ತಮಿಳುನಾಡು | ದಿಂಬಂ ಘಾಟ್ನಲ್ಲಿ ಕಂದಕಕ್ಕೆ ಉರುಳಿದ ಕಾರು; ಅಪಾಯದಿಂದ ಪಾರಾದ ಪ್ರಯಾಣಿಕರು

ಚಾಮರಾಜನಗರ : ಹಾಸನದಿಂದ ತಮಿಳುನಾಡಿನ ತಿರುಚ್ಚಿಗೆ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ಘಾಟ್ ನಲ್ಲಿ ನಡೆದಿದೆ.
ಹಾಸನದಿಂದ ಆರು ಜನರು ಕಾರಿನಲ್ಲಿ ಚಾಮರಾಜನಗರ ಮೂಲಕ ತಮಿಳುನಾಡಿನ ತಿರುಚ್ಚಿಗೆ ಪ್ರಯಾಣ ಬೆಳಸಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದಿಂಬಂ ಘಾಟ್ನ ಮೊದಲ ಸುತ್ತಿನಲ್ಲಿ ಪಲ್ಟಿಯಾಗಿದೆ.
ಅದೃಷ್ಟವಷಾತ್ ಕಾರಿನಲ್ಲಿದ್ವವರಿಗೆ ಯಾವುದೇ ಪ್ರಾಣಪಾಯವಿದಲ್ಲದೆ, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ತಮಿಳುನಾಡು ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story







