Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾಂಡೇಶ್ವರ ವೆಟ್‌ವೆಲ್‌ಗೆ ತ್ಯಾಜ್ಯ ನೀರು...

ಪಾಂಡೇಶ್ವರ ವೆಟ್‌ವೆಲ್‌ಗೆ ತ್ಯಾಜ್ಯ ನೀರು ವಿವಾದ: ಮೇಯರ್ ನೇತೃತ್ವದಲ್ಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ3 Sept 2024 6:27 PM IST
share
ಪಾಂಡೇಶ್ವರ ವೆಟ್‌ವೆಲ್‌ಗೆ ತ್ಯಾಜ್ಯ ನೀರು ವಿವಾದ: ಮೇಯರ್ ನೇತೃತ್ವದಲ್ಲಿ ಸಭೆ

ಮಂಗಳೂರು: ಪಾಂಡೇಶ್ವರ ವೆಟ್‌ವೆಲ್‌ಗೆ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಟ್ಯಾಂಕರ್ ಮೂಲಕ ಹರಿಸುತ್ತಿರುವ ವಿವಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮುಂದಾಗಿರುವ ಮಂಗಳೂರು ಮಹಾನಗರ ಪಾಲಿಕೆಯು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರ ನೇತೃತ್ವದಲ್ಲಿ ಮಂಗಳವಾರ ಪಾಲಿಕೆಯಲ್ಲಿ ತುರ್ತು ಸಭೆ ನಡೆಸಿ ಚರ್ಚಿಸಿತು.

ಪಾಂಡೇಶ್ವರ, ಕುದ್ರೋಳಿ, ಜಪ್ಪು, ಬಂಗ್ರಕೂಳೂರು, ತಡಂಬೈಲ್ ವೆಟ್‌ವೆಲ್‌ಗಳ ಪೂರ್ಣ ಕಾರ್ಯಾಚರಣೆಯ ಮೂಲಕ ಎಲ್ಲಾ ಕಡೆ ಸಮಾನವಾಗಿ ಅಧಿಕೃತ ವಾಹನಗಳನ್ನು ಸೂಕ್ತ ನಿಗಾ ವಹಿಸಿ ನಿರ್ವಹಣೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಪಾಂಡೇಶ್ವರ ವೆಟ್‌ವೆಲ್ ವ್ಯಾಪ್ತಿಯ ಜನಸಾಮಾನ್ಯರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪಾಲಿಕೆ ಪಾಂಡೇಶ್ವರ ವೆಟ್‌ವೆಲ್‌ನಲ್ಲಿದ್ದ ದಾಖಲೆಗಳ ಪ್ರಕಾರ 17 ವಾಹನಗಳು ಬಂದು ತ್ಯಾಜ್ಯ ನೀರು ಡಂಪ್ ಮಾಡಲು ಅನುಮತಿ ಇತ್ತು. ಆದರೆ, ಇದರ ಜತೆಗೆ ೯ ಅನಧಿಕೃತ ವಾಹನಗಳಿಂದಲೂ ಒಳಚರಂಡಿ ನೀರನ್ನು ಪಾಂಡೇಶ್ವರ ವೆಟ್‌ವೆಲ್‌ಗೆ ತರಲಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಮೂಲಕ ಇಲ್ಲಿ 26 ವಾಹನಗಳಿಂದ ತಂದ ತ್ಯಾಜ್ಯ ನೀರನ್ನು ಸುರಿಯುತ್ತಿರುವುದರಿಂದ ಒತ್ತಡ ಅಧಿಕವಾಗಿದೆ ಎಂಬ ಅಂಶ ಚರ್ಚೆಯಾಗಿದೆ.

