Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧಾರ್ಮಿಕ ವಿಚಾರದಲ್ಲಿ ರಾಜಕಾರಣ ಮಾಡುವವರು...

ಧಾರ್ಮಿಕ ವಿಚಾರದಲ್ಲಿ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ: ಪ್ರಕಾಶ್ ರಾಜ್

ವಾರ್ತಾಭಾರತಿವಾರ್ತಾಭಾರತಿ15 Feb 2025 1:30 PM IST
share
ಧಾರ್ಮಿಕ ವಿಚಾರದಲ್ಲಿ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ: ಪ್ರಕಾಶ್ ರಾಜ್

ಮಂಗಳೂರು, ಫೆ. 15: ನಾನು ಕುಂಭ ಮೇಳಕ್ಕೆ ಹೋಗದಿರುವುದು ನನ್ನ ನಂಬಿಕೆಯ ವಿಚಾರ. ನಾನು ಧರ್ಮ ವಿರೋಧಿಯಲ್ಲ. ಆದರೆ ನನ್ನ ನಂಬಿಕೆಯನ್ನು ಎಐ ತಂತ್ರಜ್ಞಾನ ಬಳಸಿಕೊಂಡು ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ ಎಂದು ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕುಂಭ ಮೇಳಕ್ಕೆ ಹೋಗುವುದು ಅವರವರ ನಂಬಿಕೆ. ಆದರೆ ನಾನು ಹೋಗದ್ದನ್ನೇ ವಿಚಾರವಾಗಿಸಿ, ಒಬ್ಬ ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಆತನ ಫೋಟೋವನ್ನು ದುರ್ಬಳಕೆ ಮಾಡಿಕೊಂಡು ಎಐ ನಂತಹ ತಂತ್ರಜ್ಞಾನವನ್ನು ದುರ್ಬಳಕೆ ಮಾಡುವುದು ಅಕ್ಷಮ್ಯ ಅಪರಾಧ. ಈ ರೀತಿ ತಪ್ಪು ಕಲ್ಪನೆ ಹರಡುವ ಕೆಲಸವನ್ನು ಪ್ರಶಾಂತ್ ಸಂಬರ್ಗಿಅಂಥವರು ಮಾಡುತ್ತಿದ್ದಾರೆ. ಅದನ್ನು ಪ್ರಶ್ನಿಸುವುದಕ್ಕಾಗಿ ಕೇಸ್ ದಾಖಲಿಸಲಾಗಿದೆ ಎಂದವರು ಹೇಳಿದರು.

ವಿಜ್ಞಾನ ಅಥವಾ ತಂತ್ರಜ್ಞಾನವನ್ನು ವಿಕಾಸಕ್ಕಾಗಿ ಉಪಯೋಗಿಸಬೇಕೇ ಹೊರತು, ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ ಎಂದು ಪ್ರಕಾಶ್ ರಾಜ್ ಹೇಳಿದರು.

ರಾಜ್ಯ ರಾಜಕಾರಣದ ಬೆಳವಣಿಗೆ ಕುರಿತಂತೆ ಪ್ರಶ್ನೆಗೆ, ನಷ್ಟ ಇದೆ ಹಣ ಹೊಂದಿಸಲು ಆಗುತ್ತಿಲ್ಲ ಅಂದರೆ ಸರಕಾರ ಬಿಸ್ನೆಸ್ ಮಾಡುತ್ತಿದೆಯೇ, ಎಲ್ಲಿ ತಪ್ಪುತ್ತಿದೆ ಎಂದು ಯೋಚಿಸಬೇಕು. ಒಂದು ಸರ್ಕಾರ ಒಂದು ದೇಶ ನಡೆಯೋದು ಪ್ರಜೆಗಳ ದುಡ್ಡಿಂದ. ಒಂದು ದೇವಸ್ಥಾನ ನಡೆಯುವುದು ಪ್ರಜೆಗಳು ಹಾಕಿದ ಹುಂಡಿಯ ಹಣದಿಂದ. ಹಾಗಾಗಿ ಸರಕಾರ ಆಡಳಿತದಲ್ಲಿ ಎಲ್ಲಿ ಸೋಲುತ್ತಿದೆ ಎಂದು ಅರ್ಥ ಮಾಡಿಕೊಳ್ಳುವ ಜತೆಗೆ ಅದನ್ನು ಪ್ರಶ್ನಿಸುವ ಜವಾಬ್ಧಾರಿಯೂ ನಾಗರಿಕರದ್ದು ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ಫ್ರೀ ಬೀಸ್ ಪ್ಯಾರಸೈಟ್ ಅನ್ನುತ್ತೆ. ಆದರೆ, ಬಡವರಿಗೆ ಫ್ರೀ ಬೀಸ್ ನೀಡೋದು ಪ್ಯಾರಸೈಟ್ ಹೇಗಾಗುತ್ತೆ? ಹಾಗಾದರೆ ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನಾ ಮಾಡೋದು ಯಾವ ಪ್ಯಾರಸೈಟ್ ಎಂದವರು ಪ್ರಶ್ನಿಸಿದರು.

