Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ‘ಡಾಟಾ ಸೆಂಟರ್’ಗೆ...

ಮಂಗಳೂರಿನಲ್ಲಿ ‘ಡಾಟಾ ಸೆಂಟರ್’ಗೆ ಚಿಂತನೆ: ಡಾ. ಮಂಜುಳಾ

ವಾರ್ತಾಭಾರತಿವಾರ್ತಾಭಾರತಿ31 Oct 2025 8:16 PM IST
share
ಮಂಗಳೂರಿನಲ್ಲಿ ‘ಡಾಟಾ ಸೆಂಟರ್’ಗೆ ಚಿಂತನೆ: ಡಾ. ಮಂಜುಳಾ

ಮಂಗಳೂರು, ಅ. 31: ಬೆಂಗಳೂರಿನಂತೆ ಮಂಗಳೂರನ್ನು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಹಬ್ (ಐಟಿ) ಆಗಿಸುವ ಪ್ರಯತ್ನದಲ್ಲಿ ಸರಕಾರ ಐಟಿ ಪಾರ್ಕ್ ಘೋಷಿಸಿದೆ. ಇದಕ್ಕೆ ಪೂರಕವಾಗಿ ಡಾಟಾ ಸೆಂಟರ್ ಸ್ಥಾಪನೆಗೆ ಚಿಂತನೆ ಇದೆ ಎಂದು ಸರಕಾರದ ಐಟಿ ಮತ್ತು ಬಿಟಿ, ಇಲೆಕ್ಟ್ರಾನಿಕ್ಸ್ ವಿಭಾಗದ ಕಾರ್ಯದರ್ಶಿ ಡಾ. ಮಂಜುಳಾ ಎನ್. ತಿಳಿಸಿದ್ದಾರೆ.

ಮಂಗಳೂರಿನ ಮಾಲೆಮಾರ್‌ನ ವರ್ಕ್‌ವರ್ಕ್ ಟ್ರಯಾಂಗಲ್ ಸಂಸ್ಥೆಯಲ್ಲಿ ಶುಕ್ರವಾರ ಐಟಿ ಉದ್ಯಮಿಗಳ ಜತೆ ಮಾತುಕತೆ ನಡೆಸಿದ ಬಳಕ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಮಂಗಳೂರು ಕೂಡಾ ಐಟಿ ಕ್ಷೇತ್ರದತ್ತ ದಾಪುಗಾಲಿಡುತ್ತಿದೆ. ಗೇಮಿಂಗ್, ಸ್ಟಾರ್ಟ್‌ಅಪ್‌ಗಳು ಇಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ತೆರೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಐಟಿ ಉದ್ದಿಮೆಗಳಿಗೆ ಪೂರಕವಾಗಿ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಡಾಟಾ ಸೆಂಟರ್‌ನ ಸ್ಥಾಪನೆ ಮಂಗಳೂರಿನಲ್ಲಿ ಅಗತ್ಯವಿದೆ. ಇದರ ಜತೆಗೆ ಬೆಂಗಳೂರಿನಲ್ಲಿರುವಂತೆ ಸೆಂಟರ್ ಫಾರ್ ಎಕ್ಸಲೆನ್ಸ್ ಕೇಂದ್ರ ಸ್ಥಾಪನೆಯ ಬಗ್ಗೆಯೂ ಚಿಂತನೆ ಇದೆ ಎಂದವರು ಹೇಳಿದರು.

ಸರಕಾರ ಈಗಾಗಲೇ ಮಂಗಳೂರಿನಲ್ಲಿ ಕಿಯೋನಿಕ್ಸ್ ಜಾಗದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಎರಡು ವರ್ಷಗಳಲ್ಲಿ ಅಗತ್ಯ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವದಲ್ಲಿ ಸುಮಾರು 135 ಕೊಟಿ ರೂ. ವೆಚ್ಚದಲ್ಲಿ ಈ ಐಟಿ ಪಾರ್ಕ್ ನಿರ್ಮಾಣ ಉದ್ಯೋಗ ಸೃಷ್ಟಿಯ ಜತೆಗೆ ಇಲ್ಲಿನ ಐಟಿ ಕ್ಷೇತ್ರದ ಪ್ರತಿಭೆಗಳಿಗೆ ಊರಿನಲ್ಲೇ ಉದ್ಯೋಗ ಸೃಷ್ಟಿಸಲು ಅವಕಾಶ ಕಲ್ಪಿಸಲಿದೆ. ಐಟಿ ಪಾರ್ಕ್ ನಿರ್ಮಾಣದ ಜತೆಗೆ ಅಗತ್ಯ ಮೂಲಭೂತ ಸೌಕರ್ಯಗಳಿಗೂ ವ್ಯವಸ್ಥೆಯಾಗಲಿದೆ ಎಂದು ಹೇಳಿದರು.

