Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ವಿದ್ಯುತ್ ಕಂಬವನ್ನು...

ಉಪ್ಪಿನಂಗಡಿ: ವಿದ್ಯುತ್ ಕಂಬವನ್ನು ಚರಂಡಿಯೊಳಗೆ ಉಳಿಸಿಕೊಂಡ ಗುತ್ತಿಗೆದಾರ!

ಟೀಕೆಗೆ ಕಾರಣವಾದ ಚತುಷ್ಪಥ ಹೆದ್ದಾರಿಯ ಚರಂಡಿ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ13 Dec 2023 10:48 PM IST
share
ಉಪ್ಪಿನಂಗಡಿ: ವಿದ್ಯುತ್ ಕಂಬವನ್ನು ಚರಂಡಿಯೊಳಗೆ ಉಳಿಸಿಕೊಂಡ ಗುತ್ತಿಗೆದಾರ!

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಯ ಗುತ್ತಿಗೆದಾರ ಸಂಸ್ಥೆಯು 34 ನೆಕ್ಕಿಲಾಡಿಯಲ್ಲಿ ವಿದ್ಯುತ್ ಕಂಬವೊಂದು ಸೇರಿಸಿಕೊಂಡು ಚರಂಡಿಯನ್ನು ನಿರ್ಮಾಣ ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ವ್ಯಾಪಕ ಟೀಕೆ ಹಾಗೂ ಹಾಸ್ಯಾಸ್ಪದಕ್ಕೆ ಒಳಗಾಗಿದೆ.

ಚತುಷ್ಪಥ ಹೆದ್ದಾರಿ ಕಾಮಗಾರಿಯ ನಂತರ ಈಗಿದ್ದ ವಿದ್ಯುತ್ ಕಂಬಗಳು ಸ್ಥಳಾಂತರಗೊಳ್ಳಲಿದ್ದು, ಹೆದ್ದಾರಿಯ ಚರಂಡಿಯನ್ನು ದಾಟಿ ವಿದ್ಯುತ್ ಕಂಬಗಳು ಬರುತ್ತವೆ. 34 ನೆಕ್ಕಿಲಾಡಿ ಹಾಗೂ ಉಪ್ಪಿನಂಗಡಿಯ ಕೆಲ ಭಾಗಗಳಲ್ಲಿ ಈಗಾಗಲೇ ಚತುಷ್ಪಥ ಹೆದ್ದಾರಿಯ ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. 34 ನೆಕ್ಕಿಲಾಡಿಯಲ್ಲಿಯೂ ಹೀಗೆ ಕಂಬಗಳನ್ನು ಹಾಕಲಾಗಿದ್ದು, ಆ ಬಳಿಕ ಕಾಂಕ್ರೀಟ್ ಚರಂಡಿ ಕಾಮಗಾರಿಯೂ ನಡೆದಿದೆ. ಆದರೆ ಅಲ್ಲಿನ ಸಂತೆಕಟ್ಟೆಯ ಬಳಿ ಮಾತ್ರ ಚರಂಡಿ ಕಾಮಗಾರಿ ನಡೆಸಿಕೊಂಡು ಬರುವಾಗ ಅಲ್ಲಿ ವಿದ್ಯುತ್ ಕಂಬ ಅಡ್ಡ ಬಂದಿದ್ದು, ಆದರೆ ಚತುಷ್ಪಥ ಹೆದ್ದಾರಿ ಗುತ್ತಿಗೆದಾರ ಸಂಸ್ಥೆಯವರು ಅದನ್ನು ತೆರವುಗೊಳಿಸದೇ ಅದನ್ನು ಸೇರಿಸಿಕೊಂಡೇ ಚರಂಡಿ ಕಾಮಗಾರಿ ನಡೆಸಿದ್ದಾರೆ. ಗುತ್ತಿಗೆದಾರ ಸಂಸ್ಥೆಯವರು ಹಾಗೂ ಇದನ್ನು ಗಮನಿಸದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಗಳ ಈ ಬೇಜವಾಬ್ದಾರಿ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ 34 ನೆಕ್ಕಿಲಾಡಿ ಗ್ರಾ.ಪಂ. ಸದಸ್ಯ ಪ್ರಶಾಂತ್ ಎನ್., ವಿದ್ಯುತ್ ಕಂಬ ಹಾಕಿ ಸುಮಾರು ಮೂರು ತಿಂಗಳು ಕಳೆದಿರಬಹುದು. ಆ ಬಳಿಕ ಚರಂಡಿ ಕಾಮಗಾರಿ ನಡೆಸುವಾಗ ಅದರ ನೇರಕ್ಕೆ ವಿದ್ಯುತ್ ಕಂಬವಿರುವುದನ್ನು ಗಮನಿಸಿದ ನಾನು ಅದನ್ನು ಕಾಮಗಾರಿ ಗುತ್ತಿಗೆ ಸಂಸ್ಥೆಯ ಎಂಜಿನಿಯರ್ ಗಳ ಗಮನಕ್ಕೆ ತಂದಿದ್ದೆ. ಆಗ ವಿದ್ಯುತ್ ಕಂಬವನ್ನು ಬಿಟ್ಟು ಚರಂಡಿ ಮಾಡಲಾಗುವುದೆಂದು ಭರವಸೆ ನೀಡಿದ್ದರು. ಆದರೆ ಚರಂಡಿ ನಿರ್ಮಾಣ ಮಾಡುವಾಗ ವಿದ್ಯುತ್ ಕಂಬವನ್ನು ಸೇರಿಸಿಕೊಂಡೇ ಚರಂಡಿಯನ್ನು ನಿರ್ಮಿಸಿದ್ದಾರೆ. ಇದು ಅವರ ನಿರ್ಲಕ್ಷ್ಯತನವನ್ನು ತೋರಿಸುತ್ತದೆ ಎಂದರು.

