Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಗೋಡೆಗೆ ನಾಲ್ಕು ಲೀಟರ್ ಬಣ್ಣ...

ಒಂದು ಗೋಡೆಗೆ ನಾಲ್ಕು ಲೀಟರ್ ಬಣ್ಣ ಹಚ್ಚಲು 233 ಕಾರ್ಮಿಕರು!

ವಾರ್ತಾಭಾರತಿವಾರ್ತಾಭಾರತಿ6 July 2025 5:42 PM IST
share
ಒಂದು ಗೋಡೆಗೆ ನಾಲ್ಕು ಲೀಟರ್ ಬಣ್ಣ ಹಚ್ಚಲು 233 ಕಾರ್ಮಿಕರು!

ಭೋಪಾಲ್: ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯ ಸಕಂಡಿ ಎಂಬ ಗ್ರಾಮದ ಸರ್ಕಾರಿ ಶಾಲೆಯ ಒಂದು ಗೋಡೆಗೆ ಕೇವಲ ನಾಲ್ಕು ಲೀಟರ್ ಬಣ್ಣ ಬಳಿಯಲು 168 ಮಂದಿ ಕಾರ್ಮಿಕರು ಮತ್ತು 65 ಮೇಸ್ತ್ರಿಗಳನ್ನು ಬಳಸಿಕೊಂಡ ವಿಚಿತ್ರ- ಸ್ವಾರಸ್ಯಕರ ಪ್ರಕರಣ ಬೆಳಕಿಗೆ ಬಂದಿದೆ.

ಬ್ಯೋಹರಿ ಅಸೆಂಬ್ಲಿಯ ಈ ಬಿಲ್ ಶನಿವಾರ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಅಗಿದ್ದು, ಕೇವಲ ನಾಲ್ಕು ಲೀಟರ್ ಬಣ್ಣ ಹಚ್ಚಲು 1.07 ಲಕ್ಷ ರುಪಾಯಿಗಳನ್ನು ವೆಚ್ಚ ಮಾಡಿರುವ ಹಗರಣವನ್ನು ಬೆಳಕಿಗೆ ತಂದಿದೆ. ನಿಪನಿಯ ಗ್ರಾಮದ ಇನ್ನೊಂದು ಶಾಲೆಯಲ್ಲಿ 20 ಲೀಟರ್ ಪೆಯಿಂಟ್ ಮಾಡಲು 2.3 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ.

ಸಕಂಡಿ ಶಾಲೆಯ ಒಂದು ಗೋಡೆಯ ಪೈಂಟಿಂಗ್ಗೆ 168 ಕಾರ್ಮಿಕರು ಮತ್ತು 65 ಮೇಸ್ತ್ರಿಗಳು ಶ್ರಮ ವಹಿಸಿದ್ದರೆ, ನಿಪಾನಿಯ ಶಾಲೆಯ 10 ಕಿಟಕಿ ಮತ್ತು ನಾಲ್ಕು ಬಾಗಿಲುಗಳಿಗೆ ಹಣ್ಣ ಬಳಿಯಲು 275 ಕಾರ್ಮಿಕರು ಮತ್ತು 150 ಮೇಸ್ತ್ರಿಗಳು ಕೆಲಸ ಮಾಡಿದ್ದಾರೆ.

ಮತ್ತೂ ಸ್ವಾರಸ್ಯಕರವೆಂದರೆ ಸುಧಾರಕ್ ಕನ್ಸ್ಟ್ರಕ್ಷನ್ ಎಂಬ ಸಂಸ್ಥೆ ಈ ಕಾಮಗಾರಿ ನಿರ್ವಹಿಸಿದ್ದು, 2025ರ ಮೇ 5ರಂದು ಈ ಬಿಲ್ ಸೃಷ್ಟಿಸಿದೆ. ಆದರೆ ಬಿಲ್ ನೀಡುವ ಒಂದು ತಿಂಗಳು ಮೊದಲು ಅಂದರೆ ಏಪ್ರಿಲ್ 4ರಂದು ಇದನ್ನು ನಿಪನಿಯಾ ಶಾಲೆಯ ಪ್ರಾಚಾರ್ಯರು ದೃಢೀಕರಿಸಿದ್ದಾರೆ.

ಬಿಲ್ ಜತೆಗೆ ಕಾನೂನುಬದ್ಧವಾಗಿ ಬಣ್ಣ ಹಚ್ಚುವ ಮೊದಲು ಹಾಗೂ ನಂತರ ತೆಗೆದ ಛಾಯಾಚಿತ್ರ ಇರಬೇಕು. ಆದರೆ ಯಾವುದೇ ಫೋಟೊಗಳು ಇಲ್ಲದೆಯೂ ಬಿಲ್ ಅನುಮೋದನೆ ಪಡೆದಿದೆ. ಈ ವೈರಲ್ ಬಿಲ್ಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ವಾಸ್ತವಾಂಶಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಫೂಲ್ಸಿಂಗ್ ಮಾರ್ಪಾಚಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X