Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಮೊಳಗಿದ ‘ಸೌಜನ್ಯಾ’ ಪರ...

ಮಂಗಳೂರಿನಲ್ಲಿ ಮೊಳಗಿದ ‘ಸೌಜನ್ಯಾ’ ಪರ ಹೋರಾಟದ ಧ್ವನಿ

ವಾರ್ತಾಭಾರತಿವಾರ್ತಾಭಾರತಿ20 Aug 2023 9:59 PM IST
share
ಮಂಗಳೂರಿನಲ್ಲಿ ಮೊಳಗಿದ ‘ಸೌಜನ್ಯಾ’ ಪರ ಹೋರಾಟದ ಧ್ವನಿ

ಮಂಗಳೂರು, ಆ.20: ಧರ್ಮಸ್ಥಳದಲ್ಲಿ ಹನ್ನೊಂದು ವರ್ಷದ ಹಿಂದೆ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಕೃತ್ಯಕ್ಕೆ ಸಂಬಂಧಿಸಿ ನ್ಯಾಯ ದೊರಕಿಸಿಕೊಡಬೇಕೆಂದು ರಾಜ್ಯದ ಹಲೆವೆಡೆ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ಮಂಗಳೂರಿನಲ್ಲೂ ಕಾಣಿಸಿಕೊಂಡಿವೆ. ಸೌಜನ್ಯಾ ಹೋರಾಟ ಸಮಿತಿ ಮಂಗಳೂರು ಇದರ ವತಿಯಿಂದ ರವಿವಾರ ನಗರದ ಕದ್ರಿ ಬಯಲಯ ರಂಗ ಮಂದಿರದ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಸೌಜನ್ಯಾ ಪರ ಹೋರಾಟದ ಧ್ವನಿ ಮೊಳಗಿಸಿದ್ದಾರೆ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರವಿವಾರ ಸಂಜೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಕದ್ರಿ ಬಯಲು ರಂಗ ಮಂದಿರದ ಮೈದಾನಕ್ಕೆ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರು ಆ ಬಳಿಕ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು. ಆಡಳಿತ ಮತ್ತು ವಿಪಕ್ಷದ ರಾಜಕಾರಣಿಗಳು, ಜನಪ್ರತಿನಿಧಿಗಳು ಆರೋಪ-ಪ್ರತ್ಯಾರೋಪ ಮಾಡದೆ ಸೌಜನ್ಯಾ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡದಿದ್ದರೆ ಚುನಾವಣೆ ಬಹಿಷ್ಕರಿಸುವೆವು ಎಂಬ ಸಂದೇಶ ಸಾರಿದರು.

ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ ಎಲ್ಲಾ ಪಕ್ಷದ ರಾಜಕಾರಣಿಗಳು, ಜನಪ್ರತಿನಿಧಿಗಳು ಸೌಜನ್ಯಾ ಪ್ರಕರಣದ ಮರು ತನಿಖೆಗೆ ಸರಕಾರದ ಮೇಲೆ ಒತ್ತಡ ಹೇರಬೇಕು. ಸಮರ್ಥ ತಂಡದಿಂದ ತನಿಖೆ ಮಾಡಿಸಬೇಕು. ತಮ್ಮ ಮನೆ ಬಾಗಿಲಿಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕುವಂತಹ ವಾತಾವರಣವನ್ನು ಯಾವ ಕಾರಣಕ್ಕೂ ರಾಜಕಾರಣಿಗಳು ಸೃಷ್ಟಿಸಬಾರದು ಎಂದರು.

ನ್ಯಾಯ ಕೇಳುವವರ ಬಾಯಿ ಮುಚ್ಚಿಸಲು ಇನ್ನೆಂದೂ ಸಾಧ್ಯವಿಲ್ಲ. 11 ವರ್ಷಗಳ ಕಾಲ ಶಾಂತಿಯುತವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಕ್ರಾಂತಿಯಾಗಲಿದೆ. ಸೆ.3ರಂದು ಬೆಳ್ತಂಗಡಿಯಲ್ಲಿ ಜರುಗಿಸುವ ಬೃಹತ್ ಪ್ರತಿಭಟನೆಯ ಮೂಲಕ ಸರಕಾರ, ರಾಜಕಾರಣಿಗಳು, ಪೊಲೀಸ್ ಇಲಾಖೆಯನ್ನು ಕಣ್ತೆರೆಸುವ ಪ್ರಯತ್ನ ನಡೆಯಲಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಸಿದರು.

