ಬಾಲಸೋರ್ ತ್ರಿವಳಿ ರೈಲು ದುರಂತ: ರೈಲ್ವೆಯ 7 ಉದ್ಯೋಗಿಗಳ ಅಮಾನತು
![ಬಾಲಸೋರ್ ತ್ರಿವಳಿ ರೈಲು ದುರಂತ: ರೈಲ್ವೆಯ 7 ಉದ್ಯೋಗಿಗಳ ಅಮಾನತು ಬಾಲಸೋರ್ ತ್ರಿವಳಿ ರೈಲು ದುರಂತ: ರೈಲ್ವೆಯ 7 ಉದ್ಯೋಗಿಗಳ ಅಮಾನತು](https://www.varthabharati.in/h-upload/2023/07/12/1166527-whatsapp-image-2023-07-12-at-112753-pm.webp)
Photo: PTI
ಭುವನೇಶ್ವರ : ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಲು ಕಾರಣವಾದ ಕರ್ತವ್ಯ ಲೋಪದ ಆರೋಪದಲ್ಲಿ ರೈಲ್ವೆಯ ಕನಿಷ್ಠ 7 ಮಂದಿ ಉದ್ಯೋಗಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳು ಎಚ್ಚರ ವಹಿಸಿದ್ದರೆ, ಈ ಅಪಘಾತವನ್ನು ತಪ್ಪಿಸಬಹುದಾಗಿತ್ತು ಎಂದು ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ‘‘ಸಿಬಿಐಯಿಂದ ಬಂಧಿತರಾದ ಮೂವರು ಉದ್ಯೋಗಿಗಳು ಸೇರಿದಂತೆ ಒಟ್ಟು 7 ಮಂದಿ ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದೆ.
ನಿಯಮದ ಪ್ರಕಾರ 24 ಗಂಟೆಗಳ ಕಾಲ ಬಂಧನದಲ್ಲಿದ್ದರೆ, ಉದ್ಯೋಗಿಗಳನ್ನು ಅಮಾನತು ಮಾಡಲಾಗುತ್ತದೆ’’ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಸಿಬಿಐ ಹಿರಿಯ ಸೆಕ್ಷನ್ ಎಂಜಿನಿಯರ್ (ಸಿಗ್ನಲ್) ಅರುಣ್ ಕುಮಾರ್ ಮಹಾಂತ, ಸೆಕ್ಷನ್ ಎಂಜಿನಿಯರ್ ಮುಹಮ್ಮದ್ ಅಮೀರ್ ಖಾನ್ ಹಾಗೂ ಟೆಕ್ನೀಷಿಯನ್ ಪಪ್ಪು ಕುಮಾರ್ ಅವರನ್ನು ಬಂಧಿಸಿತ್ತು.
Next Story