Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ಟೋಬರ್‌ನಲ್ಲಿ ಬಿಎಸ್ಎನ್ಎಲ್ 4ಜಿ ಸೇವೆ...

ಅಕ್ಟೋಬರ್‌ನಲ್ಲಿ ಬಿಎಸ್ಎನ್ಎಲ್ 4ಜಿ ಸೇವೆ ಆರಂಭ?

ವಾರ್ತಾಭಾರತಿವಾರ್ತಾಭಾರತಿ19 Aug 2024 8:08 PM IST
share
ಅಕ್ಟೋಬರ್‌ನಲ್ಲಿ ಬಿಎಸ್ಎನ್ಎಲ್ 4ಜಿ ಸೇವೆ ಆರಂಭ?

ಹೊಸದಿಲ್ಲಿ : ಸರಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ಲಿ.(ಬಿ ಎಸ್ ಎನ್ ಎಲ್) ಶೀಘ್ರವೇ ದೇಶಾದ್ಯಂತ 4ಜಿ ಸೇವೆಗಳನ್ನು ಆರಂಭಿಸಲು ಸಜ್ಜಾಗಿದೆ. ಅದು ಈಗಾಗಲೇ ಎಲ್ಲ ವಲಯಗಳಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ಪೂರ್ಣಗೊಳಿಸಿದೆ.

ಹಿರಿಯ ಅಧಿಕಾರಿಯೋರ್ವರ ಪ್ರಕಾರ ಪ್ರಾಯೋಗಿಕ ಫಲಿತಾಂಶಗಳು ಸಾಕಷ್ಟು ತೃಪ್ತಿಕರವಾಗಿರುವುದರಿಂದ ಬಿ ಎಸ್ ಎನ್ ಎಲ್ ತನ್ನ ಬಹುನಿರೀಕ್ಷಿತ 4ಜಿ ಸೇವೆಗಳನ್ನು ಈ ವರ್ಷದ ಅಕ್ಟೋಬರ್ನಲ್ಲಿ ಆರಂಭಿಸಬಹುದು. ಅದು ಈವರೆಗೆ ದೇಶಾದ್ಯಂತ ಸುಮಾರು 25,000 4ಜಿ ಟವರ್ಗಳನ್ನು ಸ್ಥಾಪಿಸಿದೆ. ತನ್ನ ಗ್ರಾಹಕರಿಗೆ 4ಜಿ ಸಿಮ್‌ ಗಳ ರವಾನೆಯನ್ನು ಆರಂಭಿಸಿದೆ.

ರಿಲಯನ್ಸ್ ಜಿಯೊ, ವೊಡಾಫೋನ್ ಮತ್ತು ಏರ್ ಟೆಲ್ ನಂತಹ ಖಾಸಗಿ ಟೆಲಿಕಾಂ ಕಂಪನಿಗಳು ತಮ್ಮ 5ಜಿ ಸೇವೆಗಳನ್ನು ಆರಂಭಿಸುತ್ತಿರುವಾಗ ಬಿ ಎಸ್ ಎನ್ ಎಲ್ ಈಗಲೂ ಪ್ರಾಥಮಿಕವಾಗಿ 2ಜಿ ಮತ್ತು 3ಜಿ ನೆಟ್ವರ್ಕಿ ಗಳನ್ನು ನೀಡುತ್ತಿದೆ. ಪರಿಣಾಮವಾಗಿ ಅದರ ಗ್ರಾಹಕರು ಖಾಸಗಿ ಕಂಪನಿಗಳ ಪಾಲಾಗುತ್ತಿದ್ದಾರೆ. ಕಳೆದ ವಿತ್ತ ವರ್ಷದಲ್ಲಿ ಅದು 1.8 ಕೋಟಿ ಗ್ರಾಹಕರನ್ನು ಕಳೆದುಕೊಂಡಿದ್ದು, ಅದರ ಗ್ರಾಹಕರ ಸಂಖ್ಯೆ 8,80,60,000ಕ್ಕೆ ಕುಸಿದಿದೆ. ಅದರ ಮಾರುಕಟ್ಟೆ ಪಾಲು ಕೂಡ ಎಪ್ರಿಲ್ 2024ರಲ್ಲಿ ಶೇ.7.46ಕ್ಕೆ ಇಳಿಕೆಯಾಗಿದ್ದರೆ ಪ್ರತಿಸ್ಪರ್ಧಿಗಳಾಗಿರುವ ಖಾಸಗಿ ಟೆಲಿಕಾಂ ಕಂಪನಿಗಳು ತಮ್ಮ ಬುನಾದಿಯನ್ನು ಇನ್ನಷ್ಟು ಭದ್ರಪಡಿಸಿಕೊಳ್ಳುತ್ತಿವೆ

ಸ್ಥಳೀಯ ನೆಟ್ವರ್ಕ್ ಅಥವಾ ಭಾರತದ ಸ್ವಂತ 4ಜಿ ತಂತ್ರಜ್ಞಾನವನ್ನು ಬಳಸಬೇಕು ಎಂದು ಬಿಎಸ್ಎನ್ಎಲ್ಗೆ ಸರಕಾರದ ನಿರ್ದೇಶನವು ಅದು 4ಜಿ ಸೇವೆಗಳನ್ನು ಆರಂಭಿಸುವಲ್ಲಿ ವಿಳಂಬಕ್ಕೆ ಕಾರಣವಾಗಿದೆ.

ಟಾಟಾ ಗ್ರೂಪ್ ನೇತೃತ್ವದ ಒಕ್ಕೂಟವು ದೇಶಾದ್ಯಂತ 4ಜಿ ಸೈಟ್ಗಳನ್ನು ಸ್ಥಾಪಿಸಲು ಮೇ 2023ರಲ್ಲಿ ಬಿ ಎಸ್ ಎನ್ ಎಲ್ ನಿಂದ 15,000 ಕೋಟಿ ರೂ.ಗಳ ಬೇಡಿಕೆಯನ್ನು ಪಡೆದುಕೊಂಡಿದ್ದು, ತೇಜಸ್ ನೆಟ್ವರ್ಕ್ ಮತ್ತು ಸರಕಾರಿ ಬೆಂಬಲಿತ ಸಿ-ಡಾಟ್ ಅಗತ್ಯ ಉಪಕರಣಗಳು ಮತ್ತು ತಂತ್ರಜ್ಞಾನವನ್ನು ಒದಗಿಸುತ್ತಿವೆ.

ಬಿ ಎಸ್ ಎನ್ ಎಲ್ ಪಂಜಾಬಿನಲ್ಲಿ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (ಟಿಸಿಎಸ್) ಮತ್ತು ಸಿ-ಡಾಟ್ ನೇತೃತ್ವದ ಒಕ್ಕೂಟ ಸ್ಥಳೀಯವಾಗಿ ಅಭಿವೃದ್ಧಿಗೊಳಿಸಿದ ತಂತ್ರಜ್ಞಾನವನ್ನು ಬಳಸಿಕೊಂಡು 4ಜಿ ಸೇವೆಗಳನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದು, ಅಲ್ಲಿ ಸುಮಾರು ಎಂಟು ಲಕ್ಷ ಚಂದಾದಾರರನ್ನು ಹೊಂದಿದೆ. ಕಂಪನಿಯು ಪ್ರಸ್ತುತ ಭಾರತದಾದ್ಯಂತ 4ಜಿ ಮತ್ತು 5ಜಿ ಸೇವೆಗಳಿಗಾಗಿ ಒಂದು ಲಕ್ಷ ಟವರ್ಗಳನ್ನು ನಿಯೋಜಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X