Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಫೋನ್ ಕರೆ ಸ್ವೀಕರಿಸಿದಾಗಲೇ...

ಉಪ್ಪಿನಂಗಡಿ: ಫೋನ್ ಕರೆ ಸ್ವೀಕರಿಸಿದಾಗಲೇ ಖಾತೆಯಿಂದ ಹಣ ವರ್ಗಾವಣೆ!

► ಒಟಿಪಿ ಹೇಳಿಲ್ಲ, ಬ್ಯಾಂಕ್ ವಿವರ ನೀಡಿಲ್ಲ ► ಹೀಗೂ ಹಣ ದೋಚುವ ವಂಚನಾ ಜಾಲ

ವಾರ್ತಾಭಾರತಿವಾರ್ತಾಭಾರತಿ12 Dec 2024 10:53 PM IST
share
ಉಪ್ಪಿನಂಗಡಿ: ಫೋನ್ ಕರೆ ಸ್ವೀಕರಿಸಿದಾಗಲೇ ಖಾತೆಯಿಂದ ಹಣ ವರ್ಗಾವಣೆ!

ಉಪ್ಪಿನಂಗಡಿ: ಸೈಬರ್ ವಂಚನಾ ಜಾಲದ ಮೂಲಕ ಹಣ ದೋಚುವ ವಂಚಕರ ವಿರುದ್ಧ ಅದೆಷ್ಟು ಮುನ್ನೆಚ್ಚರಿಕೆ ವಹಿಸಿದರೂ, ಅವರು ಹೊಸ ಹೊಸ ವಂಚನಾ ಅವಿಷ್ಕಾರವನ್ನು ಮಾಡುತ್ತಲೇ ಇದ್ದಾರೆ. ಇಂತಹ ವಂಚಕರಿಂದಾಗಿ ಉಪ್ಪಿನಂಗಡಿಯ ವ್ಯಕ್ತಿಯೋರ್ವರು ಒಂದು ದೂರವಾಣಿ ಕರೆ ಸ್ವೀಕರಿಸಿದ ಕೂಡಲೇ ಅವರ ಖಾತೆಯಲ್ಲಿದ್ದ ಹಣ ವರ್ಗಾವಣೆಗೆ ಒಳಗಾಗಿರುವ ಪ್ರಕರಣ ನಡೆದಿದೆ.

ಇಲ್ಲಿನ ಮಾಧ್ಯಮ ಪ್ರತಿನಿಧಿಯೋರ್ವರಿಗೆ ಗುರುವಾರ ಬೆಳಗ್ಗೆ ಫೋನ್ ಕರೆಯೊಂದು ಬಂದಿದ್ದು, ಕರೆಯನ್ನು ಸ್ವೀಕರಿಸಿದಾಗ ಯಾವುದೇ ಮಾತುಕತೆ ಮಾಡದೆ ಫೋನ್ ಕರೆ ಕಡಿತಗೊಂಡಿತ್ತು. ಈ ವೇಳೆ ಇದು ಯಾರ ನಂಬರ್ ಎಂದು ಅವರು ಟ್ರೂ ಕಾಲರ್ ಮೂಲಕ ಕರೆಯ ಮೂಲವನ್ನು ಶೋಧಿಸಿದಾಗ ಅಲ್ಲಿ `ಲೈಕ್‍ಲೀ ಫ್ರಾಡ್' ಎಂಬುದು ಕಂಡು ಬಂದಿದೆ. ತಕ್ಷಣವೇ ವಂಚನೆಯ ಸಂಶಯಪಟ್ಟ ಅವರು ತನ್ನ ಫೋನ್‍ನ ಸಂದೇಶ ಪರಿಶೀಲಿಸಿದಾಗ ಆ ಫೋನ್ ನಂಬರ್ ಲಿಂಕ್ ಆಗಿದ್ದ ಐಪಿಪಿಬಿ ಖಾತೆಯಿಂದ 161 ರೂ. ಹಾಗೂ 14839 ರೂ. ಅಟೋ ಪೇ ಆಗಿದೆ ಎಂಬ ಸಂದೇಶ ಬಂದಿತ್ತು. ಕಳವಳಕ್ಕೀಡಾದ ಅವರು, ಐಪಿಪಿಬಿ ಖಾತೆಯ ಬಗ್ಗೆ ಇಲಾಖಾಧಿಕಾರಿಗಳಲ್ಲಿ ದೂರು ಸಲ್ಲಿಸಿದಾಗ ಸದ್ರಿ ಅಟೋ ಪೇ ಯಲ್ಲಿ 161 ರೂ. ವರ್ಗಾವಣೆಗೊಂಡಿದ್ದು, 14839 ರೂ. ಸಮರ್ಪಕ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ತಡೆಹಿಡಿಯಲ್ಪಟ್ಟಿದೆ ಎಂಬ ಮಾಹಿತಿ ದೊರಕಿತು. ಇದೇ ವೇಳೆ ಅದೇ ಸಂಖ್ಯೆಯಿಂದ ಮತ್ತೊಂದು ಕರೆ ಅವರಿಗೆ ಬಂದಿದ್ದು, ಆ ವೇಳೆ ಜಾಗೃತ ಗೊಂಡಿದ್ದ ಪರಿಣಾಮ ಅವರು ಕರೆ ಸ್ವೀಕರಿಸಲಿಲ್ಲ ಎಂದು ತಿಳಿದು ಬಂದಿದೆ.

ಫೋನ್ ಕರೆಯನ್ನು ಸ್ವೀಕರಿಸಿದ ಮಾತ್ರಕ್ಕೆ ಖಾತೆಯಲ್ಲಿದ್ದ ಹಣವು ಅಟೋ ಪೇ ಗೆ ಒಳಗಾಗಿರುವುದು ವಿಸ್ಮಯ ಮೂಡಿಸಿದ್ದು, ಇದು ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಫೋನ್ ನಂಬರ್‌ ಗಳನ್ನು ಬಳಸಿಕೊಂಡು ಖಾತೆಯಲ್ಲಿದ್ದ ಹಣವನ್ನು ವಂಚಿಸಲು ವಂಚಕರಿಗೆ ಸುಲಭ ಸಾಧ್ಯವಾಗುವ ಮೂಲಕ ನಾಗರಿಕ ಸಮಾಜವನ್ನು ಕಳವಳಕ್ಕೀಡು ಮಾಡಿದೆ.

ಫೋನ್ ಕರೆಯನ್ನು ಸ್ವೀಕರಿಸಿದ ಮಾತ್ರಕ್ಕೆ ಖಾತೆಯಲ್ಲಿರುವ ಹಣವು ಕ್ಷಣಾರ್ಧದಲ್ಲಿ ವರ್ಗಾವಣೆಗೊಳ್ಳುವುದು ವ್ಯವಸ್ಥೆಯಲ್ಲಿನ ಪ್ರಧಾನ ಲೋಪವಾಗಿದ್ದು, ಪರಿಶೀಲನಾ ಸಮಯಾವಕಾಶದಂತಹ ರಕ್ಷಣಾತ್ಮಕ ವ್ಯವಸ್ಥೆಗಳನ್ನು ಆರ್ಥಿಕ ವ್ಯವಹಾರದ ಸಂಸ್ಥೆಗಳು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಪ್ರಕರಣದ ಬಗ್ಗೆ ಅವರು ಸೈಬರ್ ಕ್ರೈಂ ವಿಭಾಗದ ಪೊಲೀಸರಿಗೆ ದೂರು ಸಲ್ಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X