ದೇಶದಲ್ಲಿ ಮಾನವೀಯತೆ, ಕಾನೂನು ಸತ್ತು ಹೋಗಿದೆ. ಪ್ರಜೆಗಳಿಗೆ ಹಕ್ಕು ಇಲ್ಲ ಎಂಬಂತಾಗಿದೆ. ಸೌಜನ್ಯಾಳನ್ನು ಗ್ಯಾಂಗ್‌ ರೇಪ್ ಮಾಡಿ ಹತ್ಯೆ ಮಾಡಿದವರು ಜೈಲಿಗೆ ಹೋಗಿಲ್ಲ. ಕಾನೂನು ರೀತಿಯ ಹೋರಾಟಕ್ಕೆ ನ್ಯಾಯ ಸಿಗದಿದ್ದರೆ ಅದನ್ನು ಕಸಿದುಕೊಳ್ಳಲು ಪ್ರಜಾಪ್ರಭುತ್ವಕ್ಕೆ ಗೊತ್ತಿದೆ. ಆದರೆ ಅದಕ್ಕೆ ಆಡಳಿತ ವ್ಯವಸ್ಥೆ ಅವಕಾಶ ನೀಡಬಾರದು. ಗೃಹ ಸಚಿವ ಪರಮೇಶ್ವರ್ ಸೌಜನ್ಯಾ ಪ್ರಕರಣ ಮುಗಿದ ಅಧ್ಯಾಯ ಎಂದಿದ್ದಾರೆ. ಆದರೆ ಅವರ ಮನೆ ಬಾಗಿಲಿಗೆ ಮುತ್ತಿಗೆ ಹಾಕುವಾಗ ನಮ್ಮ ಹೋರಾಟ ಏನೆಂಬುದು ಅವರಿಗೆ ಗೊತ್ತಾಗಲಿದೆ ಎಂದು ಮಹೇಶ್ ಶೆಟ್ಟಿ ಹೇಳಿದರು.

*ಸಮಿತಿಯ ಸಂಚಾಲಕಿ ಪ್ರಸನ್ನ ರವಿ ಮಾತನಾಡಿ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಒಂದಾಗಿ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗೃಹಸಚಿವರು, ರಾಷ್ಟ್ರಪತಿಯ ಮೇಲೆ ಒತ್ತಡ ಹಾಕಬೇಕು. ನ್ಯಾಯ ಸಿಗದಿದ್ದರೆ ಚುನಾವಣೆ ಬಹಿಷ್ಕಾರ ಮಾಡಬೇಕು ಎಂದು ಕರೆ ನೀಡಿದರು.

*ಸೌಜನ್ಯಾಳ ತಾಯಿ ಕುಸುಮಾವತಿ ಮಾತನಾಡಿ ಕಳೆದ 11 ವರ್ಷದಿಂದ ನ್ಯಾಯಾಕ್ಕಾಗಿ ಊರಿಡೀ ಸುತ್ತುತ್ತಿದ್ದೇವೆ. ಈಗ ನಮ್ಮ ಹೋರಾಟಕ್ಕೆ ಜನರ ಬೆಂಬಲ ಕಂಡಾಗ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದರು.

ಕದ್ರಿ ಜೋಗಿ ಮಠದ ನಿರ್ಮಲನಾಥ ಜಿ ಕಾರ್ಯಕ್ರಮ ಉದ್ಘಾಟಿಸಿದರು. ಶಶಿಕಲಾ ಶೆಟ್ಟಿ ಸ್ವಾಗತಿಸಿ ರೋಹಿತ್ ಉಳ್ಳಾಲ ಕಾರ್ಯಕ್ರಮ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X