Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾರ್ಷಿಕ 20,000ಕ್ಕೂ ಅಧಿಕ ಭಾರತೀಯ...

ವಾರ್ಷಿಕ 20,000ಕ್ಕೂ ಅಧಿಕ ಭಾರತೀಯ ಕಾರ್ಮಿಕರ ರವಾನೆಗೆ ಇಟಲಿಯೊಂದಿಗೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ28 Dec 2023 9:38 PM IST
share

ಹೊಸದಿಲ್ಲಿ: ಭಾರತ ಮತ್ತು ಇಟಲಿ ನಡುವೆ ವಲಸೆ ಮತ್ತು ಚಲನಶೀಲತೆ ಒಪ್ಪಂದಕ್ಕೆ ಕೇಂದ್ರ ಸಂಪುಟವು ಬುಧವಾರ ಅನುಮೋದನೆ ನೀಡಿದೆ. ಈ ಒಪ್ಪಂದದಡಿ ಪ್ರತಿವರ್ಷ ಇಟಲಿಗೆ 8,000 ಹಂಗಾಮಿ ಕಾರ್ಮಿಕರು ಮತ್ತು 12,000 ಕಾಯಂ ಕಾರ್ಮಿಕರನ್ನು ಕಳುಹಿಸಲಾಗುವುದು.

ಕೇಂದ್ರದ ಪ್ರಕಾರ ಒಪ್ಪಂದವು ʼಪ್ಲೋಸ್ ಡಿಕ್ರಿʼಯ ಹಾಲಿ ಕಾರ್ಮಿಕ ಚಲನಶೀಲತೆ ಮಾರ್ಗಗಳಡಿ ಅಧ್ಯಯನದ ನಂತರದ ಉದ್ಯೋಗಾವಕಾಶಗಳು, ಇಂಟರ್ನ್ ಶಿಪ್ಗಳು ಮತ್ತು ವೃತ್ತಿಪರ ತರಬೇತಿಗಳಿಗಾಗಿ ಕಾರ್ಯವಿಧಾನಗಳು ಸೇರಿದಂತೆ ಪ್ರಸಕ್ತ ಇಟಲಿ ವೀಸಾ ಪದ್ಧತಿಯನ್ನು ಒಳಗೊಂಡಿರುತ್ತದೆ.

ʼಫ್ಲೋಸ್ ಡಿಕ್ರಿʼ ಇಟಲಿ ಸರಕಾರವು ಒದಗಿಸುವ ವಾರ್ಷಿಕ ಅವಕಾಶವಾಗಿದ್ದು,ಹಂಗಾಮಿ ಮತ್ತು ಕಾಯಂ ದುಡಿಮೆಗಾಗಿ ಹಾಗೂ ಸ್ವಾಯತ್ತ ಚಟುವಟಿಕೆಗಳನ್ನು ಆರಂಭಿಸಲು ಕೆಲಸದ ಕಾರಣಗಳಿಂದಾಗಿ ಇಟಲಿಯನ್ನು ಪ್ರವೇಶಿಸಬಹುದಾದ ಐರೋಪ್ಯ ಒಕ್ಕೂಟೇತರ ಪ್ರಜೆಗಳ ಗರಿಷ್ಠ ಸಂಖ್ಯೆಯನ್ನು ನಿಗದಿಗೊಳಿಸುತ್ತದೆ.

ಹಂಗಾಮಿ ಕಾರ್ಮಿಕರು ವರ್ಷದ ಕೆಲವು ಸಮಯಗಳಲ್ಲಿ ಕೆಲಸವನ್ನು ಪಡೆಯುವ ತಾತ್ಕಾಲಿಕ ಉದ್ಯೋಗಿಗಳಾಗಿದ್ದರೆ ಕಾಯಂ ಕಾರ್ಮಿಕರಿಗೆ ಅವರ ಉದ್ಯೋಗದಾತರು ಕಾಯಂ ಅಥವಾ ನಿಯಮಿತ ಉದ್ಯೋಗವನ್ನು ಒದಗಿಸುತ್ತಾರೆ.

ಒಪ್ಪಂದವು ಐರೋಪ್ಯ ರಾಷ್ಟ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರೈಸಿದ ಬಳಿಕ ವೃತ್ತಿಪರ ಅನುಭವವನ್ನು ಪಡೆಯಲು ಇಟಲಿಯಲ್ಲಿ 12 ತಿಂಗಳವರೆಗೆ ವಾಸವಾಗಿರಲು ಅವಕಾಶವನ್ನೂ ನೀಡುತ್ತದೆ.

ಒಪ್ಪಂದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದ ಸಾಕೇತ ಗೊಖಲೆಯವರು, ಇದು ಭಾರತದಲ್ಲಿ ಭಾರತೀಯರಿಗೆ ಉದ್ಯೋಗಾವಕಾಶಗಳ ಕೊರತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

“ ಮೋದಿ ಸರಕಾರದಡಿ ಇಂದು ಭಾರತದಲ್ಲಿ ನಿರುದ್ಯೋಗ ಸ್ಥಿತಿ ಎಷ್ಟೊಂದು ಕೆಟ್ಟಿದೆಯೆಂದರೆ ನಾವು ಈಗ ಇತರ ದೇಶಗಳಿಗೆ ಭಾರತೀಯ ಕಾರ್ಮಿಕರನ್ನು ರಫ್ತು ಮಾಡುತ್ತಿದ್ದೇವೆ” ಎಂದು ಹೇಳಿರುವ ಅವರು, ”ಇದು ವಿಶ್ವಗುರು ಲಕ್ಷಣವೇ?” ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X