ವಿಟ್ಲ | ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡುವ ಕಮೆಂಟ್: ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡುವಂತಹ ಕಮೆಂಟ್ ಹಾಕಿರುವ ವಿಚಾರವಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ನೀಡಿದ ದೂರಿನಂತೆ 'ಸನಾತನಿ ಸಿಂಹ' ಎಂಬ ಫೇಸ್ ಬುಕ್ ಪೇಜ್ ವಿರುದ್ಧ ಅ.ಕ್ರ: 131/2025, ಕಲಂ 353(2) BNS 2023ರಂತೆ ಪ್ರಕರಣ ದಾಖಲಾಗಿದೆ.
ಸೆ.18ರಂದು ಮೊಬೈಲ್ ನಲ್ಲಿ ಫೇಸ್ ಬುಕ್ ಅಪ್ಲಿಕೇಶನ್ ವೀಕ್ಷಿಸುತ್ತಿದ್ದ Vartha Bharati ಪೇಜ್ ನಲ್ಲಿ ಹಾಕಿದ್ದ ಸುದ್ದಿಗೆ ಸಂಬಂಧಿಸಿದ ಪೋಸ್ಟ್ಗೆ 'ಸನಾತನಿ ಸಿಂಹ' ಎಂಬ ಫೇಸ್ ಬುಕ್ ಪೇಜ್ ನಿಂದ ಸಮುದಾಯಗಳ ನಡುವೆ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡುವ ರೀತಿಯ ಕಮೆಂಟ್ ಹಾಕಿರುವುದು ಕಂಡುಬಂದಿದೆ ಎಂದು ಅಬ್ದುಲ್ ರಹಿಮಾನ್ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





