Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ರೈಸ್ತರಿಗೆ ಶೇ. 3ರಷ್ಟು ಉದ್ಯೋಗ-...

ಕ್ರೈಸ್ತರಿಗೆ ಶೇ. 3ರಷ್ಟು ಉದ್ಯೋಗ- ಶಿಕ್ಷಣದಲ್ಲಿ ಮೀಸಲಾತಿಗೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Oct 2023 6:25 PM IST
share
ಕ್ರೈಸ್ತರಿಗೆ ಶೇ. 3ರಷ್ಟು ಉದ್ಯೋಗ- ಶಿಕ್ಷಣದಲ್ಲಿ ಮೀಸಲಾತಿಗೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ ಒತ್ತಾಯ

ಮಂಗಳೂರು, ಅ. 17: ಕ್ರೈಸ್ತ ಸಮುದಾಯದ ಜನರಿಗೆ ಪ್ರತ್ಯೇಕವಾಗಿ ಶೇ. 3ರಷ್ಟು ಮೀಸಲಾತಿ ನೀಡಬೇಕು ಮತ್ತು ಕ್ರೈಸ್ತ ಸಮುದಾಯದ ಜನರ ಜನಜೀವನದ ಬಗ್ಗೆ ಅವರ ಆರ್ಥಿಕ ಪರಿಸ್ಥಿತಿ, ಸಾಮಾಜಿಕ ಮತ್ತು ಶಿಕ್ಷಣದ ಬಗ್ಗೆ ಸರ್ವೆಯೊಂದನ್ನು ನಡೆಸಬೇಕೆಂದು ಕೇಂದ್ರದ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಸದಸ್ಯೆ ರಿಚೆನ್ ಲ್ಹಾಮೋ ಅವರನ್ನು ಮಂಗಳೂರಿನ ಕ್ರೈಸ್ತ ಸಮುದಾಯದ ನಿಯೋಗ ಒತ್ತಾಯಿಸಿದೆ.

ಮಂಗಳೂರಿಗೆ ಭೇಟಿ ನೀಡಿದ್ದ ರಿಚೆನ್ ಲ್ಹಾಮೋ ಅವರನ್ನು ವಿಧಾನ ಪರಿಷತ್‌ನ ಮಾಜಿ ಮುಖ್ಯ ಸಚೇತಕ ಐವನ್ ಡಿಸೋಜಾ ನೇತೃತ್ವದ ನಿಯೋಗ ಅವರು ಭೇಟಿ ಮಾಡಿ ಮನವಿ ಸಲ್ಲಿಸಿತು.

ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಕ್ರೈಸ್ತ ಸಮುದಾಯಕ್ಕೆ ದೇಶದ ಆರ್ಥಿಕ ಸಂಪತ್ತನ್ನು ಸಮಾನವಾಗಿ ಹಂಚುವಂತೆ ಶೇ. 3ರಷ್ಟು ಪ್ರತ್ಯೇಕ ಮೀಸಲಾತಿ ನೀಡುವುದು ಇಂದಿನ ಅಗತ್ಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕ್ರೈಸ್ತ ಸಮುದಾಯಕ್ಕೆ ಸೇರಿದ ಅಧಿಕಾರಿಗಳು, ವಿವಿಧ ಕ್ಷೇತ್ರಗಳಲ್ಲಿ ಇಂದು ಅಧಿಕಾರಿಗಳ ಕೊರತೆಯಿದ್ದು, ಸಮಾಜದಲ್ಲಿ ಅಸಮತೋಲಕ್ಕೆ ಕಾರಣವಾಗಿದೆ. ಈ ಕೊರತೆಯನ್ನು ನೀಗಿಸಲು ರಾಜ್ಯ ಸರಕಾರದ ನೌಕರರರು ಮತ್ತು ಅಧಿಕಾರಿಗಳಲ್ಲಿ ಕ್ರೈಸ್ತ ಸಮೌದಾಯದ ಅಧಿಕಾರಿಗಳು ಬರುವಂತಾಗಲು ಪ್ರತ್ಯೇಕವಾಗಿ ಮೀಸಲಾತಿಯ ಅವಶ್ಯಕತೆಯಿದೆ. ಇಂತಹ ಒಂದು ಕಾನೂನು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿದ್ದು, ಕ್ರೈಸ್ತ ಸಮುದಾಯದ ಬೆಳವಣಿ ಗೆಗೆ ಮತ್ತು ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೆ ಅದು ಆಧಾರವಾಗುವುದು ಎಂದು ಐವನ್ ಡಿಸೋಜರವರು ಆಯೋಗದ ಸದಸ್ಯರಿಗೆ ಮನವರಿಕೆ ಮಾಡಿದರು.

ಮನವಿ ಸ್ವೀಕರಿಸಿದ ರಿಚೆನ್ ಲ್ಹಾಮೊ ಈ ಬಗ್ಗೆ ದೇಶ ಮತ್ತು ರಾಜ್ಯಗಳಲ್ಲಿ ಪ್ರತ್ಯೇಕ ಮೀಸಲಾತಿ ಬಗ್ಗೆ ತಾನು ಧ್ವನಿಗೂಡಿಸು ವುದಾಗಿ ಮತ್ತು ಇದರ ಬಗ್ಗೆ ಕ್ರಮ ಕೈಗೊಳ್ಳಲು ಮುಂದಿನ ದಿನಗಳಲ್ಲಿ ಸೂಕ್ತ ಕಾನೂನು ರಚಿಸಲು ತಾನು ಬೆಂಬಲಿಸುವುದಾಗಿ ತಿಳಿಸಿದರು.

ಮನವಿ ಸಲ್ಲಿಸಿದ ನಿಯೋಗದಲ್ಲಿ ಕ್ಯಾಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ, ಉಪಾಧ್ಯಕ್ಷ ಲಾರೆನ್ಸ್ ಡಿ ಸೋಜ, ಕಾರ್ಯದರ್ಶಿ ವಿಲ್ಮ ಮೊಂತೆರೊ, ಕೋಶಾಧಿಕಾರಿ ಫ್ರಾನ್ಸಿಸ್ ಮೊಂತೆರೊ, ಸಹಕಾರ್ಯದರ್ಶಿ ರೋಶನ್ ಮಾರ್ಟಿಸ್, ಸಹ ಕೋಶಾಧಿಕಾರಿ ಸಂತೋಷ್ ಡಿಸೋಜ, ಮಾಜಿ ರಾಜ್ಯ ಆಯೋಗದ ಸದಸ್ಯರಾದ ಮಾರ್ಸೆಲ್ ಮೊಂತೆರೊ, ಕ್ರೈಸ್ತ ಆಯೋಗದ ಅಧ್ಯಕ್ಷರಾದ ರೆ.ಫಾ.ಜೆ.ಬಿ.ಕ್ರಾಸ್ತ, ಕ್ಯಾಥೊಲಿಕ್ ಸಭೆ ಮಾಜಿ ಅಧ್ಯಕ್ಷ ರೊಲ್ಫಿ ಡಿಸೋಜ, ಸಿ.ಎಸ್.ಐನ ಪ್ರಮುಖರಾದ ರೆ.ಪ್ರಭುರಾಜ್, ಜೊಸ್ಸಿ ಅಮನ್ನ, ಕೀರ್ತನ್, ಜೇಮ್ಸ್ ಪ್ರವೀಣ್, ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X