Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಮತ್ತೆ...

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಮತ್ತೆ ಹೆದ್ದಾರಿಗೆ ಗುಡ್ಡ ಕುಸಿತ

ವಾರ್ತಾಭಾರತಿವಾರ್ತಾಭಾರತಿ28 July 2025 9:46 PM IST
share
ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಮತ್ತೆ ಹೆದ್ದಾರಿಗೆ ಗುಡ್ಡ ಕುಸಿತ

ಉಪ್ಪಿನಂಗಡಿ: ರಾಷ್ಟೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಹೆದ್ದಾರಿ ಬದಿಯ ಗುಡ್ಡ ಕುಸಿದು ಹೆದ್ದಾರಿ ಸಂಚಾರಕ್ಕೆ ತಡೆಯುಂಟಾದ ಘಟನೆ ಸೋಮವಾರ ಸಂಭವಿಸಿದೆ.

ಸೋಮವಾರ ಮುಂಜಾನೆ 4.50 ರ ವೇಳೆ ಗುಡ್ದ ಕುಸಿತವುಂಟಾಗಿ ಮರಗಳ ಸಹಿತ ಮಣ್ಣಿನ ರಾಶಿ ಹೆದ್ದಾರಿಗೆ ಹರಿದು ಬಂದಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ವ್ಯತ್ಯಯವುಂಟಾಗಿ ಘನ ವಾಹನಗಳ ಸಂಚಾರ ತಡೆ ಹಿಡಿಯಲ್ಪಟ್ಟಿತ್ತು. ಘಟನೆ ಸಂಭವಿಸಿದಾಕ್ಷಣ ನೆಲ್ಯಾಡಿ ಹೊರಠಾಣಾ ಎಎಸೈ ದೇವಪ್ಪ , ಸಿಬ್ಬಂದಿ ನಂದನ್ , ದಯಾನಂದ, ರವಿರಾಜ್ , ಸದಾಶಿವ ರವರು ಬಹುತೇಕ ವಾಹನಗಳನ್ನು ಗೋಳಿತೊಟ್ಟು - ಕೊಕ್ಕಡ - ಪೆರಿಯಶಾಂತಿ ಪರ್ಯಾಯ ರಸ್ತೆಯಲ್ಲಿ ಸಂಚರಿಸುವಂತೆ ವ್ಯವಸ್ಥೆ ಕಲ್ಪಿಸಿ ಬಹಳಷ್ಟು ವಾಹನಗಳನ್ನು ಕಾಯುವ ಶಿಕ್ಷೆಯಿಂದ ಪಾರು ಪಾಡಿದರು. ಮೂರು ಹಿಟಾಚಿ , ಒಂದು ಮಣ್ಣನ್ನು ಸರಿಸುವ ಯಂತ್ರವನ್ನು ಬಳಸಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆಯ ಬಳಿಕ ಹೆದ್ದಾರಿ ಸಂಚಾರ ಪುನರಾರಂಭಗೊಂಡಿತು.

ಸತತ 6 ನೇ ಬಾರಿಯ ಅವಘಡ: ಹೆದ್ದಾರಿ ವಿಸ್ತರಣೆಗಾಗಿ ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದ ಪರಿಣಾಮ ಈ ಬಾರಿಯ ಮಳೆಗಾಲದಲ್ಲಿ ಪದೇ ಪದೇ ಇಲ್ಲಿ ಗುಡ್ಡ ಕುಸಿತವುಂಟಾಗುತ್ತಿದ್ದು , ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಳ್ಳಲು ಕಾರಣವಾಗುತ್ತಿದೆ. ಈ ಹಿಂದೆಲ್ಲಾ ಒಂದು ಹಿಟಾಚಿಯನ್ನು ಬಳಸಿ ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಸುತ್ತಿದ್ದ ಬಗ್ಗೆ ಪತ್ರಿಕಾ ವರದಿಯು ಬೆಳಕು ಚೆಲ್ಲಿದ ಪರಿಣಾಮ ಈ ಬಾರಿ ನಾಲ್ಕು ಯಂತ್ರಗಳನ್ನು ಬಳಸಿ ಮಣ್ಣು ತೆರವು ಕಾರ್ಯಾಚರಣೆ ಮಾಡಲಾಗಿದೆ. ಇದರ ಪರಿಣಾಮ ಮುಂಜಾನೆ 4.30 ರ ಸುಮಾರಿಗೆ ತಡೆ ಹಿಡಿಯಲ್ಪಟ್ಟ ಹೆದ್ದಾರಿ ಸಂಚಾರ ಬೆಳಗ್ಗೆ 8.50 ರ ಸುಮಾರಿಗೆ ಮಣ್ಣು ತೆರವುಗೊಂಡು ಹೆದ್ದಾರಿಯಲ್ಲಿ ವಾಹನ ಸಂಚಾರ ಪುನರಾರಂಭವಾಯಿತು.

ಈ ಬಾರಿಯೂ ಹೆದ್ದಾರಿ ಸಂಚಾರ ತಡೆಗೊಂಡಾಗ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ರವಾನಿಸಿ ವಾಹನಗಳು ಪರ್ಯಾಯ ರಸ್ತೆಯನ್ನವಲಂಬಿಸಲು ಸಲಹೆ ನೀಡಿದ್ದು ಪ್ರಯೋಜನ ಕಾರಿ ಎನಿಸಿತು. ರಾಷ್ಟ್ರೀಯ ಹೆದ್ದಾರಿಯ ಸುರಕ್ಷತೆಗೆ ಸವಾಲಾಗಿರುವ ಈ ಭಾಗದಲ್ಲಿ ಗುಡ್ಡ ಕುಸಿತವನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ಅನುಷ್ಠಾನಿಸಬೇಕೆನ್ನುವುದು ನಾಗರಿಕ ವಲಯದ ಅಗ್ರಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X