Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ: 700 ಮೀಟರ್ ಕಾಂಕ್ರೀಟ್ ರಸ್ತೆಗೆ...

ಸುಳ್ಯ: 700 ಮೀಟರ್ ಕಾಂಕ್ರೀಟ್ ರಸ್ತೆಗೆ ಎರಡು ಬಾರಿ ಉದ್ಘಾಟನಾ ಭಾಗ್ಯ!

ಕೋಲ್ಚಾರು - ಅಜ್ಜಾವರ ಸಂಪರ್ಕ ರಸ್ತೆ ಮಧ್ಯಾಹ್ನ ಕಾಂಗ್ರೆಸ್, ಸಂಜೆ ಬಿಜೆಪಿಯಿಂದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 Nov 2024 10:06 PM IST
share
ಸುಳ್ಯ: 700 ಮೀಟರ್ ಕಾಂಕ್ರೀಟ್ ರಸ್ತೆಗೆ ಎರಡು ಬಾರಿ ಉದ್ಘಾಟನಾ ಭಾಗ್ಯ!

ಸುಳ್ಯ: 700 ಮೀಟರ್ ಕಾಂಕ್ರೀಟ್ ರಸ್ತೆಗೆ ಎರಡು ಬಾರಿ ಉದ್ಘಾಟನಾ ಭಾಗ್ಯ ಲಭಿಸಿದೆ. ಮಧ್ಯಾಹ್ನ ಕಾಂಗ್ರೆಸ್‍ನವರು ರಸ್ತೆ ಉದ್ಘಾಟಿಸಿದರೆ, ಸಂಜೆ ಬಿಜೆಪಿಯವರು ಇದೇ ರಸ್ತೆಯನ್ನು ಉದ್ಘಾಟನೆ ಮಾಡಿದರು.

ಕೋಲ್ಚಾರು- ಪೈಂಬೆಚ್ಚಾಲ್ -ಅಜ್ಜಾವರ ಸಂಪರ್ಕ ರಸ್ತೆಗೆ ಎರಡೂ ಪಕ್ಷದವರು ಉದ್ಘಾಟನಾ ಭಾಗ್ಯ ಕಲ್ಪಿಸಿದರು.

ಲೋಕೋಪಯೋಗಿ ಇಲಾಖೆಯ ಸುಳ್ಯ ಉಪವಿಭಾಗದ ಆಲೆಟ್ಟಿ-ಅಜ್ಜಾವರ ಗ್ರಾಮ ಸಂಪರ್ಕಿಸುವ ನೀಲಗಿರಿಯಡ್ಕ, ಪೈಂಬೆಚ್ಚಾಲು ಕೋಲ್ಚಾರು ರಸ್ತೆಯಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಸುಮಾರು 700 ಮೀ. ರಸ್ತೆ ಕಾಂಕ್ರೀಟೀಕರಣಗೊಂಡು ಅಭಿವೃದ್ಧಿ ಆಗಿದೆ. ಅನುದಾನ ಬಿಡುಗಡೆಯಾಗಿ ಇದೀಗ ಕಾಮಗಾರಿ ಪೂರ್ತಿಯಾಗಿತ್ತು. ಈ ಹಿನ್ನಲೆಯಲ್ಲಿ ನ.1ರಂದು ಮಧ್ಯಾಹ್ನ ಕಾಂಗ್ರೆಸ್ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಸೇರಿಸಿ ರಸ್ತೆ ಉದ್ಘಾಟಿಸಿದರು. ಅದೇ ದಿನ ಸಂಜೆ ಬಿಜೆಪಿಯವರು ಉದ್ಘಾಟನಾ ಸಮಾರಂಭ ಏರ್ಪಡಿಸಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು.

ಎಸ್.ಅಂಗಾರ ಅವರು ಸಚಿವರಾಗಿದ್ದ ಸಂದರ್ಭ ಅವರ ಪ್ರಯತ್ನ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪತ್ರದ ಮೇರೆಗೆ ರಸ್ತೆಗೆ ವಿಶೇಷ ಅನುದಾನ ಮಂಜೂರಾಗಿತ್ತು ಎಂದು ಬಿಜೆಪಿಯವರು ಹೇಳುತ್ತಿದ್ದರೆ, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾಂಗ್ರೆಸ್ ಮುಖಂಡರ ಪ್ರಯತ್ನದಿಂದ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಾರೆ.

ಒಟ್ಟಿನಲ್ಲಿ ರಸ್ತೆಯನ್ನು ಎರಡೆರಡು ಬಾರಿ ಉದ್ಟಾಟನೆ ಮಾಡುವ ಮೂಲಕ ಗ್ರಾಮೀಣ ಭಾಗದಲ್ಲಿ ರಾಜಕೀಯ ಮುಖಂಡರ ಮಧ್ಯೆ ಹೊಂದಾಣಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ ಎನ್ನುತ್ತಾರೆ ಸಾರ್ವಜನಿಕರು.

ಈ ರಸ್ತೆಯ ಗುದ್ದಲಿ ಪೂಜೆಯೂ ಎರಡು ಬಾರಿ ನಡೆದಿತ್ತು. ಒಮ್ಮೆ ಶಾಸಕರ ನೇತೃತ್ವದಲ್ಲಿ ಗುದ್ದಲಿಪೂಜೆ ನಡೆದರೆ ಮತ್ತೊಮ್ಮೆ ಸುಳ್ಯಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಈ ರಸ್ತೆ ಸೇರಿ ವಿವಿಧ ಕಾಮಗಾರಿಗಳಿಗೆ ಸುಳ್ಯದಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X