ಕರಾವಳಿ ಭಾಗದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಿಫುಲ ಅವಕಾಶ ಹಾಗೂ ಸಾಮರ್ಥ್ಯದ ಕುರಿತಂತೆ ಇಲ್ಲಿನ ಐಟಿ ಉದ್ದಿಮೆದಾರರ ಜತೆ ಚರ್ಚಿಸಲಾಗಿದೆ. ಸಾಕಷ್ಟು ಕೆಲಸ ಆಗುತ್ತಿದೆ. ಪ್ರತಿ ವರ್ಷ ಕರಾವಳಿ ಭಾಗದಲ್ಲಿ 10000ದಷ್ಟು ಇಂಜಿನಿಯರ್‌ಗಳು, 35000ದಷ್ಟು ಪದವೀಧರರು ಶಿಕ್ಷಣ ಸಂಸ್ಥೆಗಳಿಂದ ಹೊರಬರುತ್ತಿದ್ದಾರೆ. ಇಲ್ಲಿ ಐಟಿ ಕ್ಷೇತ್ರ ವಿಸ್ತಾರಗೊಂಡಷ್ಟು ವಿವಿಧ ರಾಜ್ಯ ಹಾಗೂ ಹೊರ ದೇಶಗಳಿಗೆ ಪಲಾಯನಗೊಳ್ಳುವುದಕ್ಕೆ ತಡೆ ಬೀಳಲಿದೆ ಎಂದರು.

ರೋಬೋ ಸಾಫ್ಟ್ ಸಂಸ್ಥೆಯ ಸಂಸ್ಥಾಪಕ, ವರ್ಕ್‌ವರ್ಕ್ ಸಂಸ್ಥೆಯ ಪ್ರಮುಖರಾದ ರೋಹಿತ್ ಭಟ್‌ರವರು ಮಾತ ನಾಡಿ, ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪನೆಯು ಹೂಡಿಕೆದಾರರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದೆ. ಸರಕಾರವೇ ಐಟಿ ಕ್ಷೇತ್ರದ ಅಭಿವೃದ್ಧಿಗೆ ಮುಂದಡಿ ಇಟ್ಟಿರುವುದು ಉತ್ತಮ ಬೆಳವಣಿಗೆ. ಈಗಾಗಲೇ ಖಾಸಗಿ ಸಂಸ್ಥೆಗಳು ಕರಾವಳಿ ಯಲ್ಲಿ ಐಟಿ ಕ್ಷೇತ್ರವನ್ನು ವಿಸ್ತರಿಸುವಲ್ಲಿ ಸಾಕಷ್ಟು ಕೆಲಸ ಕಾರ್ಯ ನಡೆಸುತ್ತಿವೆ. ಕಳೆದ ಎರಡು ವರ್ಷಗಳಲ್ಲಿ 40 ಹೊಸ ಕಂಪನಿಗಳು ಇಲ್ಲಿಗೆ ಬಂದಿವೆ. ಸುಮಾರು 8000 ಉದ್ಯೋಗ ಸೃಷ್ಟಿಯಾಗಿವೆ ಎಂದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ)ನ ಸಿಇಒ ಸಂಜೀವ್ ಗುಪ್ತಾ ಮಾತನಾಡಿ, ಕರಾವಳಿಯನ್ನು ಭಾರತದ ಸಿಲಿಕಾನ್ ಬೀಚ್ ಸಿಟಿಯಾಗಿ ಪರಿವರ್ತಿಸುವಲ್ಲಿ ಈಗಾಗಲೇ ಖಾಸಗಿ ಐಟಿ ಸಂಸ್ಥೆಗಳವರು ಪ್ರಯತ್ನಿ ಸುತ್ತಿದ್ದಾರೆ. ಹಲವು ವಿದೇಶಿ ಕಂಪನಿಗಳು ಈಗಾಗಲೇ ಇಲ್ಲಿ ಬಂದಿದ್ದು, ಸಾಕಷ್ಟು ಉದ್ಯೋಗ ಸೃಷ್ಟಿಗೆ ಕಾರಣ ವಾಗಿದೆ. ಸುಮಾರು ಎಂಟು ಬೃಹತ್ ಐಟಿ ಸಂಸ್ಥೆಗಳಲ್ಲಿ 1000ಕ್ಕೂ ಅಧಿಕ ಉದ್ಯೋಗಿಗಳಿದ್ದಾರೆ. ಡಾಟಾ ಸೆಂಟರ್ ಹಬ್ ಮೂಲಕ ಗೇಮಿಂಗ್ ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಇನ್ನಷ್ಟು ಉತ್ತೇಜನ ದೊರೆಯಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X