Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಶ್ವದರ್ಜೆಯ ತಂತ್ರಜ್ಞಾನ ಅಭಿವೃದ್ಧಿಗೆ...

ವಿಶ್ವದರ್ಜೆಯ ತಂತ್ರಜ್ಞಾನ ಅಭಿವೃದ್ಧಿಗೆ ಯುವ ಇಂಜಿನಿಯರ್ ಗಳು ಮುಂದಾಗಬೇಕು: ಡಾ. ಸತೀಶ್ ರೆಡ್ಡಿ ಕರೆ

ಎನ್ಐಟಿಕೆ 21ನೇ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ4 Nov 2023 5:20 PM IST
share
ವಿಶ್ವದರ್ಜೆಯ ತಂತ್ರಜ್ಞಾನ ಅಭಿವೃದ್ಧಿಗೆ ಯುವ ಇಂಜಿನಿಯರ್ ಗಳು ಮುಂದಾಗಬೇಕು: ಡಾ. ಸತೀಶ್ ರೆಡ್ಡಿ ಕರೆ

ಮಂಗಳೂರು, ನ.4: ಭಾರತ ಸಾಧಿಸಿರುವ ತಂತ್ರಜ್ಞಾನದ ಪರಿಣಾಮವಾಗಿ ಜಾಗತಿಕವಾಗಿ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಲ್ಪಟ್ಟಿದೆ. ಎನ್ಐಟಿಕೆ ಯಂತಹ ಸಂಸ್ಥೆಗಳು ವಿಶ್ವದಲ್ಲೇ ಅಗ್ರಸ್ಥಾನದ ವಿನೂತನ ಆವಿಷ್ಕಾರಗಳನ್ನು ಮಾಡುವ ಕೇಂದ್ರ ಗಳಾಗಬೇಕು ಎಂದು ಭಾರತದ ವೈಮಾನಿಕ ಸೊಸೈಟಿಯ ಅಧ್ಯಕ್ಷ, ಭಾರತ ಸರಕಾರದ ರಕ್ಷಣಾ ಸಚಿವರ ಮಾಜಿ ವೈಜ್ಞಾನಿಕ ಸಲಹೆಗಾರ ಮತ್ತು ಮಾಜಿ ಡಿಆರ್ ಡಿಒ ಮಾಜಿ ಅಧ್ಯಕ್ಷ ಡಾ.ಜಿ.ಸತೀಶ್ ರೆಡ್ಡಿ ಹೇಳಿದ್ದಾರೆ.

ಸುರತ್ಕಲ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್.ಐ.ಟಿ.ಕೆ.) ಕ್ರೀಡಾ ಸಂಕೀರ್ಣದಲ್ಲಿ ಶನಿವಾರ ಹಮ್ಮಿಕೊಂ ಡಿದ್ದ ಎನ್.ಐ.ಟಿ.ಕೆ 21ನೇ ವಾರ್ಷಿಕ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಭಾರತ ಕಳೆದ ಕೆಲವು ದಶಕಗಳಿಂದ ಬಾಹ್ಯಾಕಾಶ, ರಕ್ಷಣಾ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಗುರುತಿಸಲ್ಪಡುವ ಗಮನಾರ್ಹ ಸಾಧನೆ ಮಾಡಿದೆ. ಉಪಗ್ರಹಗಳ ಉಡಾವಣೆಯಿಂದ ಆರಂಭಿಸಿ ಇತ್ತೀಚೆಗೆ ಅತ್ಯಾಧುನಿಕ ವಿಶ್ವ ದರ್ಜೆಯ ಅಗ್ನಿ, ಪೃಥ್ವಿಯಂತಹ ಖಂಡಾಂತರ ಕ್ಷಿಪಣಿಗಳು, ವಿಕ್ರಾಂತ್ ನಂತಹ ವಿಮಾನ ವಾಹಕ ನೌಕೆಗಳು, ಅತ್ಯಾಧುನಿಕ ಸಬ್ ಮೆರಿನ್ ಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿದೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದಾರೆ.