34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯದರ್ಶಿ ಕಲಂದರ್ ಶಾಫಿ ಮಾತನಾಡಿ, ವಿದ್ಯುತ್ ಕಂಬವನ್ನು ಸೇರಿಸಿಕೊಂಡೇ ಚರಂಡಿ ನಿರ್ಮಾಣ ಮಾಡಿರುವುದರಿಂದ ಚರಂಡಿಯ ಮುಕ್ಕಾಲು ಭಾಗವನ್ನು ಬೃಹದಾಕಾರದ ವಿದ್ಯುತ್ ಕಂಬ ನುಂಗಿದೆ. ಮಳೆಗಾಲದಲ್ಲಿ ಇದರಲ್ಲಿ ಕಸ ಕಡ್ಡಿ ಸಿಲುಕಿ ಚರಂಡಿಯಲ್ಲಿ ನೀರಿನ ಸರಾಗ ಹರಿಯುವಿಕೆಗೆ ತಡೆಯಾದರೆ ಯಾರು ಹೊಣೆ?. ಕಾಮಗಾರಿ ಗುತ್ತಿಗೆ ಸಂಸ್ಥೆಯವರಿಗೆ ಹಾಗೂ ಎಂಜಿನಿಯರ್ ಗಳಿಗೆ ಅಷ್ಟು ಜ್ಞಾನವೂ ಇಲ್ಲವೇ? ಅವರ ನಕ್ಷೆಯ ಪ್ರಕಾರನೇ ಚರಂಡಿ ಎಂದಿದ್ದರೆ, ವಿದ್ಯುತ್ ಕಂಬವನ್ನು ಸ್ಥಳಾಂತರ ಮಾಡಿಸಬೇಕಿತ್ತು. ಆ ಬಳಿಕ ಚರಂಡಿ ನಿರ್ಮಾಣ ಮಾಡಬೇಕಿತ್ತು. ಅದು ಬಿಟ್ಟು ವಹಿಸಿಕೊಟ್ಟ ಕೆಲಸ ಮಾಡಬೇಕೆಂಬ ಅನಿವಾರ್ಯತೆಯಿಂದ ಇವರು ಕಾಮಗಾರಿ ನಡೆಸುತ್ತಿದ್ದಾರೋ? ಅಥವಾ ಜನ ಸಾಮಾನ್ಯರ ಬಗ್ಗೆ, ಕಾಮಗಾರಿಯ ಬಗ್ಗೆ ಕಾಳಜಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೋ ತಿಳಿಯದಾಗಿದೆ. ಇಂತಹ ಬೇಜವಾಬ್ದಾರಿ ನಡೆಯನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X