ತತ್‌ಕ್ಷಣಕ್ಕೆ ಜಪ್ಪು ಕಡೆಕಾರ್‌ನಲ್ಲಿರುವ ವೆಟ್‌ವೆಲ್ ಅನ್ನು ಪೂರ್ಣವಾಗಿ ದುರಸ್ತಿ ಮಾಡಿಕೊಳ್ಳಬೇಕಾಗಿದೆ. ಬಳಿಕ 7 ತ್ಯಾಜ್ಯ ನೀರು ತುಂಬಿದ ಟ್ಯಾಂಕರ್‌ಗಳನ್ನು ಅಲ್ಲಿಯೇ ನಿರ್ವಹಣೆ ಮಾಡಬೇಕು. ಉಳಿದಂತೆ 7 ಟ್ಯಾಂಕರ್ ಪಾಂಡೇಶ್ವರ ವೆಟ್‌ವೆಲ್, ೭ ಟ್ಯಾಂಕ್ ಕುದ್ರೋಳಿ ವೆಟ್‌ವೆಲ್‌ನಲ್ಲಿ ನಿರ್ವಹಣೆ ಮಾಡಬೇಕು. ಉಳಿದ 5 ವಾಹನಗಳನ್ನು ಬಂಗ್ರಕೂಳೂರು ವೆಟ್‌ವೆಲ್‌ನಲ್ಲಿ ನಿರ್ವಹಣೆ ಮಾಡಬೇಕು. ಸುರತ್ಕಲ್ ಭಾಗದ ತಡಂಬೈಲ್‌ನಲ್ಲಿರುವ ವೆಟ್‌ವೆಲ್‌ಗೆ ಹೊಸ ಪಂಪ್ ಜೋಡಿಸಿ ಅಲ್ಲಿಗೆ ತ್ಯಾಜ್ಯ ನೀರು ತರಲು ಸಾಧ್ಯಾವಾಗುವ ಹಾಗೆ ವ್ಯವಸ್ಥೆ ಮಾಡುವಂತೆ ಮೇಯರ್ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ತ್ಯಾಜ್ಯ ನೀರನ್ನು ಚರಂಡಿಗೆ ಬಿಡಬಾರದು. ಅಂತಹ ಪ್ರಕರಣ ತಿಳಿದು ಬಂದರೆ ಅಂತಹ ವಾಹನದ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮೇಯರ್ ಸುಧೀರ್ ಶೆಟ್ಟಿ ಮಾತನಾಡಿ, ಪ್ರತೀ ವೆಟ್‌ವೆಲ್‌ಗೆ ಸಿಸಿ ಕ್ಯಾಮರಾ ಅಳವಡಿಸಬೇಕು ಹಾಗೂ ಅದರ ನಿರ್ವಹಣೆ ಕೂಡ ಸರಿಯಾಗಿ ಮಾಡಬೇಕು. ಜತೆಗೆ ಪ್ರತೀ ಟ್ಯಾಂಕರ್‌ಗಳ ಚಲನವಲನದ ಬಗ್ಗೆ ನಿಗಾ ವಹಿಸಲು ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು. ಪಾಲಿಕೆಯಲ್ಲಿರುವ ಕಮಾಂಡ್ ಕಂಟ್ರೋಲ್ ಸೆಂಟರ್ ಮೂಲಕ ಇದನ್ನು ಅವಲೋಕಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತ್ಯಾಜ್ಯ ನೀರು ಸಾಗಾಟ ಮಾಡುವ ಟ್ಯಾಂಕರ್‌ನ ಮಾಲಕರು ಮಾತನಾಡಿ, ಪ್ರತೀ ವಾಹನಕ್ಕೆ ೫೦೦ ರೂ. ಪಾಲಿಕೆಗೆ ಪಾವತಿ ಮಾಡಬೇಕಿದೆ. ಇದು ದುಬಾರಿಯಾಗುತ್ತಿದೆ. ಇದನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು. ಮೇಯರ್ ಉತ್ತರಿಸಿ, ಟ್ಯಾಂಕರ್‌ಗಳ ಬಾಕಿ ಉಳಿಸಿರುವ ಎಲ್ಲಾ ಮೊತ್ತವನ್ನು ಪಾಲಿಕೆಗೆ ತತ್‌ಕ್ಷಣವೇ ಪಾವತಿ ಮಾಡಬೇಕು. ಜನರು-ಪರಿಸರಕ್ಕೆ ಸಮಸ್ಯೆ ಆಗುವ ಹಾಗೆ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ 500 ರೂ. ಇರುವ ದರವನ್ನು ಕಡಿಮೆ ಮಾಡುವ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಉಪಮೇಯರ್ ಸುನೀತಾ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಕಾರ್ಪೊರೇಟರ್‌ಗಳಾದ ಅಬ್ದುಲ್ ಲತೀಫ್, ವೀಣಾಮಂಗಲ, ಜಯಶ್ರೀ ಕುಡ್ವ, ಸಂಗೀತಾ ಆರ್.ನಾಯಕ್, ಶ್ವೇತಾ ಪೂಜಾರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X