಶ್, ಪರಶುರಾಮ, ಲೋಕೇಶ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X