ಉಳ್ಳಾಲ | ಸೌಹಾರ್ದ ದೀಪಾವಳಿ ಸಂಗಮ

ಉಳ್ಳಾಲ: ನಾವು ಸಮಾಜದಲ್ಲಿ ನೆಮ್ಮದಿ, ಶಾಂತಿಯಿಂದ ಬದುಕಬೇಕಾದರೆ ನಮ್ಮ ಹೃದಯದೊಳಗೆ ಸೌಹಾರ್ದದ ಹೂವು ಅರಳಬೇಕು, ಆ ಹೂವಿಗೆ ಸುಗಂದ ಇರಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಅಭಿಪ್ರಾಯಪಟ್ಟರು.
ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಬಿಲ್ಲವ ಸೇವಾ ಸಮಾಜ ಯುವವಾಹಿನಿ, ರೋಟರಿ ಸಮುದಾಯ ದಳ, ಉಳ್ಳಾಲ ಜಮಾಅತೆ ಇಸ್ಮಾಮಿ ಹಿಂದ್, ನವೋದಯ ಫ್ರೆಂಡ್ಸ್, ಪೊಸಕುರಲ್ ಬಳಗ, ಸದ್ಫಾವನಾ ವೇದಿಕೆ, ಕಿನ್ಯ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಯುವಕ ಮಂಡಲ, ಛೋಟಾ ಮಂಗಳೂರು ಲಯನ್ಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಲ್ಯ ಬಿಲ್ಲವ ಸಮಾಜದ ನಾರಾಯಣ ಗುರು ಕಲಾಂಗಣದಲ್ಲಿ ನಡೆದ ಸೌಹಾರ್ದ ದೀಪಾವಳಿ ಸಂಗಮದಲ್ಲಿ ಮಾತನಾಡಿದರು.
ತೊಕ್ಕೊಟ್ಟು ಮಸ್ಜಿದುಲ್ ಹುದಾ ಖತೀಬ್ ಮುಹಮ್ಮದ್ ಕುಂಞಿ ಮಾತನಾಡಿ, ಎಲ್ಲಾ ಧರ್ಮಗಳು ಜಗತ್ತಿಗೆ ಬೆಳಕನ್ನು ಕೊಟ್ಟಿದೆ. ಆದರೆ ನಾವಿಂದು ಅಕ್ರಮ, ಹಿಂಸೆ, ಸುಳ್ಳು, ಅನೈತಿಕ ಎಂಬ ಕತ್ತಲ ಜಗತ್ತಿನಲ್ಲಿ ಬದುಕುತ್ತಿರುವ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಬಹಳ ಪ್ರಾಮುಖ್ಯತೆ ಇದೆ ಎಂದರು.
ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ವಂ.ಫಾ.ಡೊನಾಲ್ಡ್ ನೀಲೇಶ್ ಮಾತನಾಡಿದರು.
ಈ ಸಂದರ್ಭದಲ್ಲಿ ಈ ಸಾಲಿನ ದ.ಕ.ಜಿಲ್ಲಾ ರಾಜೋತ್ಸವ ಪುರಸ್ಕೃತರಾದ ಅನಿಲ್ದಾಸ್, ಗಂಗಾಧರ್ ಎಸ್.ಪೂಜಾರಿ, ಮುಹಮ್ಮದ್ ಮುಕ್ಕಚೇರಿ, ಡಾ.ಅಶ್ವಿನಿ ಎಸ್.ಶೆಟ್ಟಿ, ಇಸ್ಮಾಯಿಲ್ ಶಾಫಿ ಬಬುಕಟ್ಟೆ, ಎ.ಕೆ.ಕುಕ್ಕಿಲ, ಸತೀಶ್ ಇರಾ, ರಾಜೇಶ್ ದಡ್ಡಗಡಿ, ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್, ನಮ್ಮೂರ ಧ್ವನಿ ಉಳ್ಳಾಲ, ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಗ್ರಾಮಚಾವಡಿ-ಕೊಣಾಜೆ, ಶ್ರೀ ದುರ್ಗಾ ಫ್ರೆಂಡ್ಸ್ ಉಳ್ಳಾಲಬೈಲು, ಶಂಸುಲ್ ಉಲಮಾ ದಾರುಸ್ಸಲಾಮ್ ಆಕಾಡಮಿ ವಾದಿತ್ವಾಯಿಲ ಕಿನ್ಯ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪುರಸ್ಕೃತ ಜಗದೀಶ್ ಸಿ.ಎಚ್, ದುರ್ಗಾಲತಾ , ರಾಧಾಕೃಷ್ಣ ರೈ ಹರೇಕಳ, ನಯನ ಇವರನ್ನು ಅಭಿನಂದಿಸಲಾಯಿತು.
ತೊಕ್ಕೊಟ್ಟು ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಧರ್ಮಕೇಂದ್ರದ ಪ್ರಧಾನ ಧರ್ಮಗುರು ವಂದನಿಯ ಫಾದರ್ ಸಿಪ್ರಿಯನ್ ಪಿಂಟೋ ಉದ್ಘಾಟಿಸಿದರು. ನಿವೃತ್ತ ಸೇನಾನಿ ಕೃಷ್ಣ ಗಟ್ಟಿ ಅಡ್ಕ ಅಧ್ಯಕ್ಷತೆ ವಹಿಸಿದ್ದರು. ತೊಕ್ಕೊಟ್ಟು ಸಹ್ಯಾದ್ರಿ ಕೊ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಟಿ.ಸುವರ್ಣ, ಉಳ್ಳಾಲ ಸದ್ಭಾವನಾ ವೇದಿಕೆ ಗೌರವಾಧ್ಯಕ್ಷ ಸದಾನಂದ ಬಂಗೇರ, ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲಾ ಸಂಚಾಲಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಎಂ.ಇ.ಐ.ಎಲ್ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್, ಉಳ್ಳಾಲ ಶ್ರೀ ಚೀರುಂಭಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ದ.ಕ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಯುವಕ ಮಂಡಲದ ಅಧ್ಯಕ್ಷ ಬಾಬು ಶ್ರೀ ಶಾಸ್ತ ಕಿನ್ಯ, ಜಮಾಅತೆ ಇಸ್ಮಾಮಿ ಹಿಂದ್ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಂ, ಲಯನ್ಸ್ ಕ್ಲಬ್ ಅಧ್ಯಕ್ಷೆ ಹರಿಣಾಕ್ಷಿ ಕೊಲ್ಯ, ನವೋದಯ ಫ್ರೆಂಡ್ಸ್ ಸರ್ಕಲ್ ಕಾರ್ಯದರ್ಶಿ ರೂಪೇಶ್ ಭಟ್ನಗರ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ್ ಕೊಲ್ಯ, ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಗೋಪಾಲ ಎಸ್.ಕೊಂಡಾಣ, ಯುವವಾಹಿನಿ ಅಧ್ಯಕ್ಷ ನಿತಿನ್ ಕರ್ಕೇರ, ರೋಟರಿ ಸಮುದಾಯ ದಳದ ಅಧ್ಯಕ್ಷ ಸೀತಾರಾಮ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.
ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಸ್ವಾಗತಿಸಿದರು. ಕುಸುಮಾಕರ ಕುಂಪಲ ವಂದಿಸಿದರು. ಮೋಹನ್ ಶಿರ್ಲಾಲ್ ನಿರೂಪಿಸಿದರು.







