Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ...

ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಇತ್ಯರ್ಥ ಆಗದಿದ್ದಲ್ಲಿ ಹೋರಾಟ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

ವಾರ್ತಾಭಾರತಿವಾರ್ತಾಭಾರತಿ21 Oct 2023 2:56 PM IST
share
ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಇತ್ಯರ್ಥ ಆಗದಿದ್ದಲ್ಲಿ ಹೋರಾಟ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

ಉಳ್ಳಾಲ: ಮಂಗಳೂರಿನಿಂದ ಕೇರಳ ಸಂಪರ್ಕ ಕಲ್ಪಿಸುವ ರಾ.ಹೆ.ಅವೈಜ್ಞಾನಿಕವಾಗಿದ್ದು, ಈ ಕಾರಣದಿಂದ ಕೆಲವು ಅಪಘಾತಗಳು ಸಂಭವಿಸಿ ಜೀವ ಹಾನಿ ಆಗುತ್ತಿದೆ.ಉಳ್ಳಾಲಕ್ಕೆ ತೆರಳುವ ವಾಹನಗಳು ವಿರುದ್ಧ ದಿಕ್ಕಿನಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ , ಇದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಕಾರಣ. ಅವರ ಬೇಜವಾಬ್ದಾರಿ ಧೋರಣೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ರಸ್ತೆ ಯನ್ನು ಈ ರೀತಿ ಮಾಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕೋಶಾಧಿಕಾರಿ ಸಲಾಂ ಸಿಎಚ್ ಆರೋಪಿಸಿದರು.

ಅವರು ಉಳ್ಲಾಲ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಎಂದರೆ ಅದರಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಇರಬೇಕು. ಯಾರು ಕೂಡ ರಸ್ತೆ ದಾಟಿ ಹೋಗಬಾರದು.ರಸ್ತೆ ದಾಟಲು ಅಂಡರ್ ಪಾಸ್ ವ್ಯವಸ್ಥೆ ಮಾಡಬೇಕು. ರಸ್ತೆ ಬದಿಯಲ್ಲಿ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ ಇರಬೇಕು. ಬಸ್ ಸಂಚಾರಕ್ಕೆ ಸರ್ವಿಸ್ ರಸ್ತೆ ಪ್ರತ್ಯೇಕ ಇರಬೇಕು. ಇವ್ಯಾವ ವ್ಯವಸ್ಥೆ ಮಾಡದೇ ಸರ್ಕಾರ ಯಾವ ಮಾನದಂಡದ ಮೇಲೆ ಟೋಲ್ ಸಂಗ್ರಹ ಮಾಡುತ್ತದೆ. ಇದು ನ್ಯಾಯ ಕ್ಕೆ ವಿರುದ್ಧ ಅಲ್ಲವೇ ಎಂದು ಪ್ರಶ್ನಿಸಿದ ಅವರು ಈ ಸಮಸ್ಯೆ ಇತ್ಯರ್ಥ ಆಗದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ರಾಷ್ಟ್ರೀಯ ಹೆದ್ದಾರಿ, ಸರ್ವಿಸ್ ಒಂದೇ ಆಗಿದೆ.ಸಟಿ ಬಸ್ ಹೋಗುವುದು ಇದೇ ರಸ್ತೆಯಲ್ಲಿ. ಅವರು ಗಂಟೆ ಗಟ್ಟಲೆ ಒಂದೆಡೆ ಪ್ರಯಾಣಿಕರಿಗಾಗಿ ನಿಲ್ಲಿಸುತ್ತಾರೆ. ಇದರಿಂದ ಉಳಿದ ವಾಹನಗಳಿಗೆ ಸಂಚರಿಸಲು ತೊಂದರೆ ಆಗುತ್ತದೆ. ಈ ಕಾರಣದಿಂದ ಟ್ರಾಫಿಕ್ ಜಾಮ್ ಆಗಾಗ ಇಲ್ಲಿ ಆಗುತ್ತಾ ಇರುತ್ತದೆ. ನೇತ್ರಾವತಿ ಸೇತುವೆ ಬಳಿ ಸರಣಿ ಅಪಘಾತ ನಡೆಯಲು, ಇದಕ್ಕಿಂತ ಮೊದಲು ಆದ ಅಪಘಾತ ದಲ್ಲಿ ಜೀವ ಹಾನಿ ಆಗಲು ಮುಂಭಾಗದಲ್ಲಿ ಸಂಚರಿಸುವ ವಾಹನಗಳು ದಿಡೀರ್ ಸಂಚಾರ ನಿಲ್ಲಿಸಿದ್ದೇ ಕಾರಣ. ರಾಷ್ಟ್ರೀಯ ಹೆದ್ದಾರಿ ಯಲ್ಲಿ ವಾಹನಗಳು ಕೆಟ್ಟು ನಿಲ್ಲಬಾರದು. ಸಂಚಾರದ ಮಧ್ಯೆ ನಿಲ್ಲಿಸಬಾರದು ಎಂಬ ನಿಯಮ ಇದೆ. ಅದಿಲ್ಲಿ ಪಾಲನೆ ಆಗುತ್ತಿಲ್ಲ ಎಂದು ಆರೋಪಿಸಿದರು.

ಪಂಪ್ ವೆಲ್ ನಿಂದ ತಲಪಾಡಿ ವರೆಗೆ ಸರ್ವಿಸ್ ರಸ್ತೆ ಆಗಬೇಕು.ಸಿಟಿ ಬಸ್ ನಿಲುಗಡೆಗೆ ವ್ಯವಸ್ಥೆ ಮಾಡಬೇಕು.ಘನ ವಾಹನಗಳಿಗೆ ತಾಂತ್ರಿಕ ದೋಷ ಕಂಡಲ್ಲಿ ನಿಲುಗಡೆ ಮಾಡಲು ವ್ಯವಸ್ಥೆ ಮಾಡಬೇಕು.ಊರಿನ ನಾಮಫಲಕ ಅಳವಡಿಸುವುದು, ಫುಟ್ ಪಾತ್, ಒಳಚರಂಡಿ, ದಾರಿದೀಪ, ವ್ಯವಸ್ಥೆ ಮಾಡುವ ಮೂಲಕ ಟೋಲ್ ಗೇಟ್ ಶುಲ್ಕ ರದ್ದು ಪಡಿಸಬೇಕು ಎಂದು ಒತ್ತಾಯಿಸಿದ ಅವರು ಈ ಬಗ್ಗೆ ಈಗಾಗಲೇ ಎನ್ ಎಚ್ ಎಐ, ಜಿಲ್ಲಾಧಿಕಾರಿ, ಶಾಸಕ ರಿಗೆ, ಪ್ರಾಧಿಕಾರ ಇಲಾಖೆ ಸಹಿತ ವಿವಿಧ ಇಲಾಖೆಗಳ ಕಚೇರಿಗೆ ಮನವಿ ಅರ್ಪಿಸಲಾಗಿದೆ. ಈ ಬೇಡಿಕೆ ಈಡೇರಿಕೆ ಆಗದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಉಳ್ಳಾಲ ನಗರ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಸಯಾಫ್, ಕೋಶಾಧಿಕಾರಿ ಹುಸೈನ್ ತೊಕ್ಕೊಟ್ಟು, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಸೈಫ್, ಸದಸ್ಯ ಅಶ್ರಫ್ ಅಝೀಝ್ ಅಲೇಕಳ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X