Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಯಾಣಿಕನನ್ನು 50 ಕಿ.ಮೀ. ಹಿಂದೆ...

ಪ್ರಯಾಣಿಕನನ್ನು 50 ಕಿ.ಮೀ. ಹಿಂದೆ ಬಿಟ್ಟು ಚಲಿಸಿದ್ದ ಬಸ್: ರೂ. 2 ಲಕ್ಷ ಪರಿಹಾರ ಘೋಷಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ14 Jan 2024 3:26 PM IST
share
ಪ್ರಯಾಣಿಕನನ್ನು 50 ಕಿ.ಮೀ. ಹಿಂದೆ ಬಿಟ್ಟು ಚಲಿಸಿದ್ದ ಬಸ್: ರೂ. 2 ಲಕ್ಷ ಪರಿಹಾರ ಘೋಷಿಸಿದ ನ್ಯಾಯಾಲಯ

ಮುಂಬೈ: ಬಸ್ ಒಂದು 69 ವರ್ಷದ ಹಿರಿಯ ನಾಗರಿಕರೊಬ್ಬರನ್ನು ಅವರ ಇಳಿಯಬೇಕಿದ್ದ ಸ್ಥಳಕ್ಕಿಂತ 50 ಕಿಮೀ ಹಿಂದೆ ಬಿಟ್ಟು ತೆರಳಿದ್ದ ಕಾರಣಕ್ಕೆ ಅವರಿಗೆ ರೂ. 2 ಲಕ್ಷ ಪರಿಹಾರ ಮೊತ್ತ ನೀಡುವಂತೆ ಟ್ರಾವೆಲ್ ಏಜೆನ್ಸಿಯೊಂದಕ್ಕೆ ಗ್ರಾಹಕರ ಆಯೋಗವು ಸೂಚಿಸಿದೆ. ದೂರುದಾರರಿಗೆ ಮಾರ್ಗ ಬದಲಾವಣೆಯ ಕುರಿತು ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ ಹಾಗೂ ಪರ್ಯಾಯ ವ್ಯವಸ್ಥೆಯನ್ನು ಮಾಡಿರಲಿಲ್ಲ ಎಂಬ ಅಂಶವನ್ನು ಗಮನಕ್ಕೆ ತೆಗೆದುಕೊಂಡ ನ್ಯಾಯಾಲಯವು, ಟಿಕೆಟ್ ಗೆ ರೂ. 745 ಪಾವತಿಸಿದ್ದ 69 ವರ್ಷದ ಹಿರಿಯ ನಾಗರಿಕರಿಗೆ ಆಗಿರುವ ಅನನುಕೂಲ ಹಾಗೂ ತೊಂದರೆಯ ಕಾರಣಕ್ಕೆ ಅವರಿಗೆ ರೂ. 2 ಲಕ್ಷ ಪರಿಹಾರ ನೀಡಬೇಕೆಂದು ಟ್ರಾವೆಲ್ ಏಜೆನ್ಸಿಗೆ ಆದೇಶಿಸಿದೆ ಎಂದು TOI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಾಂಡಿವಿಲಿ ಜಿಲ್ಲೆಯ ನಿವಾಸಿ ಶೇಖರ್ ಹಟ್ಟಂಗಡಿ ಎಂಬ ದೂರುದಾರರು 2018ರಲ್ಲಿ ಸೂರತ್ ನಿಂದ ತಮ್ಮ ನಿವಾಸಕ್ಕೆ ಮರಳುವಾಗ, ಅವರು ಪ್ರಯಾಣಿಸುತ್ತಿದ್ದ ಬಸ್ ಅವರನ್ನು 50 ಕಿಮೀ ಹಿಂದೆಯೇ ಇಳಿಸಿ ಮುಂದೆ ಸಾಗಿತ್ತು. ಈ ಕುರಿತ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ಆಯೋಗವು, “ದೂರುದಾರರು ಅವೇಳೆಯಲ್ಲಿ ದೂರದ ಸ್ಥಳವನ್ನು ತಮ್ಮ ಸ್ವಂತ ವ್ಯವಸ್ಥೆಯೊಂದಿಗೆ ಪ್ರಯಾಣಿಸುವಂತಾಗಿದೆ. ಇದರಿಂದ ಹಿರಿಯ ನಾಗರಿಕರೂ ಆದ ದೂರುದಾರರಿಗೆ ಮಾನಸಿಕ ಒತ್ತಡ ಹಾಗೂ ತೊಂದರೆ ಉಂಟಾಗಿದೆ. ಹೀಗಾಗಿ ದೂರುದಾರರು ಪರಿಹಾರಕ್ಕೆ ಅರ್ಹರಾಗಿದ್ದಾರೆ” ಎಂದು ಘೋಷಿಸಿದೆ.

ಈ ಪರಿಹಾರ ಮೊತ್ತವನ್ನು ಮಂತಿಸ್ ಟೆಕ್ನಾಲಜೀಸ್ ಪ್ರೈ ಲಿ., ಪೌಲೊ ಟ್ರಾವೆಲ್ಸ್ ಪ್ರೈ. ಲಿ. ಹಾಗೂ ಪೌಲೊ ಟ್ರಾವೆಲ್ಸ್ ನ ಸಿಇಒ ಮೈರೊನ್ ಪೆರೀರಾ ಪಾವತಿಸಬೇಕಿದೆ. ದೂರದಾರರಿಗೆ ಪ್ರಯಾಣ ವೆಚ್ಚ ಹಾಗೂ ನ್ಯಾಯಾಲಯದ ವೆಚ್ಚವಾಗಿ ರೂ. 2000 ಅನ್ನು ಹೆಚ್ಚುವರಿಯಾಗಿ ಪಾವತಿಸಬೇಕು ಎಂದೂ ಆಯೋಗವು ನಿರ್ದೇಶನ ನೀಡಿದೆ.

ಈ ಕುರಿತು ನವೆಂಬರ್ 12, 2021ರಂದು ಹಟ್ಟಂಗಡಿ ಅವರು ಮುಂಬೈ ಉಪನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ಮೆಟ್ಟಿಲೇರಿದ್ದರು.

ಮುಂಬೈ-ಅಹದಾಬಾದ್ ಹೆದ್ದಾರಿಯ ರಿಪೇರಿ ಕಾಮಗಾರಿ ನಡೆಯುತ್ತಿರುವ ಕಾರಣ ನೀಡಿ ಮುಖ್ಯ ರಸ್ತೆಯಿಂದ ಮಾರ್ಗ ಬದಲಾವಣೆ ಮಾಡಿದ್ದ ಬಸ್ ಚಾಲಕ, ಸೂರತ್ ನಿಂದ ಪ್ರಯಾಣಿಸುತ್ತಿದ್ದ ಶೇಖರ್ ಹಟ್ಟಂಗಡಿಯನ್ನು ಥಾಣೆಗಿಂತಲೂ ದೂರದಲ್ಲಿ ಕೆಳಗಿಳಿಸಿ ಹೋಗಿದ್ದ. ಇದರಿಂದ ಅವರು ಅವೇಳೆಯಲ್ಲಿ 50 ಕಿಮೀ ದೂರ ಕ್ರಮಿಸಿ ತಮ್ಮ ನಿವಾಸವನ್ನು ತಲುಪುವಂತಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X