Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ...

ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Aug 2023 6:32 PM IST
share
ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ದೇಶದ ಸ್ವಾವಲಂಬನೆ ಮತ್ತು ಭಾರತೀಯರ ಸ್ವಾತಂತ್ರ್ಯ ರಕ್ಷಣೆಗಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶದಾದ್ಯಂತ, ಕ್ವಿಟ್ ಇಂಡಿಯಾ ದಿನವಾದ ಬುಧವಾರ ವಿವಿಧ ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧದೆದುರು ಪ್ರತಿಭಟನಾ ಪ್ರದರ್ಶನ ನಡೆಯಿತು.ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜರವರು, ಕಳೆದ ಒಂಭತ್ತು ವರ್ಷಗಳಿಂದ ದೇಶವನ್ನಾಳುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಸಾರ್ವಜನಿಕ ಸೊತ್ತುಗಳನ್ನು ಖಾಸಗೀಕರಣಗೊಳಿಸುತ್ತಿದ್ದಾರೆ. ವಿದೇಶಿಪರ, ಬಂಡವಾಳಶಾಹಿಪರ ನೀತಿಗಳನ್ನು ತನ್ನ ಮತ್ತು ತನ್ನ ಪಕ್ಷಕ್ಕೋಸ್ಕರ ದೇಶದಲ್ಲಿ ಜ್ಯಾರಿಗೊಳಿಸಿ ಜನಸಾಮಾನ್ಯರ, ಕಾರ್ಮಿಕರ ಹಿತವನ್ನು ಕಡೆಗಣಿಸಿ, ದೇಶದ ಸ್ವಾತಂತ್ರ್ಯವನ್ನು, ಸ್ವಾವಲಂಬನೆಯನ್ನು ವಿದೇಶಿಗರಿಗೆ ಅಡವಿಡುತ್ತಿದ್ದಾರೆ. ಭಾರತೀಯರನ್ನು ಕಡೆಗಣಿಸಿ ಸದಾ ವಿದೇಶ ಸುತ್ತುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ‘ವಿದೇಶಿ ಗುರು’ ಆಗಿದ್ದಾರೆ ಎಂದು ಆರೋಪಿಸಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ವಸಂತ ಆಚಾರಿ ಯವರು ಮಾತನಾಡಿ,ಕೃಷಿ ನೀತಿಯನ್ನು ಹೆಮ್ಮೆಟ್ಟಿಸಿದ ರೈತರ ಚಳವಳಿ ಸರಕಾರಕ್ಕೆ ಎಚ್ಚರಿಕೆಯ ಘಂಟೆ’ ಕನಿಷ್ಟ ಕೂಲಿ, ತುಟ್ಟಿಭತ್ತೆಯನ್ನು ಮಾಲಕರಿಂದ ಜ್ಯಾರಿಮಾಡಿಸಲು ಆಗದ ಸರಕಾರಗಳು ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ವಿಫಲವಾಗಿದೆ. ದೇಶದ ಐಕ್ಯತೆ, ಘನತೆ ಯನ್ನು ರಕ್ಷಿಸಿ ಉಳಿಸಲು ಕಾರ್ಮಿಕರಿಗೆ ಹೋರಾಟವಲ್ಲದೆ ಬೇರೆ ದಾರಿ ಇಲ್ಲ. ಕೇಂದ್ರ ಸರಕಾರ ಜ್ಯಾರಿಗೊಳಿಸಲು ಅನುಮೋದಿಸಿದ ಕೃಷಿ ಕಾಯ್ದೆಗಳನ್ನು ಹೆಮ್ಮೆಟ್ಟಿಸಿದ ರೈತರ ಚಳವಳಿ ಸರಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಎಚ್ಚರಿಸಿದರು.

ಜನರ ಹೋರಾಟಗಳಿಂದ ರೂಪುಗೊಂಡ ಹಲವಾರು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವ ಈಗಿನ ಕೇಂದ್ರ ಸರಕಾರ ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಜನರೇ ಸಂವಿಧಾನಬದ್ಧವಾಗಿ ಚುನಾಯಿ ಸಿದ ಸರಕಾರವೇ ಇಂದು ಜನರ ಮೇಲೆ ಸವಾರಿ ನಡೆಸುತ್ತಿದೆ. ಸರಕಾರದ ವಿರುಧ್ಧದ ಈ ಜನ ಪ್ರತಿಭಟನೆಗೆ ಕೇಂದ್ರ ಸರಕಾರವೇ ಕಾರಣ ಎಂದು ಇಂಟಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು ಆರೋಪಿಸಿದರು.