ದೇಶದಲ್ಲಿ 2016ರಲ್ಲಿ 415 ಸ್ಟಾರ್ಟ್ ಅಪ್ ಕಂಪೆನಿ ಗಳಿದ್ದವು. ಪ್ರಸಕ್ತ ಒಂದು ಲಕ್ಷ ಸ್ಟಾರ್ಟ್ ಅಪ್ ಕಂಪೆನಿಗಳು ಕಾರ್ಯ ನಿರ್ವಹಿಸುತ್ತಿವೆ. ಹಿಂದೆ ದೇಶದಲ್ಲಿ ಬೆರಳೆಣಿಕೆಯಷ್ಟು ಐಐಟಿಗಳಿದ್ದವು. ಆದರೆ ಇತ್ತೀಚೆಗೆ ಪ್ರತಿ ರಾಜ್ಯದಲ್ಲೂ ಎನ್ ಐಟಿ, ಐಐಟಿ ಆರಂಭಗೊಂಡಿದೆ. ಭಾರತ ಜಾಗತಿಕವಾಗಿ ಸ್ಪರ್ಧೆಯನ್ನು ಎದುರಿಸುವ ಮನೋಭಾವವನ್ನು ಹೊಂದಿರುವ ಯುವ ತಂತ್ರಜ್ಞರನ್ನು ಹೊಂದಿದೆ ಎಂದು ಸತೀಶ್ ರೆಡ್ಡಿ ಅಭಿಪ್ರಾಯಿಸಿದ್ದಾರೆ.

ಗೌರವ ಅತಿಥಿಯಾಗಿ ಭಾಗವಹಿಸಿದ್ದ ಸಿ.ಎಸ್.ಐ.ಆರ್., ಎನ್.ಐ.ಐ.ಎಸ್.ಎಸ್. ಅಧ್ಯಕ್ಷ ಡಾ.ಆನಂದ ಕೃಷ್ಣನ್ ಮಾತನಾಡಿ, ದೇಶದಲ್ಲಿ ಶೇ.54 ನಗರಗಳು ನೀರಿನ ಕೊರತೆ ಎದುರಿಸುತ್ತಿದೆ. ಜಾಗತಿಕವಾಗಿ ಹವಾಮಾನ ವೈಪರೀತ್ಯದ ಸಮಸ್ಯೆ ಎದುರಿಸುತ್ತಿದೆ. ದೇಶದಲ್ಲಿ 1960ರಲ್ಲಿ ಎದುರಿಸುತ್ತಿರುವ ಆಹಾರ ಸಮಸ್ಯೆಯಲ್ಲಿ ಸುಧಾರಣೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಆಹಾರದ ಉತ್ಪಾದನೆಯಾಗುತ್ತಿದೆ. ಆದರೆ ಭವಿಷ್ಯದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಆಹಾರದ ಸವಾಲು ಎದುರಾಗಬಹುದು ಎಂದರು.

ಹೆಚ್ಚುತ್ತಿರುವ ಡಯಾಬಿಟಿಸ್, ಹೃದ್ರೋಗ, ಅನಿಮಿಯ ಮೊದಲಾದ ಆರೋಗ್ಯ ಸಮಸ್ಯೆಗಳು ನಮ್ಮ ಮುಂದಿವೆ. ಭವಿಷ್ಯದಲ್ಲಿ ಇಂಧನ ಸಮಸ್ಯೆ ಎದುರಿಸಲು ಜೈವಿಕ ಇಂಧನ, ಎಥೆನಾಲ್ ಅನ್ನು ತ್ಯಾಜ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸ ಬೇಕಾಗಿದೆ ಎಂದು ಆನಂದ ಕೃಷ್ಣ ನ್ ತಿಳಿಸಿದ್ದಾರೆ.

ಸಮಾರಂಭದಲ್ಲಿ 134 ಪಿ.ಎಚ್.ಡಿ., 961 ಸ್ನಾತಕೋತ್ತರ, 914 ಪದವೀಧರರು ಸೇರಿದಂತೆ ಒಟ್ಟು 2000 ಮಂದಿಗೆ ಪದವಿ ಪ್ರದಾನ ಮಾಡಲಾಯಿತು.

ಎನ್.ಐ.ಟಿ.ಕೆ. ನಿರ್ದೇಶಕ ಪ್ರೊ.ಬಿ.ವಿ.ರವಿ ಸ್ವಾಗತಿಸಿದರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X