Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಧಿ 35ಎ ಜಮ್ಮುಕಾಶ್ಮೀರದ ಹೊರಗಿನ...

ವಿಧಿ 35ಎ ಜಮ್ಮುಕಾಶ್ಮೀರದ ಹೊರಗಿನ ನಿವಾಸಿಗಳ ಪ್ರಮುಖ ಹಕ್ಕುಗಳನ್ನು ಕಸಿದಿತ್ತು: ಸುಪ್ರೀಂ ಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ29 Aug 2023 12:25 PM IST
share
ವಿಧಿ 35ಎ ಜಮ್ಮುಕಾಶ್ಮೀರದ ಹೊರಗಿನ ನಿವಾಸಿಗಳ ಪ್ರಮುಖ ಹಕ್ಕುಗಳನ್ನು ಕಸಿದಿತ್ತು: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಸಂವಿಧಾನದ 35ಎ ವಿಧಿಯು ಜಮ್ಮು ಕಾಶ್ಮೀರದಲ್ಲಿ ವಾಸವಾಗಿಲ್ಲದ ಜನರನ್ನು ಕೆಲ ಪ್ರಮುಖ ಸಂವಿಧಾನಿಕ ಹಕ್ಕುಗಳಿಂದ ವಂಚಿತರನ್ನಾಗಿಸಿದೆ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದ್ದಾರೆ.

“ಅವಕಾಶಗಳಲ್ಲಿ ಸಮಾನತೆ, ರಾಜ್ಯ ಸರ್ಕಾರದಲ್ಲಿ ಉದ್ಯೋಗ ಹಾಗೂ ಭೂಮಿ ಖರೀದಿಸುವ ಹಕ್ಕು-ಇವೆಲ್ಲವನ್ನೂ ಈ ವಿಧಿ ನಾಗರಿಕರಿಂದ ಸೆಳೆಯುತ್ತದೆ… ಏಕೆಂದರೆ ನಿವಾಸಿಗಳು (ಜಮ್ಮು ಕಾಶ್ಮೀರದ) ವಿಶೇಷ ಹಕ್ಕುಗಳನ್ನು ಹೊಂದಿದ್ದರು ಮತ್ತು ಅನಿವಾಸಿಗಳನ್ನು ಹೊರತುಪಡಿಸಲಾಗಿತ್ತು,” ಎಂದು ಅವರು ಹೇಳಿದರು.

ಅದೇ ಸಮಯ ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತ ಉನ್ನತ ವೇದಿಕೆಯಲ್ಲಿ ಭಾರತದ ಸಂವಿಧಾನವಿದೆ ಎಂಬ ಕೇಂದ್ರದ ಅಭಿಪ್ರಾಯಕ್ಕೂ ಅವರು ಸಹಮತ ವ್ಯಕ್ತಪಡಿಸಿದರು.

ಮುಖ್ಯ ನ್ಯಾಯಮೂರ್ತಿಗಳ ಈ ಹೇಳಿಕೆಗಳು, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿಧಿ 370 ಅನ್ನು ರದ್ದುಗೊಳಿಸಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ 11ನೇ ದಿನದಂದು ಬಂದಿವೆ.

ವಿಧಿ 370 ಜೊತೆಗೆ ಆಗಸ್ಟ್‌ 2019ರಲ್ಲಿ ರದ್ದುಗೊಳಿಸಲಾಗಿದ್ದ ವಿಧಿ 35ಎ, ಜಮ್ಮು ಕಾಶ್ಮೀರದ ಶಾಸಕಾಂಗಕ್ಕೆ ಖಾಯಂ ನಿವಾಸಿಗಳನ್ನು ಗುರುತಿಸಲು ಹಾಗೂ ಅವರಿಗೆ ಸರಕಾರಿ ಉದ್ಯೋಗ, ಸ್ಥಿರಾಸ್ತಿ ಮುಂತಾದವುಗಳ ಕುರಿತಂತೆ ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಒದಗಿಸಿತ್ತು.

“ವಿಧಿ 16(1) ಅಡಿಯ ಹಕ್ಕನ್ನು ಕಸಿಯಲಾಗಿದ್ದು, ಅದು ರಾಜ್ಯ ಸರ್ಕಾರದ ಉದ್ಯೋಗ. ರಾಜ್ಯ ಸರ್ಕಾರದ ಉದ್ಯೋಗ ಪಡೆಯುವ ಹಕ್ಕನ್ನು ಒದಗಿಸಿತ್ತು. ಇದನ್ನು ಸಂರಕ್ಷಿಸಲಾಗಿದೆಯಾದರೂ ಇನ್ನೊಂದೆಡೆ ವಿಧಿ 35ಎ ನೇರವಾಗಿ ಆ ಮೂಲಭೂತ ಹಕ್ಕನ್ನು ಕಸಿದಿದೆ ಮತ್ತು ಈ ನಿಟ್ಟಿನಲ್ಲಿ ಪ್ರಶ್ನಿಸುವುದರಿಂದಲೂ ರಕ್ಷಣೆ ಪಡೆದಿದೆ,” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

“ಅಂತೆಯೇ ವಿಧಿ 19 ದೇಶದ ಯಾವುದೇ ಭಾಗದಲ್ಲಿ ಜೀವಿಸುವ ಹಕ್ಕನ್ನು ಒದಗಿಸುತ್ತದೆ. ಹೀಗೆ ಮೂರು ಮೂಲಭೂತ ಹಕ್ಕುಗಳನ್ನು 35ಎ ಕಸಿದಿದೆ. ನ್ಯಾಯಾಂಗ ಪರಿಶೀಲನೆಯ ಅಧಿಕಾರವನ್ನೂ ಸೆಳೆಯಲಾಗಿದೆ,” ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಮಾತನಾಡಿ, “ಸರ್ಕಾರದ ಕ್ರಮವು ಜಮ್ಮು ಕಾಶ್ಮೀರದ ಜನರನ್ನು ದೇಶದ ಇತರ ಭಾಗದ ಜನರಂತೆಯೇ ಪರಿಗಣಿಸುತ್ತದೆ. ಜಮ್ಮು ಕಾಶ್ಮೀರದಲ್ಲಿ ಈ ಹಿಂದೆ ಜಾರಿಯಾಗದ ಕಲ್ಯಾಣ ಯೋಜನೆಗಳನ್ನೂ ಜಾರಿಗೊಳಿಸಲು ಅನುವು ಮಾಡಿಕೊಡುತ್ತದೆ ಎಂದರು. ವಿಧಿ 370 ರದ್ದುಗೊಳಿಸುವ ತನಕ ಭಾರತದ ಸಂವಿಧಾನಕ್ಕೆ ಮಾಡಿದ ಯಾವುದೇ ತಿದ್ದುಪಡಿ ಜಮ್ಮು ಕಾಶ್ಮೀರಕ್ಕೆ ಅನ್ವಯವಾಗುತ್ತಿರಲಿಲ್ಲ. ಆದ್ದರಿಂದ 2019ರ ತನಕ ಅಲ್ಲಿ ಶಿಕ್ಷಣ ಹಕ್ಕು ಕಾಯಿದೆ ಜಾರಿಗೊಳಿಸಲಾಗಿರಲಿಲ್ಲ,” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X