Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌ ಜನತಾ ಕಾಲನಿ ಸರಕಾರಿ ಶಾಲೆ,...

ಸುರತ್ಕಲ್‌ ಜನತಾ ಕಾಲನಿ ಸರಕಾರಿ ಶಾಲೆ, ಆಟದ ಮೈದಾನ ಖಾಸಗಿ ಭೂಮಿ: ಉಪ ತಹಶಿಲ್ದಾರ್‌ ವರದಿಯಲ್ಲಿ ಮಾಹಿತಿ ಬಹಿರಂಗ

ಹೋರಾಟ ಮುಂದುವರಿಸಲು ಹೋರಾಟ ಸಮಿತಿ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ28 Nov 2023 10:49 PM IST
share
ಸುರತ್ಕಲ್‌ ಜನತಾ ಕಾಲನಿ ಸರಕಾರಿ ಶಾಲೆ, ಆಟದ ಮೈದಾನ ಖಾಸಗಿ ಭೂಮಿ: ಉಪ ತಹಶಿಲ್ದಾರ್‌ ವರದಿಯಲ್ಲಿ ಮಾಹಿತಿ ಬಹಿರಂಗ

ಸುತತ್ಕಲ್‌, ನ.28: ಜನತಾ ಕಾಲನಿಯಲ್ಲಿರುವ ಶಾಲೆ ಖಾಸಗಿ ನಿವೇಶನದಲ್ಲಿದ್ದು, ಶಾಲೆಗೆ ನೀಡಲಾಗಿದ್ದ ನಿವೇಶನದಲ್ಲಿ ಆಶ್ರಯ ಯೋಜನೆಯ ಮನೆಗಳನ್ನು‌ ನಿರ್ಮಿಸಲಾಗಿದೆ ಎಂದು ಉಪತಹಶೀಲ್ದಾರ್ ಅವರ ವರದಿಯಲ್ಲಿ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾನ‌ ಕಟ್ಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ನಿವೇಶನ ಪರಭಾರೆ ಮಾಡಿರುವ ಕುರಿತು ಶಾಲೆಯ ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಕ್ಷೇತ್ರ ಶಿಕ್ಷಾಣಾಧಿಕಾರಿಗೆ ಪತ್ರ ಬರೆದು ಸರ್ವೇ ಮಾಡಿ ಶಾಲೆಯ ಜಾಗ ಗುರುತಿಸಿ ಕೊಡುವಂತೆ ಮನವಿ‌ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಉಪ ತಹಶೀಲ್ದಾರ್ ನವೀನ್ ಅವರ ನೇತೃತ್ವದ ತಂಡ ಶಾಲೆಯ ಜಾಗವನ್ನು ಸರ್ವೇ ಮಾಡಿ ವರದಿ ತಯಾರಿಸಿದ್ದು, ಜನತಾ ಕಾಲನಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಸರ್ವೆ ನಂ. 161/1 ಹಾಗೂ 161/2 ಆಗಿದೆ. ಈ ಜಮೀನು ಸರ್ವೇ ನಕ್ಷೆಯು ಖಾಸಗಿಯವರ ಜಮೀನು ಎಂದು ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಶಾಲೆ ಇರುವ ಜಮೀನಿನ ಸರ್ವೆ ನಂ. 161/1ರಲ್ಲಿ 0.45 ಎಕರೆ ಹಾಗೂ 161/2ರಲ್ಲಿ 0.10 ಎಕರೆ ಕೃಷ್ಣಾಪುರ ಮಠಕ್ಕೆ ಸೇರಿದ್ದು, ಇದು ಕೃಷ್ಣದೇವರಾಯರ ಖಾತೆಯಲ್ಲಿದೆ. ಶಾಲೆಯ ಆಟದ ಮೈದಾನವಿರುವ ಸರ್ವೆ ನಂ. 161/1ರಲ್ಲಿ 0.22 ಮತ್ತು 161/2ರಲ್ಲಿ 0.49 ಜೋಗಿ ಮಾಡರವರ ಖಾತೆಯಲ್ಲಿದೆ. ಪ್ರಸ್ತುತ ಈ ಜಾಗವು ಕಮಲ ಶೆಡ್ತಿ ಮತ್ತಿತರರ ಹೆಸರಿನಲ್ಲಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾನ‌ ಕಟ್ಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಟದ ಮೈದಾನ ಸರ್ವೆ ನಂ. 16 ಆಗಿದ್ದು, ಇಲ್ಲಿ 94ಸಿ ಅಡಿ 13ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

"ಶಾಲೆ ಉಳಿಸಿ ಹೋರಾಟ ಸಮಿತಿ ಆಗ್ರಹ ಹೋರಾಟ ಸಮಿತಿಗೆ ಈ ವರದಿಯ ಮೇಲೆ ನಂಬಿಕೆ ಇಲ್ಲ. ಪ್ರಕರಣದಲ್ಲಿ ಜಿಲ್ಲಾಧಿಕಾರಿ, ಸರಕಾರ ಮಧ್ಯ ಪ್ರವೇಶ ಮಾಡಬೇಕು. ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಗಂಭೀರ ಮತ್ತು ಸಮರ್ಪಕ ತನಿಖೆಯಾಗಬೇಕು. ಶಿಕ್ಷಣ ಇಲಾಖೆ ಈ ಸಂಬಂಧ ಕಾನೂನು ಹೋರಾಟ ಮಾಡಬೇಕು. ಒಂದು ವೇಳೆ ಅಮತಿಮ ವರದಿಯಲ್ಲಿ ಶಾಲೆ ಮತ್ತು ಆಟದ ಮೈದಾನ ಖಾಸಗಿ ಭೂಮಿ ಎಂದಾದಲ್ಲಿ ಸರಕಾರಿ ಮೌಲ್ಯದಂತೆ ಪರಿಹಾರ ನೀಡಿ ಶಾಲೆ ಮತ್ತು ಆಟದ ಮೈದಾನವನ್ನು ಉಳಿಸಿ ಕೊಡಬೇಕು. ಯಾವುದೇ ಕಾರಣಕ್ಕೂ ಶಾಲೆ ಮತ್ತು ಆಟದ ಮೈದಾನ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ".

- ಬಿ.ಕೆ. ಇಮ್ತಿಯಾಝ್‌

ಜನತಾ ಕಾಲನಿ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿಯ ಸಂಚಾಲಕ

ಹೋರಾಟ ಸಮಿತಿಯಿಂದ ಶಾಲೆ ಉಳಿಸಿ ಹೋರಾಟ ನಿರಂತರವಾಗಿ ನಡೆಯಲಿದೆ. ಕಳೆದ 30 ವರ್ಷಗಳಿಂದ ನಡೆಯುತ್ತಿರುವ ಬಡವರ ಮಕ್ಕಳು ಕಲಿಯುತ್ತಿರುವ ಶಾಲೆ ಮತ್ತು ಅದರ ಆಟದ ಮೈದಾನವನ್ನು ಉಳಿಸಿಕೊಡುವಂತೆ ಜನತಾ ಕಾಲನಿ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿಯು ಮಂಗಳವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಮಾಡಲಿದೆ. ಜಿಲ್ಲಾಡಳಿತದ ಸ್ಪಂದನೆಗೆ ಅನುಗುಣವಾಗಿ ಮುಂದಿನ ಹೋರಾಟದ ರೂಪುರೇಷೆಗಳನ್ನು ರೂಪಿಸಲಾಗುವುದು ಎಂದು ಹೋಟರಾಟ ಸಮಿತಿಯ ಮುಖಂಡರು ತಿಳಿಸಿದ್ದಾರೆ. ‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X