Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಟದಲ್ಲಿ ಇನ್ನೋರ್ವ ನೀಟ್ ಆಕಾಂಕ್ಷಿ...

ಕೋಟದಲ್ಲಿ ಇನ್ನೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಈ ವರ್ಷ ಸಾವಿಗೆ ಶರಣಾದ 28ನೇ ಕೋಚಿಂಗ್ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ28 Nov 2023 9:19 PM IST
share
ಕೋಟದಲ್ಲಿ ಇನ್ನೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಕೋಟ (ರಾಜಸ್ಥಾನ): ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಗೆ ತಯಾರಿ ನಡೆಸುತ್ತಿದ್ದ 20 ವರ್ಷ ಪ್ರಾಯದ ವಿದ್ಯಾರ್ಥಿಯೊಬ್ಬರು ರಾಜಸ್ಥಾನದ ಕೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಪಶ್ಚಿಮ ಬಂಗಾಳದ ಬೀರ್‌ಭೂಮಿ ಜಿಲ್ಲೆಯ ಫೌರೀದ್ ಹುಸೈನ್ ಎಂಬುದಾಗಿ ಗುರುತಿಸಲಾಗಿದೆ. ಅವರು ಒಂದು ವರ್ಷದಿಂದ ಕೋಟದ ಕೋಚಿಂಗ್ ಕೇಂದ್ರವೊಂದರಲ್ಲಿ ನೀಟ್ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಆತ್ಮಹತ್ಯಾ ಪತ್ರ ಪೊಲೀಸರಿಗೆ ಸಿಕ್ಕಿಲ್ಲ.

ಹುಸೈನ್ ಕೋಟದಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ 28ನೇ ವಿದ್ಯಾರ್ಥಿ ಆಗಿದ್ದಾರೆ. ಕೋಟವು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳು ಹಾಗೂ ನಾಗರಿಕ ಸೇವೆಗಳ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ನೆರವು ನೀಡುವ ಕೋಚಿಂಗ್ ಸಂಸ್ಥೆಗಳ ಕೇಂದ್ರವಾಗಿದೆ. ಅಲ್ಲಿಗೆ ಪ್ರತಿವರ್ಷ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹೋಗುತ್ತಾರೆ.

ಕೋಟದಲ್ಲಿ ಈ ವರ್ಷ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಗಳು 2015ರ ಬಳಿಕ ಅತಿ ಹೆಚ್ಚು ಎಂಬುದಾಗಿ ಆಗಸ್ಟ್‌ನಲ್ಲಿ ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿತ್ತು. ಕೋಟದಲ್ಲಿ 2015ರಲ್ಲಿ 17 ವಿದ್ಯಾರ್ಥಿಗಳು, 2016ರಲ್ಲಿ 16 ವಿದ್ಯಾರ್ಥಿಗಳು, 2018ರಲ್ಲಿ 20 ವಿದ್ಯಾರ್ಥಿಗಳು ಮತ್ತು 2019ರಲ್ಲಿ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದಾಖಲೆಗಳು ಹೇಳುತ್ತವೆ.

ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, 2020 ಮತ್ತು 2021ರಲ್ಲಿ ಕೋಟಾದ ಕೋಚಿಂಗ್ ಸಂಸ್ಥೆಗಳು ಮುಚ್ಚಿದ್ದವು.

ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಿಯಂತ್ರಿಸಲು ರಾಜಸ್ಥಾನ ಸರಕಾರವು ರಾಜಸ್ಥಾನ ಕೋಚಿಂಗ ಇನ್‌ಸ್ಟಿಟ್ಯೂಟ್ಸ್ (ನಿಯಂತ್ರಣ) ಮಸೂದೆ, 2023 ಮತ್ತು ರಾಜಸ್ಥಾನ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ನಿಯಂತ್ರಣ ಪ್ರಾಧಿಕಾರ ಮಸೂದೆ, 2023 ಮಸೂದೆಗಳನ್ನು ಪರಿಚಯಿಸಿದೆ. ಆದರೆ, ಈ ಮಸೂದೆಗಳು ಇನ್ನಷ್ಟೇ ಅಂಗೀಕಾರಗೊಳ್ಳಬೇಕಾಗಿವೆ.

ಪ್ರಸ್ತಾಪಿತ ಮಸೂದೆಗಳು ಖಾಸಗಿ ಕೋಚಿಂಗ್ ಸಂಸ್ಥೆಗಳು ವಿಧಿಸುವ ಶುಲ್ಕಗಳು ಮತ್ತು ಅಧ್ಯಯನ ಸಾಮಗ್ರಿಗಳಿಗೆ ವಿದ್ಯಾರ್ಥಿಗಳು ಪಾವತಿಸಬೇಕಾಗಿರುವ ಶುಲ್ಕಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಬೇಕೆಂದು ಶಿಫಾರಸು ಮಾಡುತ್ತವೆ.

Tags

Kota
share
ವಾರ್ತಾಭಾರತಿ
ವಾರ್ತಾಭಾರತಿ
Next Story
X