Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲೇ ದಿಲ್ಲಿ...

ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲೇ ದಿಲ್ಲಿ ವಿವಿ ಪ್ರೊಫೆಸರ್ ಗೆ ಎಬಿವಿಪಿ ಸದಸ್ಯೆ, ವಿದ್ಯಾರ್ಥಿನಿಯಿಂದ ಕಪಾಳಮೋಕ್ಷ

ವಾರ್ತಾಭಾರತಿವಾರ್ತಾಭಾರತಿ17 Oct 2025 9:13 AM IST
share
ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲೇ ದಿಲ್ಲಿ ವಿವಿ ಪ್ರೊಫೆಸರ್ ಗೆ ಎಬಿವಿಪಿ ಸದಸ್ಯೆ, ವಿದ್ಯಾರ್ಥಿನಿಯಿಂದ ಕಪಾಳಮೋಕ್ಷ

ಹೊಸದಿಲ್ಲಿ: ದಿಲ್ಲಿ ವಿಶ್ವವಿದ್ಯಾನಿಲಯದ ಡಾ.ಭೀಮರಾವ್ ಅಂಬೇಡ್ಕರ್ ಕಾಲೇಜಿನ ಪ್ರೊಫೆಸರ್ ಒಬ್ಬರಿಗೆ ದಿಲ್ಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಜಂಟಿ ಕಾರ್ಯರ್ಶಿ, ಎಬಿವಿಪಿ ಸದಸ್ಯೆ ದೀಪಿಕಾ ಝಾ ಕಪಾಳಮೋಕ್ಷ ಮಾಡಿದ್ದಲ್ಲದೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಇತರ ಕಾರ್ಯಕರ್ತರು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಗುರುವಾರ ನಡೆದಿದೆ.

ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಪ್ರೊಫೆಸರ್ ನಡುವೆ ಮಾತಿಕ ಚಕಮಕಿ ಮತ್ತು ಹಲ್ಲೆಯ ಘಟನೆಯನ್ನು ಬಿಂಬಿಸುವ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವವಿದ್ಯಾನಿಲಯದ ಬೋಧಕ ಸಿಬ್ಬಂದಿ ಈ ಘಟನೆಯನ್ನು ವ್ಯಾಪಕವಾಗಿ ಖಂಡಿಸಿದ್ದಾರೆ.

Hello legends

The @DUSUofficial JS has slapped a professor in the department of commerce, Bhim Rao Ambedkar College.

Student Politics needs a change.

Please I hope this gets traction.#DU #delhiuniversity #Delhi pic.twitter.com/XAlNOzSm6b

— Vijaygarv (@TheVijaygarv) October 16, 2025

"ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎನ್‍ಎಸ್‍ಯುಐ ಅಭ್ಯರ್ಥಿಯೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಇತರ ಎರಡು ಸ್ಥಾನಗಳಿಗೆ ಎಬಿವಿಪಿ ಸದಸ್ಯರು ಆಯ್ಕೆಯಾಗಿದ್ದರು. ವಿಜೇತರಾದ ಎನ್‍ಎಸ್‍ಯುಐ ಸದಸ್ಯರಿಗೆ ಎಬಿವಿಪಿ ಬೆಂಬಲಿಗರು ಹಲ್ಲೆ ಮಾಡಿದ್ದು, ಈ ಸಂಬಂಧ ದೂರು ನೀಡಲಾಗಿದೆ" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ದಿಲ್ಲಿ ವಿವಿ ಪ್ರೊಫೆಸರ್ ಒಬ್ಬರು ವಿರಿಸಿದ್ದಾರೆ.

ಹಲ್ಲೆಗೊಳಗಾದ ಪ್ರೊಫೆಸರ್ ಅವರನ್ನು ಸುಜೀತ್ ಕುಮಾರ್ ಎಂದು ಗುರುತಿಸಲಾಗಿದ್ದು, ಕಾಲೇಜಿನ ಶಿಸ್ತುಸಮಿತಿ ಸಂಚಾಲಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಎಬಿವಿಪಿ ಸದಸ್ಯರು ಇತರ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಆಗುತ್ತಿರುವ ಕ್ಯಾಂಪಸ್ ಹಿಂಸೆಯ ಘಟನೆಗಳ ಬಗ್ಗೆ ಸಮಿತಿ ತನಿಖೆ ನಡೆಸುತ್ತಿದೆ ಎಂದು ಡೆಮಾಕ್ರಟಿಕ್ ಟೀಚರ್ಸ್ ಫ್ರಂಟ್ (ಡಿಟಿಎಫ್) ಪ್ರಕಟಿಸಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಿಲ್ಲಿ ವಿವಿ ಶಿಕ್ಷಕರ ಸಂಘ, ಕುಲಪತಿಗಳಿಗೆ ಪತ್ರ ಬರೆದಿದೆ.

ಪ್ರೊಫೆಸರ್ ತಮ್ಮ ಕರ್ತವ್ಯದಲ್ಲಿದ್ದಾಗ ಕಾಲೇಜಿನ ಒಳಗೆಯೇ ಕೆಲ ವಿದ್ಯಾರ್ಥಿಗಳು ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಗಮನಕ್ಕೆ ಬಂದಿದೆ. ಶಿಕ್ಷಣ ಸಂಸ್ಥೆಗಳಲಿ ಅಂಥ ಹಿಂಸಾಕೃತ್ಯಗಳಿಗೆ ಅವಕಾಶವಿಲ್ಲ. ಇದು ಬೋಧಕ ಸಮುದಾಯದ ಘನತೆಗೆ ಧಕ್ಕೆ ತರುವ ಕೃತ್ಯವಾಗಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಭೀತಿ ಮತ್ತು ಅಭದ್ರತೆಯನ್ನು ಸೃಷ್ಟಿಸುವ ಹುನ್ನಾರೆಂದು ಡಿಯುಟಿಎ ಹೇಳಿಕೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X