Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ANIಗೆ ಸಂಬಂಧಿಸಿದ ಪುಟವನ್ನು ತೆಗೆಯಿರಿ :...

ANIಗೆ ಸಂಬಂಧಿಸಿದ ಪುಟವನ್ನು ತೆಗೆಯಿರಿ : ವಿಕಿಪೀಡಿಯಕ್ಕೆ ದಿಲ್ಲಿ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ16 Oct 2024 8:51 PM IST
share
ANIಗೆ ಸಂಬಂಧಿಸಿದ ಪುಟವನ್ನು ತೆಗೆಯಿರಿ : ವಿಕಿಪೀಡಿಯಕ್ಕೆ ದಿಲ್ಲಿ ಹೈಕೋರ್ಟ್ ಆದೇಶ

ಹೊಸದಿಲ್ಲಿ : ಏಶ್ಯನ್ ನ್ಯೂಸ್ ಇಂಟರ್‌ನ್ಯಾಶನಲ್ (ANI) ಸುದ್ದಿ ಸಂಸ್ಥೆಯು ವಿಕಿಮೀಡಿಯ ವಿರುದ್ಧ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಕಿಪೀಡಿಯ ಪುಟವನ್ನು 36 ಗಂಟೆಗಳ ಒಳಗೆ ತೆಗೆದುಹಾಕುವಂತೆ ದಿಲ್ಲಿ ಹೈಕೋರ್ಟ್ ಬುಧವಾರ ವಿಕಿಮೀಡಿಯ ಫೌಂಡೇಶನ್‌ಗೆ ಆದೇಶ ನೀಡಿದೆ.

ಈ ಪುಟವು ‘‘ಮೇಲ್ನೋಟಕ್ಕೆ ನಿಂದನೆಯಂತೆ ಕಂಡುಬರುತ್ತಿದೆ’’ ಮತ್ತು ನ್ಯಾಯಾಲಯದ ಕಲಾಪಗಳಲ್ಲಿ ವಿಕಿಪೀಡಿಯದ ಹಸ್ತಕ್ಷೇಪಕ್ಕೆ ಸಮವಾಗಿದೆ ಎಂದು ಮುಖ್ಯ ನ್ಯಾಯಾಧೀಶ ಮನಮೋಹನ್ ಮತ್ತು ನ್ಯಾಯಾಧೀಶ ತುಷಾರ್ ರಾವ್ ಗಡೇಲ ಅವರನ್ನೊಳಗೊಂಡ ನ್ಯಾಯಪೀಠವೊಂದು ಹೇಳಿತು. ‘‘ನ್ಯಾಯಾಲಯದಲ್ಲಿ ಇರುವ ವಿಷಯದ ಬಗ್ಗೆ ಮಾತನಾಡಬಾರದು ಎಂಬ ನಿಯಮವನ್ನು ಪ್ರತಿವಾದಿಯು ಇಲ್ಲಿ ಉಲ್ಲಂಘಿಸಿರುವಂತೆ ಕಂಡುಬರುತ್ತಿದೆ’’ ಎಂದು ನ್ಯಾಯಾಲಯ ಹೇಳಿತು.

ANI ಸುದ್ದಿ ಸಂಸ್ಥೆಯು ಕೇಂದ್ರ ಸರಕಾರದ ತುತ್ತೂರಿಯಾಗಿದೆ ಎಂಬ ಬರಹವನ್ನು ವಿಕಿಪೀಡಿಯ ಪುಟದಲ್ಲಿ ಪ್ರಕಟಿಸಿರುವುದಕ್ಕಾಗಿ ಸುದ್ದಿ ಸಂಸ್ಥೆಯು ವಿಕಿಪೀಡಿಯದ ಮಾತೃ ಸಂಸ್ಥೆ ವಿಕಿಮೀಡಿಯ ಫೌಂಡೇಶನ್ ವಿರುದ್ಧ ಆಗಸ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.

ANI ಸುದ್ದಿ ಸಂಸ್ಥೆಯ 2020ರ ಚಟುವಟಿಕೆಗಳನ್ನು ಪರಿಶೀಲನೆಗೆ ಒಳಪಡಿಸುವ ಹೊಸ ಮಾಹಿತಿಗಳು ಸುದ್ದಿ ಸಂಸ್ಥೆಯ ವಿಕಿಪೀಡಿಯ ಪುಟದಲ್ಲಿ ಪ್ರಕಟಗೊಳ್ಳಲು ಆರಂಭಿಸಿದಾಗ, ಬಳಕೆದಾರರು ಜಿದ್ದಿಗೆ ಬಿದ್ದವರಂತೆ ಮಾಹಿತಿಗಳನ್ನು ಪರ-ವಿರುದ್ಧವಾಗಿ ತಿದ್ದಲು ಆರಂಭಿಸಿದರು. ಒಂದು ಕಡೆಯಲ್ಲಿ ಅನುಭವಿಗಳು ಮಾಹಿತಿಗಳನ್ನು ತಿದ್ದಿದರೆ, ಇನ್ನೊಂದು ಕಡೆ ಆಗಷ್ಟೇ ಖಾತೆಗಳನ್ನು ತೆರೆದವರು ಮಾಹಿತಿಗಳನ್ನು ತಮಗೆ ಬೇಕಾದಂತೆ ಬದಲಾಯಿಸಿದರು. ಈ ಹೊಸ ಖಾತೆದಾರರು ANI ವಿಕಿಪೀಡಿಯ ಪುಟದ ಮಾಹಿತಿಗಳನ್ನು ಮಾತ್ರ ತಿದ್ದುತ್ತಿದ್ದರು. ಇದು ತಿಂಗಳುಗಳ ಕಾಲ ನಡೆಯಿತು.

ಪುಟವನ್ನು ತಿದ್ದಿರುವ ಚಂದಾದಾರರ ವಿವರಗಳನ್ನು ಎರಡು ವಾರಗಳಲ್ಲಿ ಬಹಿರಂಗಗೊಳಿಸುವಂತೆ ಹೈಕೋರ್ಟ್ ವಿಕಿಪೀಡಿಯಕ್ಕೆ ಆಗಸ್ಟ್ 20ರಂದು ನಿರ್ದೇಶನ ನೀಡಿತ್ತು. ಆದರೆ, ಈ ಆದೇಶವನ್ನು ವಿಕಿಪೀಡಿಯವು ಪಾಲಿಸಿಲ್ಲ ಎಂಬುದಾಗಿ ಬಳಿಕ ANI ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತು.

ಸೆಪ್ಟಂಬರ್ 5ರಂದು, ಭಾರತದಲ್ಲಿ ವಿಕಿಪೀಡಿಯದ ವಾಣಿಜ್ಯ ವ್ಯವಹಾರಗಳನ್ನು ಮುಚ್ಚುವಂತೆ ಸರಕಾರಕ್ಕೆ ನಿರ್ದೇಶನ ನೀಡುವುದಾಗಿ ನ್ಯಾಯಾಧೀಶ ನವೀನ್ ಚಾವ್ಲಾ ಅವರ ನ್ಯಾಯಪೀಠವು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X