Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಮತಪಟ್ಟಿ ಪರಿಷ್ಕರಣೆ: ಗಣತಿ...

ಬಿಹಾರ ಮತಪಟ್ಟಿ ಪರಿಷ್ಕರಣೆ: ಗಣತಿ ಫಾರ್ಮ್ ಸಲ್ಲಿಸಿದವರೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ18 July 2025 7:28 AM IST
share
ಬಿಹಾರ ಮತಪಟ್ಟಿ ಪರಿಷ್ಕರಣೆ: ಗಣತಿ ಫಾರ್ಮ್ ಸಲ್ಲಿಸಿದವರೆಷ್ಟು ಗೊತ್ತೇ?

ಹೊಸದಿಲ್ಲಿ: ಚುನಾವಣಾ ಆಯೋಗ ಬಿಹಾರದಲ್ಲಿ ಕೈಗೊಂಡಿರುವ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಒಟ್ಟು 7.9 ಕೋಟಿ ಮತದಾರರ ಪೈಕಿ ಶೇಕಡ 5.8ರಷ್ಟು ಮಂದಿ ಅಥವಾ 45.8 ಲಕ್ಷ ಮತದಾರರು ತಮ್ಮ ಗಣತಿ ಫಾರ್ಮ್ ಇನ್ನೂ ಸಲ್ಲಿಸಿಲ್ಲ ಎಂಬ ಅಂಶವನ್ನು ಚುನಾವಣಾ ಆಯೋಗ ಬಹಿರಂಗಪಡಿಸಿದೆ. ಗಣತಿ ಫಾರ್ಮ್ ಸಲ್ಲಿಕೆಗೆ ಜುಲೈ 25 ಕೊನೆಯ ದಿನವಾಗಿದೆ.

ಸುಮಾರು 7.1 ಕೋಟಿ ಮತದಾರರು ಅಂದರೆ ಶೇಕಡ 89.7ರಷ್ಟು ಮತದಾರರು ಅರ್ಜಿ ನಮೂನೆಗಳನ್ನು ಸಲ್ಲಿಸಿದ್ದಾರೆ. ಶೇಕಡ 4.5ರಷ್ಟು ಮಂದಿ ತಮ್ಮ ವಿಳಾಸಗಳಲ್ಲಿ ಪತ್ತೆ ಇಲ್ಲ. ಬಹುಶಃ ಇವರಲ್ಲಿ ಮೃತಪಟ್ಟಿರುವವರು, ಕಾಯಂ ಆಗಿ ಸ್ಥಳಾಂತರಗೊಂಡವರು ಅಥವಾ ಹಲವು ಕಡೆಗಳಲ್ಲಿ ನೋಂದಾಯಿಸಿಕೊಂಡಿರುವವರು ಸೇರಿದ್ದಾರೆ ಎಂದು ಆಯೋಗ ಗುರುವಾರ ವಿವರಣೆ ನೀಡಿದೆ.

ಬೂತ್ ಮಟ್ಟದ ಅಧಿಕಾರಿಗಳಿಗೆ ಕಡ್ಡಾಯಪಡಿಸಿದಂತೆ ಮೂರು ಬಾರಿ ಭೇಟಿ ನೀಡಿದಾಗಲೂ ಮತದಾರರು ದಾಖಲಾಗಿರುವ ವಿಳಾಸಗಳಲ್ಲಿ ಪತ್ತೆಯಾಗಿಲ್ಲ. ಈ ಮಾಹಿತಿಯನ್ನು ರಾಜಕೀಯ ಪಕ್ಷಗಳ ಜಿಲ್ಲಾ ಅಧ್ಯಕ್ಷರುಗಳಿಗೆ ಮತ್ತು ಬೂತ್ ಮಟ್ಟದ ಏಜೆಂಟರಿಗೆ ಶುಕ್ರವಾರದ ಬಳಿಕ ರವಾನಿಸಲಾಗುವುದು. ಅಂಥ ಮತದಾರರ ಸ್ಥಿತಿಗತಿಯ ಬಗ್ಗೆ ಅವರು ಅಂತಿಮ ಗಡುವಾದ ಜುಲೈ 25ರ ಒಳಗೆ ನಿಖರ ಮಾಹಿತಿ ನೀಡಬೇಕಾಗುತ್ತದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಜುಲೈ 25ರ ಮುನ್ನ ಗಣತಿ ಫಾರ್ಮ್ ನೀಡುವ ಎಲ್ಲರ ಹೆಸರುಗಳನ್ನು ಜುಲೈ 25ರ ಒಳಗೆ ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಿ ಆಗಸ್ಟ್ 1ರಂದು ಇದನ್ನು ಪ್ರಕಟಿಸಲಾಗುವುದು. ಇಸಿಐನೆಟ್ ಆ್ಯಪ್ ನಲ್ಲಿ ಅಥವಾ ಚುನಾವಣಾ ಆಯೋಗದ ಮತದಾರರ ಪೋರ್ಟೆಲ್ ನಲ್ಲಿ ಮತದಾರರು ತಮ್ಮ ಗಣತಿ ಫಾರ್ಮ್ ಗಳ ಸ್ಥಿತಿಗತಿಯನ್ನು ಪರಿಶೀಲಿಸಬಹುದು ಎಂದು ಹೇಳಿದೆ.

ಚುನಾವಣಾ ಆಯೋಗ ಈಗಾಗಲೇ ಬಿಹಾರದ ಹೊರಗೆ ಇರುವ ವಲಸೆ ಕಾರ್ಮಿಕರನ್ನು ಸಂಪರ್ಕಿಸಿ, ತಮ್ಮ ಮೊಬೈಲ್ ಫೋನ್ ಗಳ ಮೂಲಕ ಆನ್ಲೈನ್ ನಲ್ಲಿ ಗಣತಿ ಫಾರ್ಮ್ ಗಳನ್ನು ಇಸಿಐನೆಟ್ ಆ್ಯಪ್ ಮೂಲಕ ಸಲ್ಲಿಸುವಂತೆ ಸೂಚಿಸಿದೆ ಎಂದು ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X