ಟ್ವಿಟರ್ನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ: ತಮಿಳುನಾಡು ಬಿಜೆಪಿ ನಾಯಕನ ಬಂಧನ
ಚೆನ್ನೈ,ಜೂ.17: ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿಯನ್ನು ಹರಡಿದ್ದ ಆರೋಪದಲ್ಲಿ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯರನ್ನು ಪೊಲೀಸರು ಬಂಧಿಸಿದ್ದಾರೆ.
![ಟ್ವಿಟರ್ನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ: ತಮಿಳುನಾಡು ಬಿಜೆಪಿ ನಾಯಕನ ಬಂಧನ ಟ್ವಿಟರ್ನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ: ತಮಿಳುನಾಡು ಬಿಜೆಪಿ ನಾಯಕನ ಬಂಧನ](https://www.varthabharati.in/h-upload/2023/06/17/1153481-sg-suryah-twitter-1228500-1686982548.webp)
ಚೆನ್ನೈ,ಜೂ.17: ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿಯನ್ನು ಹರಡಿದ್ದ ಆರೋಪದಲ್ಲಿ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಚೆನ್ನೈ,ಜೂ.17: ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿಯನ್ನು ಹರಡಿದ್ದ ಆರೋಪದಲ್ಲಿ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಮದುರೈನಲ್ಲಿ ಸ್ವಚ್ಛತಾ ಕಾರ್ಮಿಕನೋರ್ವ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಟ್ವೀಟಿಸಿದ್ದ ಸೂರ್ಯ,ಈ ಬಗ್ಗೆ ವೌನ ವಹಿಸಿರುವುದಕ್ಕಾಗಿ ಮದುರೈ ಸಂಸದ ವೆಂಕಟೇಶನ್ (ಸಿಪಿಎಂ) ವಿರುದ್ಧ ದಾಳಿ ನಡೆಸಿದ್ದರು.
ಜಿಲ್ಲೆಯಲ್ಲಿ ಇಂತಹ ಯಾವುದೇ ಘಟನೆ ನಡೆದಿರುವುದನ್ನು ಮದುರೈ ಜಿಲ್ಲಾ ಪೊಲೀಸರು ನಿರಾಕರಿಸಿದ್ದಾರೆ.
ಟ್ವಿಟರ್ನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ: ತಮಿಳುನಾಡು ಬಿಜೆಪಿ ನಾಯಕನ ಬಂಧನ
ಸೂರ್ಯ ಬಂಧನವನ್ನು ಬಿಜೆಪಿ ಖಂಡಿಸಿದೆ. ವಾಕ್ ಸ್ವಾತಂತ್ರವನ್ನು ಹತ್ತಿಕ್ಕಲು ಸರಕಾರವು ಪೊಲೀಸರನ್ನು ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ನಲ್ಲಿ ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು,ಡಿಎಂಕೆಯ ಮಿತ್ರಪಕ್ಷಗಳಾದ ಕಮ್ಯುನಿಸ್ಟ್ ರ ಅಸಹ್ಯ ದ್ವಂದ್ವ ನೀತಿಗಳನ್ನು ಬಹಿರಂಗಗೊಳಿಸಿದ್ದು ಸೂರ್ಯ ಮಾಡಿರುವ ಏಕೈಕ ತಪ್ಪಾಗಿತ್ತು ಎಂದು ಹೇಳಿದ್ದಾರೆ.
Next Story