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಚರ್ಚೆ ವಿಚಾರದ ಕುರಿತಂತೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂಬೇಡ್ಕರ್ ಅವರನ್ನ ಹೇಗೆ ಕೊಲ್ಲಬೇಕು ಅಂತ ಬಿಜೆಪಿ ಯೋಚನೆ ಮಾಡುತ್ತದೆ. ಅತ್ತ ಕಾಂಗ್ರೆಸ್ ಅಂಬೇಡ್ಕರ್ ಅವರನ್ನ ಹೇಗೆ ಉಪಯೋಗಿಸಬೇಕು ಅಂತ ಯೋಚನೆ ಮಾಡುತ್ತದೆ.

ಇವರಿಬ್ಬರ ಮಾತಿನ ನಡುವಿನ ಮೌನವನ್ನು ನಾವು ಪ್ರಜೆಗಳಾಗಿ ಅರ್ಥ ಮಾಡಿಕೊಳ್ಳಬೇಕು. ಜನರಿಗೆ ಈಗ ಅರ್ಥವಾಗುತ್ತಿದೆ. ಆಶ್ವಾಸನೆಗಳು ಎಷ್ಟು ಸುಳ್ಳು ಮಾತುಗಳು ಎಷ್ಟು ಸುಳ್ಳು ಅನ್ನೋದು ಜನರಿಗೆ ಅರ್ಥವಾಗುತ್ತದೆ. ಯಾರದೋ ಮಾತು ಕೇಳಿ ಮತ ಮಾಡುವುದರಿಂದ ಏನಾಗುತ್ತಿದೆ ಅನ್ನೋದು ಗೊತ್ತಾಗುತ್ತಿದೆ ಎಂದರು.

ಅಕ್ರಮ ವಲಸಿಗರು ಅಂದರೆ ಅಕ್ರಮವೇ ತಾನೇ, ಪ್ರತಿಯೊಂದು ದೇಶಕ್ಕೂ ಅವರದ್ದೇ ನೀತಿ ನಿಯಮ ಇರುತ್ತವೆ. ಸಕ್ರಮವಾಗಿ ಹೋದ್ರೆ ಯಾರೂ ಬೇಡ ಅನ್ನಲ್ಲ. ನಮ್ಮ ದೇಶದಿಂದ ಯಾಕೆ ಹೋದ್ರು ಅನ್ನೋ ಪ್ರಶ್ನೆ ಪ್ರಮುಖವಾಗಿರುವುದು. ನಮ್ಮದು ಮದರ್ ಆಫ್ ಡೆಮಾಕ್ರಸಿ ಅಂತೇವೆ. ಹಾಗಾದರೆ ಯಾಕೆ ಲಕ್ಷಾಂತರ ಜನರ ದೇಶ ಬಿಟ್ಟು ಹೋಗುತ್ತಿದ್ದಾರೆ ಎಂಬುದನ್ನು ನಾವು ಆಲೋಚನೆ ಮಾಡಬೇಕು.

ಇದೀಗ ಪ್ರಧಾನಿ ಮೋದಿ ಮೋದಿ ಹೋಗಿ ಟ್ರಂಪ್ ಜೊತೆ ಮಾತಾಡಿ ಅದನ್ನೆಲ್ಲ ಸರಿ ಮಾಡುತ್ತಾರೆ ಅನ್ನೋದು ಮುಖ್ಯವಲ್ಲ ಎಂದು ಅಮೆರಿಕಾ ದಿಂದ ಅಕ್ರಮ ವಲಸಿಗರ ನಿರ್ಗಮನ ಹಿನ್ನೆಲೆಯಲ್ಲಿ ಪ್ರಧಾನಿ ಮೋಧಿ ಭೇಟಿ ವಿಚಾರ ಕುರಿತ ಪ್ರಶ್ನೆಗೆ ಪ್ರಕಾಶ್ ರಾಜ ಈ ಉತ್ತರ ನೀಡಿದರು.

ದೆಹಲಿಯಲ್ಲಿ ಆಪ್‌ಗೆ ಗೆಲ್ಲಲು ಅವಕಾಶ ಇತ್ತಾದರೂ, ಜನ ಸೋಲಿಸಿದ್ದಾರೆ ಅಂದ್ರೆ ಜನ ಬೇಸತ್ತಿದ್ಧಾರೆ ಎಂದರ್ಥ. ಅದನ್ನ ಒಪ್ಪಿಕೊಳ್ಳಲೇ ಬೇಕು. ಒಳ್ಳೆಯ ಕೆಲಸ ಮಾಡಿದ ತಕ್ಷಣ ದೇಶದಲ್ಲಿ ಅವರೇ ಗೆಲ್ಲುತ್ತಾರೆ ಎಂಬ ಖಾತರಿ ಇಲ್ಲ. ಕಳೆದ ಮೂರು ವರ್ಷಗಳ ಕಾಲ ಅವರಿಗೆ ಸರಿಯಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿಲ್ಲ ಎಂಬ ಆಪ್‌ನ ಮಾತುಗಳಲ್ಲೂ ಸತ್ಯವಿದೆ. ಮುಖ್ಯಮಂತ್ರಿಯನ್ನು ಜೈಲಿನಲ್ಲಿರಿಸಲಾಯಿತು. ಈ ಬಗ್ಗೆ ಪ್ರಜೆಗಳು ಯೋಚನೆ ಮಾಡಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X