ಕೇಂದ್ರ ಸರಕಾರ ಜ್ಯಾರಿಗೊಳಿಸಿದ ನೋಟ್ ಬ್ಯಾನ್ ತೀರ್ಮಾನವು ಅಪ್ರಬುದ್ಧ ಹಾಗೂ ಜನರ ಮೇಲೆ ಹೇರಿಕೆಯಾಗಿತ್ತು. ನೋಟು ಬ್ಯಾನ್‌ನಿಂದ ಕಪ್ಪು ಹಣ ನಿರ್ಮೂಲನೆ, ಭಯೋತ್ಪಾದನೆ ನಿಗ್ರಹ, ಆರ್ಥಿಕತೆ ಬೆಳೆಯುತ್ತದೆ ಎಂದು ಹೇಳಿದ ಕೇಂದ್ರದ ಆಡಳಿತದಾರರು ತನ್ನ ಪೇಲವ ತೀರ್ಮಾನದಿಂದ ದೇಶದ ಆರ್ಥಿಕತೆಯನ್ನು ಹಾಳು ಮಾಡಿದರು, ದೇಶದ ಆರ್ಥಿಕತೆ ಕುಸಿಯಿತು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಿದ್ದರಿಂದ ಉದ್ಯೋಗ ನಷ್ಟವಾಯಿತು. ದೇಶ ಕಾಯುವ ಯೋಧರಪರ ಎಂದು ಮಾತನಾಡುತ್ತಾ ರಕ್ಷಣಾ ಕ್ಷೇತ್ರವನ್ನು ಖಾಸಗೀಕರಿಸಲು ಹೊರಟಿರುವ ಕೇಂದ್ರ ಸರಕಾರದ ಅಧಿಕಾರದಲ್ಲಿ ಉಳಿಯಲು ಅರ್ಹವಲ್ಲ ಎಂದು ಎಐಬಿಇಎ ನೇತೃತ್ವದ ಬ್ಯಾಂಕ್ ಸಂಘಟನೆಗಳ ಮುಖಂಡ ಫಣೀಂದ್ರ ಟೀಕಿಸಿದರು.

ಕಾರ್ಮಿಕ ವರ್ಗ ನಡೆಸಿದ ಅಂತಾರಾಷ್ಟ್ರೀಯ ಹೋರಾಟದಿಂದ ಎಂಟು ಗಂಟೆ ಮಾತ್ರ ಕೆಲಸದ ಅವಧಿ ಎಂಬ ಕಾನೂನು ಜ್ಯಾರಿಯಾಯಿತು. ಆದರೆ ಇವತ್ತಿನ ಕೇಂದ್ರ ಸರಕಾರ ಈ ಅವಧಿಯನ್ನು 12 ಗಂಟೆಗಳಿಗೆ ಏರಿಸಿ ಮಾಲಕರಿಗೆ ಪೂರಕ ವಾದ ಕಾನೂನು ರೂಪಿಸಿತು. ಕೆಲವೊಂದು ರಾಜ್ಯಗಳು ಇದನ್ನು ವಿರೋಧಿಸಿದರೂ ಹಿಂದಿನ ಕರ್ನಾಟಕ ರಾಜ್ಯ ಸರಕಾರ ತರಾತುರಿಯಿಂದ ಜ್ಯಾರಿಗೊಳಿಸಿದೆ. ಸರಕಾರಗಳ ಈ ಕಾರ್ಮಿಕ ವಿರೋಧಿ ನೀತಿಯಿಂದ ಕಾರ್ಮಿಕರ ಸಂಖ್ಯೆ ಕಡಿಮೆ ಯಾಗಿ ಉದ್ಯೋಗ ನಷ್ಟವಾಗಲಿದೆ. ಸರಕಾರದ ಈ ನೀತಿಯನ್ನು ನಾವೆಲ್ಲ ವಿರೋಧಿಸಬೇಕಾಗಿದೆ ಎಂದು ಎಐಸಿಸಿಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕೆ.ಇ ಜನರಿಗೆ ಕರೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಎಐಟಿಯುಸಿ ನಾಯಕರಾದ ಬಿ.ಶೇಖರ್, ಎ.ಪ್ರಭಾಕರ್ ರಾವ್, ವಿ.ಕುಕ್ಯಾನ್, ಸುರೇಶ್ ಕುಮಾರ್ ಬಂಟ್ವಾಳ್, ಕರುಣಾಕರ್ ಮಾರಿಪಲ್ಲ, ಸುಲೋಚನಾ, ಮಮತ, ಶಮಿತಾ, ಕೇಶವತಿ, ಸಿಐಟಿಯು ನಾಯಕ ರಾದ ಬಾಲಕೃಷ್ಣ ಶೆಟ್ಟಿ, ಭಾರತಿ ಬೋಳಾರ. ಪದ್ಮಾವತಿ ಶೆಟ್ಟಿ, ಸದಾಶಿವ ದಾಸ್, ಜಯಂತ ನಾಯ್ಕ್, ಮುನೀರ್ ಕಾಟಿಪಲ್ಲ, ಇಂಟಕ್‌ನ ಮನೋಹರ್ ಶೆಟ್ಟಿ, ಎಐಸಿಸಿಟಿಯುನ ರಾಮಪ್ಪ ವಿಟ್ಲ, ಬ್ಯಾಂಕ್ ನೌಕರರ ಸಂಘಟನೆಯ ಪುರುಷೋತ್ತಮ ಮುಂತಾದವರು ಹಾಜರಿದ್ದರು. ಸ್ವಾಗತಿಸಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಇಂದಿನ ಚಳವಳಿಯ ಉದ್ದೇಶದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಐಟಿಯುಸಿ ಜಿಲ್ಲಾ ಸಹಾಯಕ ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X